ದೊಡ್ಡಬಳ್ಳಾಪುರ ನಗರ ನೇಯ್ಗೆ ಉದ್ಯಮಕ್ಕೆ ಪ್ರಸಿದ್ಧಿ ಪಡೆದ ಊರು. ದೊಡ್ಡಬಳ್ಳಾಪುರ ನಗರ ಹಾಗೂ ನಗರದ ಸುತ್ತಮುತ್ತ ಪ್ರದೇಶದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮಗ್ಗಗಳಿದ್ದು, 35 ಸಾವಿರಕ್ಕೂ ಹೆಚ್ಚು ಮಂದಿ ನೇಯ್ಗೆ ಉದ್ಯಮಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇಲ್ಲಿ ತಯಾರಾಗುವ ಸೀರೆಗೆ ಮಾರುಕಟ್ಟೆಯಲ್ಲಿ ಬಹಳ ಬೇಡಿಕೆ ಇದೆ.
ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಗಳ ನಡೆಯಿಂದ ನೇಕಾರರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಾರ್ಮಿಕರ ಸಮಸ್ಯೆ, ಮಾರುಕಟ್ಟೆ ಸಮಸ್ಯೆ, ಸಬ್ಸಿಡಿ ಸ್ಥಗಿತ, ವಿವಿಧ ಸೌಲಭ್ಯಗಳ ಸ್ಥಗಿತ, ವಿದ್ಯುತ್ ದರ ಏರಿಕೆ ಸೇರಿದಂತೆ ಇತರೆ ಸಮಸ್ಯೆಗಳಿರುವ ನೇಕಾರಿಕೆಗೆ ಈಗ ಜಿಎಸ್ಟಿ ಹೊರೆಯಾಗಿ ನೇಕಾರರನ್ನು ಕಂಗಾಲಾಗಿಸಿದೆ.
ವಿದ್ಯುತ್ ದರ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಮತ್ತು ದರ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಸದಸ್ಯರು ಸರ್ಕಾರಕ್ಕೆ ಒತ್ತಾಯಿಸಿದರು.
ವಿದ್ಯುತ್ ದರ ಪಟ್ಟಿಯಲ್ಲಿ ಹೆಸರಿಲ್ಲದೇ ಹೆಚ್ಚಳ ಮಾಡಿರುವ ಶುಲ್ಕವನ್ನು ಕೂಡಲೆ ಕಡಿಮೆ ಮಾಡಬೇಕು, ಹೊಸ ಲೆಕ್ಕದ ಪ್ರಕಾರ ವಿದ್ಯುತ್ ದರ ನಿಗದಿ ಪಡಿಸದೇ ಹಳೆ ದರ ಪಟ್ಟಿ ಪ್ರಕಾರ ವಿದ್ಯುತ್ ಶುಲ್ಕ ಪಡೆಯಬೇಕು ಮತ್ತು ಈಗಾಗಲೇ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಉಚಿತ 200 ಯೂನಿಟ್ ವಿದ್ಯುತ್ ಅತಿ ಶೀಘ್ರವಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಈ ಕೂಡಲೆ ಸರ್ಕಾರ ವಿದ್ಯುತ್ ದರ ಇಳಿಕೆ ಸೇರಿದಂತೆ ನೇಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲ್ಲೂಕಿನ ಬೇರೆ ಬೇರೆ ನೇಕಾರ ಸಂಘಟನೆಗಳನ್ನು ಒಟ್ಟುಗೂಡಿಸಿಕೊಂಡು ನೇಕಾರರ ಒಕ್ಕೂಟದೊಂದಿಗೆ ಪ್ರಬಲವಾದ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…