ದೊಡ್ಡಬಳ್ಳಾಪುರ ನಗರ ನೇಯ್ಗೆ ಉದ್ಯಮಕ್ಕೆ ಪ್ರಸಿದ್ಧಿ ಪಡೆದ ಊರು. ದೊಡ್ಡಬಳ್ಳಾಪುರ ನಗರ ಹಾಗೂ ನಗರದ ಸುತ್ತಮುತ್ತ ಪ್ರದೇಶದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮಗ್ಗಗಳಿದ್ದು, 35 ಸಾವಿರಕ್ಕೂ ಹೆಚ್ಚು ಮಂದಿ ನೇಯ್ಗೆ ಉದ್ಯಮಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇಲ್ಲಿ ತಯಾರಾಗುವ ಸೀರೆಗೆ ಮಾರುಕಟ್ಟೆಯಲ್ಲಿ ಬಹಳ ಬೇಡಿಕೆ ಇದೆ.
ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಗಳ ನಡೆಯಿಂದ ನೇಕಾರರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಾರ್ಮಿಕರ ಸಮಸ್ಯೆ, ಮಾರುಕಟ್ಟೆ ಸಮಸ್ಯೆ, ಸಬ್ಸಿಡಿ ಸ್ಥಗಿತ, ವಿವಿಧ ಸೌಲಭ್ಯಗಳ ಸ್ಥಗಿತ, ವಿದ್ಯುತ್ ದರ ಏರಿಕೆ ಸೇರಿದಂತೆ ಇತರೆ ಸಮಸ್ಯೆಗಳಿರುವ ನೇಕಾರಿಕೆಗೆ ಈಗ ಜಿಎಸ್ಟಿ ಹೊರೆಯಾಗಿ ನೇಕಾರರನ್ನು ಕಂಗಾಲಾಗಿಸಿದೆ.
ವಿದ್ಯುತ್ ದರ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಮತ್ತು ದರ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಸದಸ್ಯರು ಸರ್ಕಾರಕ್ಕೆ ಒತ್ತಾಯಿಸಿದರು.
ವಿದ್ಯುತ್ ದರ ಪಟ್ಟಿಯಲ್ಲಿ ಹೆಸರಿಲ್ಲದೇ ಹೆಚ್ಚಳ ಮಾಡಿರುವ ಶುಲ್ಕವನ್ನು ಕೂಡಲೆ ಕಡಿಮೆ ಮಾಡಬೇಕು, ಹೊಸ ಲೆಕ್ಕದ ಪ್ರಕಾರ ವಿದ್ಯುತ್ ದರ ನಿಗದಿ ಪಡಿಸದೇ ಹಳೆ ದರ ಪಟ್ಟಿ ಪ್ರಕಾರ ವಿದ್ಯುತ್ ಶುಲ್ಕ ಪಡೆಯಬೇಕು ಮತ್ತು ಈಗಾಗಲೇ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಉಚಿತ 200 ಯೂನಿಟ್ ವಿದ್ಯುತ್ ಅತಿ ಶೀಘ್ರವಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಈ ಕೂಡಲೆ ಸರ್ಕಾರ ವಿದ್ಯುತ್ ದರ ಇಳಿಕೆ ಸೇರಿದಂತೆ ನೇಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲ್ಲೂಕಿನ ಬೇರೆ ಬೇರೆ ನೇಕಾರ ಸಂಘಟನೆಗಳನ್ನು ಒಟ್ಟುಗೂಡಿಸಿಕೊಂಡು ನೇಕಾರರ ಒಕ್ಕೂಟದೊಂದಿಗೆ ಪ್ರಬಲವಾದ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…