ನೇಯ್ಗೆ ಉದ್ಯಮಕ್ಕೆ ತಟ್ಟಿದ ಬೆಲೆ ಏರಿಕೆ ಬಿಸಿ: ಸಂಕಷ್ಟದಲ್ಲಿ ನೇಕಾರರು: ನೇಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಆಗ್ರಹ

ದೊಡ್ಡಬಳ್ಳಾಪುರ ನಗರ ನೇಯ್ಗೆ ಉದ್ಯಮಕ್ಕೆ ಪ್ರಸಿದ್ಧಿ ಪಡೆದ ಊರು. ದೊಡ್ಡಬಳ್ಳಾಪುರ ನಗರ ಹಾಗೂ ನಗರದ ಸುತ್ತಮುತ್ತ ಪ್ರದೇಶದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮಗ್ಗಗಳಿದ್ದು, 35 ಸಾವಿರಕ್ಕೂ ಹೆಚ್ಚು ಮಂದಿ ನೇಯ್ಗೆ ಉದ್ಯಮಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇಲ್ಲಿ ತಯಾರಾಗುವ ಸೀರೆಗೆ ಮಾರುಕಟ್ಟೆಯಲ್ಲಿ ಬಹಳ ಬೇಡಿಕೆ ಇದೆ.

ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಗಳ ನಡೆಯಿಂದ ನೇಕಾರರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಾರ್ಮಿಕರ ಸಮಸ್ಯೆ, ಮಾರುಕಟ್ಟೆ ಸಮಸ್ಯೆ, ಸಬ್ಸಿಡಿ ಸ್ಥಗಿತ, ವಿವಿಧ ಸೌಲಭ್ಯಗಳ ಸ್ಥಗಿತ, ವಿದ್ಯುತ್ ದರ ಏರಿಕೆ‌ ಸೇರಿದಂತೆ ಇತರೆ ಸಮಸ್ಯೆಗಳಿರುವ ನೇಕಾರಿಕೆಗೆ ಈಗ ಜಿಎಸ್‌ಟಿ ಹೊರೆಯಾಗಿ ನೇಕಾರರನ್ನು ಕಂಗಾಲಾಗಿಸಿದೆ.

ವಿದ್ಯುತ್ ದರ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಮತ್ತು ದರ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಸದಸ್ಯರು ಸರ್ಕಾರಕ್ಕೆ ಒತ್ತಾಯಿಸಿದರು.

ನಗರದಲ್ಲಿ ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಮಿತಿಯ ಅಧ್ಯಕ್ಷ ವೆಂಕಟೇಶ್, ಪ್ರತಿ ಯೂನಿಟ್ ವಿದ್ಯುತ್ ದರವನ್ನು ನಾಲ್ಕು ರೂಪಾಯಿಗಳಿಂದ ಏಳು ರುಪಾಯಿಗೆ ಏರಿಸಿ ಜನಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಲಾಗಿದೆ, ಐದರಿಂದ ಆರು ಸ್ಲಾಬ್ ಗಳಲ್ಲಿ ಏರಿಕೆಯಾಗಬೇಕಿದ್ದ ವಿದ್ಯುತ್ ದರ ಎರಡು ಹಂತಗಳಿಗೆ ಬದಲಾಯಿಸಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ ಎ‌ಂದರು.

ವಿದ್ಯುತ್ ದರ ಪಟ್ಟಿಯಲ್ಲಿ ಹೆಸರಿಲ್ಲದೇ ಹೆಚ್ಚಳ ಮಾಡಿರುವ ಶುಲ್ಕವನ್ನು ಕೂಡಲೆ ಕಡಿಮೆ ಮಾಡಬೇಕು, ಹೊಸ ಲೆಕ್ಕದ ಪ್ರಕಾರ ವಿದ್ಯುತ್ ದರ ನಿಗದಿ ಪಡಿಸದೇ ಹಳೆ ದರ ಪಟ್ಟಿ ಪ್ರಕಾರ ವಿದ್ಯುತ್ ಶುಲ್ಕ ಪಡೆಯಬೇಕು ಮತ್ತು ಈಗಾಗಲೇ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಉಚಿತ 200 ಯೂನಿಟ್ ವಿದ್ಯುತ್ ಅತಿ ಶೀಘ್ರವಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಹಿಂದಿನ ಬಿಜೆಪಿ ಸರ್ಕಾರ ವಿದ್ಯುತ್ ನೇಕಾರರಿಗೆ ಐಡಿ ಕಾರ್ಡ್ ವಿತರಣೆ ಮಾಡುವ ಭರವಸೆಯನ್ನು ನೀಡಿತ್ತು, ನೇಕಾರರ ಸೆನ್ಸಸ್ ಕಾರ್ಯ ನಡೆಸಿತ್ತು, ಕಳೆದ ಒಂದು ವರ್ಷದಿಂದ ಐಡಿ ಕಾರ್ಡ್ ವಿತರಣೆ ಮಾಡದೇ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ, ನೇಕಾರರಿಗೆ ಗುರುತಿನ ಚೀಟಿ ವಿತರಣೆಯಾದರೇ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಕುಟುಂಬಕ್ಕೆ ನೀಡುತ್ತಿರುವ ಎಲ್ಲಾ ಸೌಕರ್ಯಗಳನ್ನು ನೇಕಾರರ ಕುಟುಂಬಸ್ಥರು ಪಡೆಯಲು ಅರ್ಹರಾಗಿರುತ್ತೇವೆ ಎಂದರು.

ಈ ಕೂಡಲೆ ಸರ್ಕಾರ ವಿದ್ಯುತ್ ದರ ಇಳಿಕೆ ಸೇರಿದಂತೆ ನೇಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲ್ಲೂಕಿನ ಬೇರೆ ಬೇರೆ ನೇಕಾರ ಸಂಘಟನೆಗಳನ್ನು ಒಟ್ಟುಗೂಡಿಸಿಕೊಂಡು ನೇಕಾರರ ಒಕ್ಕೂಟದೊಂದಿಗೆ ಪ್ರಬಲವಾದ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ವೇಳೆ ಶ್ರೀನಿವಾಸ್ ಸುರೇಶ್, ಮಲ್ಲೇಶ್, ಚೌಡಯ್ಯ ರಘುಕುಮಾರ್ ರಾಜಶೇಖರ್, ಇದ್ರೀಸ್, ರಮಣ, ಸಹ ಕಾರ್ಯದರ್ಶಿ ಮುನಿರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

10 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

19 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

23 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago