ನೇಣು ಬಿಗಿದುಕೊಂಡು ಗೃಹಿಣಿ ಸಾವು: ಕಟ್ಟೆಇಂದ್ಲಹಳ್ಳಿ ಗ್ರಾಮದಲ್ಲಿ ಘಟನೆ: ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ: 9 ತಿಂಗಳ ಹೆಣ್ಣು ಮಗು ಬಿಟ್ಟು ಸಾವನ್ನಪ್ಪಿದ ತಾಯಿ

ಎರಡು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದ ದಂಪತಿ. ಗಂಡ – ಹೆಂಡತಿ ಮಧ್ಯೆ ಜಗಳವಾಗಿ ಹೆಂಡತಿ ಕ್ಷಣಿಕದ ಕೋಪಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಸಾಸಲು ಹೋಬಳಿಯ ಕಟ್ಟೆಇಂದ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ತಾಲೂಕಿನ ತೂಬಗರೆ ಹೋಬಳಿಯ ಕಲ್ಲುಕುಂಟೆ ಗ್ರಾಮದ ಮೇಘನಾ (21) ಎಂಬಾಕೆ ಸಾಸಲು ಹೋಬಳಿಯ ಕಟ್ಟೆಇಂದ್ಲಹಳ್ಳಿ ಗ್ರಾಮದ ಅಶೋಕ್ (23) ಮಧ್ಯೆ ಪ್ರೇಮಾಂಕುರವಾಗಿ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಒಂದೇ ಸಮುದಾಯದವರಾಗಿದ್ದರಿಂದ ಮನೆಯವರೂ ಕೂಡ ಒಪ್ಪಿ ಮದುವೆ ಮಾಡಿದ್ದರು.

ದಂಪತಿಗೆ 9 ತಿಂಗಳ ಹೆಣ್ಣು ಮಗು ಇದೆ. ರಾತ್ರಿ ಊಟದ ವಿಚಾರಕ್ಕೆ ಗಲಾಟೆಯಾಗಿ ಇಬ್ಬರ ಮಧ್ಯೆ ಮಾತಿನ ಚಕಮಕಿ, ಜಗಳ ಉಂಟಾಗಿದೆ. ಬೆಳಕಾಗುವಷ್ಟರಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಕಾಣಿಸಿದೆ.

ಸಣ್ಣ ವಿಷಯಕ್ಕೆ ಇಂತಹ ಆತ್ಮಹತ್ಯೆ ನಿರ್ಧಾರ ಮಾಡಿಕೊಂಡಿದ್ದಾಳೆ ಎಂದು ಮೃತಳ ಗಂಡ ಅಶೋಕ್ ಹೇಳಿದ್ದಾರೆ. ಮೃತ ಮೇಘನಾ ಕುಟುಂಬಸ್ಥರು ಅಶೋಕ್ ಕುಟುಂಬದ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾಳೆ ಎಂಬ ಖಚಿತ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

Ramesh Babu

Journalist

Recent Posts

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

2 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

2 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

11 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

12 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

23 hours ago