ವಿರಾಜಪೇಟೆ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್ (32)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.
ಮೃತ ಸಫ್ರೀನ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಬುಧವಾರ ರಾತ್ರಿ ಎಮ್ಮೆ ಮಾಡುವಿನ ಮನೆಯಲ್ಲಿ ಸಫ್ರೀನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನೇಣಿನ ಕುಣಿಕೆಯಿಂದ ಬಿಡಿಸಿ ಸ್ವತಃ ಪತಿ ನಜೀರ್ ಸಫ್ರೀನಾಳನ್ನು ನಾಪೋಕ್ಲು ವಿನ ಖಾಸಗಿ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ಪರೀಕ್ಷಿಸಿ ದೃಢಪಡಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಪತಿ ನಜೀರ್ ಹಾಗೂ ಸಫ್ರೀನ ನಡುವೆ ಮನೆಯಲ್ಲಿ ಜಗಳ ನಡೆಯುತ್ತಿತ್ತು ಎನ್ನಲಾಗಿದ್ದುಮೃತ ಸಫ್ರೀನ ದೇಹದಲ್ಲಿ ಗಾಯಗಳ ಗುರುತು ಇದ್ದು ಪತಿ ನಜೀರ್ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಸಫ್ರಿನ ಸಹೋದರ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.
ಸಫ್ರೀನ ಸಹೋದರ ರುವೈಸ್ ನಾಪೋಕ್ಲು ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…