ಎರಡು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದ ದಂಪತಿ. ಗಂಡ – ಹೆಂಡತಿ ಮಧ್ಯೆ ಜಗಳವಾಗಿ ಹೆಂಡತಿ ಕ್ಷಣಿಕದ ಕೋಪಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಸಾಸಲು ಹೋಬಳಿಯ ಕಟ್ಟೆಇಂದ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ತಾಲೂಕಿನ ತೂಬಗರೆ ಹೋಬಳಿಯ ಕಲ್ಲುಕುಂಟೆ ಗ್ರಾಮದ ಮೇಘನಾ (21) ಎಂಬಾಕೆ ಸಾಸಲು ಹೋಬಳಿಯ ಕಟ್ಟೆಇಂದ್ಲಹಳ್ಳಿ ಗ್ರಾಮದ ಅಶೋಕ್ (23) ಮಧ್ಯೆ ಪ್ರೇಮಾಂಕುರವಾಗಿ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಒಂದೇ ಸಮುದಾಯದವರಾಗಿದ್ದರಿಂದ ಮನೆಯವರೂ ಕೂಡ ಒಪ್ಪಿ ಮದುವೆ ಮಾಡಿದ್ದರು.
ದಂಪತಿಗೆ 9 ತಿಂಗಳ ಹೆಣ್ಣು ಮಗು ಇದೆ. ರಾತ್ರಿ ಊಟದ ವಿಚಾರಕ್ಕೆ ಗಲಾಟೆಯಾಗಿ ಇಬ್ಬರ ಮಧ್ಯೆ ಮಾತಿನ ಚಕಮಕಿ, ಜಗಳ ಉಂಟಾಗಿದೆ. ಬೆಳಕಾಗುವಷ್ಟರಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಕಾಣಿಸಿದೆ.
ಸಣ್ಣ ವಿಷಯಕ್ಕೆ ಇಂತಹ ಆತ್ಮಹತ್ಯೆ ನಿರ್ಧಾರ ಮಾಡಿಕೊಂಡಿದ್ದಾಳೆ ಎಂದು ಮೃತಳ ಗಂಡ ಅಶೋಕ್ ಹೇಳಿದ್ದಾರೆ. ಮೃತ ಮೇಘನಾ ಕುಟುಂಬಸ್ಥರು ಅಶೋಕ್ ಕುಟುಂಬದ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾಳೆ ಎಂಬ ಖಚಿತ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…