ನೇಣು ಬಿಗಿದುಕೊಂಡು ಗೃಹಿಣಿ ಸಾವು: ಕಟ್ಟೆಇಂದ್ಲಹಳ್ಳಿ ಗ್ರಾಮದಲ್ಲಿ ಘಟನೆ: ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ: 9 ತಿಂಗಳ ಹೆಣ್ಣು ಮಗು ಬಿಟ್ಟು ಸಾವನ್ನಪ್ಪಿದ ತಾಯಿ

ಎರಡು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದ ದಂಪತಿ. ಗಂಡ – ಹೆಂಡತಿ ಮಧ್ಯೆ ಜಗಳವಾಗಿ ಹೆಂಡತಿ ಕ್ಷಣಿಕದ ಕೋಪಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಸಾಸಲು ಹೋಬಳಿಯ ಕಟ್ಟೆಇಂದ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ತಾಲೂಕಿನ ತೂಬಗರೆ ಹೋಬಳಿಯ ಕಲ್ಲುಕುಂಟೆ ಗ್ರಾಮದ ಮೇಘನಾ (21) ಎಂಬಾಕೆ ಸಾಸಲು ಹೋಬಳಿಯ ಕಟ್ಟೆಇಂದ್ಲಹಳ್ಳಿ ಗ್ರಾಮದ ಅಶೋಕ್ (23) ಮಧ್ಯೆ ಪ್ರೇಮಾಂಕುರವಾಗಿ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಒಂದೇ ಸಮುದಾಯದವರಾಗಿದ್ದರಿಂದ ಮನೆಯವರೂ ಕೂಡ ಒಪ್ಪಿ ಮದುವೆ ಮಾಡಿದ್ದರು.

ದಂಪತಿಗೆ 9 ತಿಂಗಳ ಹೆಣ್ಣು ಮಗು ಇದೆ. ರಾತ್ರಿ ಊಟದ ವಿಚಾರಕ್ಕೆ ಗಲಾಟೆಯಾಗಿ ಇಬ್ಬರ ಮಧ್ಯೆ ಮಾತಿನ ಚಕಮಕಿ, ಜಗಳ ಉಂಟಾಗಿದೆ. ಬೆಳಕಾಗುವಷ್ಟರಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಕಾಣಿಸಿದೆ.

ಸಣ್ಣ ವಿಷಯಕ್ಕೆ ಇಂತಹ ಆತ್ಮಹತ್ಯೆ ನಿರ್ಧಾರ ಮಾಡಿಕೊಂಡಿದ್ದಾಳೆ ಎಂದು ಮೃತಳ ಗಂಡ ಅಶೋಕ್ ಹೇಳಿದ್ದಾರೆ. ಮೃತ ಮೇಘನಾ ಕುಟುಂಬಸ್ಥರು ಅಶೋಕ್ ಕುಟುಂಬದ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾಳೆ ಎಂಬ ಖಚಿತ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

8 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

9 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

11 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago