ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2026-27ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಜಿಲ್ಲೆಯಲ್ಲಿರುವ ಪ್ರತಿ ಕೈಮಗ್ಗ, ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಲ್ಲಿ ತೊಡಗಿರುವ ನೇಕಾರರಿಗೆ ವಾರ್ಷಿಕ ರೂ. 5000/-ಗಳ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಮಾಹಿತಿಯನ್ನು ಆಪ್‌ಲೋಡ್ ಮಾಡಲು ಅನುಕೂಲವಾಗುವಂತೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈಗಾಗಲೇ 2025-26ನೇ ಸಾಲಿನಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದ ಜಿಲ್ಲೆಯ ಕೈಮಗ್ಗ, ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳ ಮಾಲೀಕರು, ನೇಕಾರ ಕಾರ್ಮಿಕರು ಮತ್ತೊಮ್ಮೆ ಅರ್ಜಿಗಳನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಹಾಗೂ ಪ್ರಸ್ತುತ 2026-27ನೇ ಸಾಲಿನಲ್ಲಿ ಹೊಸದಾಗಿ ವಿದ್ಯುತ್ ಮಗ್ಗ ಚಟುವಟಿಕೆಯನ್ನು ಪ್ರಾರಂಭಿಸಿರುವ ಕೈಮಗ್ಗ, ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳ ಮಾಲೀಕರು, ನೇಕಾರ ಕಾರ್ಮಿಕರು ಈ ಕಚೇರಿಯಿಂದ ಅರ್ಜಿಯನ್ನು ಪಡೆದು ದಾಖಲಾತಿಗಳೊಂದಿಗೆ ಜುಲೈ 10 ರೊಳಗೆ ಉಪನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಚೇರಿ ವಿಳಾಸಕ್ಕೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ: 080-29501945 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

4 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

10 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

11 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

23 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

23 hours ago