ನೇಯ್ಗೆ ಉದ್ಯಮಕ್ಕೆ ತಟ್ಟಿದ ಬೆಲೆ ಏರಿಕೆ ಬಿಸಿ: ಸಂಕಷ್ಟದಲ್ಲಿ ನೇಕಾರರು: ನೇಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಆಗ್ರಹ

ದೊಡ್ಡಬಳ್ಳಾಪುರ ನಗರ ನೇಯ್ಗೆ ಉದ್ಯಮಕ್ಕೆ ಪ್ರಸಿದ್ಧಿ ಪಡೆದ ಊರು. ದೊಡ್ಡಬಳ್ಳಾಪುರ ನಗರ ಹಾಗೂ ನಗರದ ಸುತ್ತಮುತ್ತ ಪ್ರದೇಶದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮಗ್ಗಗಳಿದ್ದು, 35 ಸಾವಿರಕ್ಕೂ ಹೆಚ್ಚು ಮಂದಿ ನೇಯ್ಗೆ ಉದ್ಯಮಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇಲ್ಲಿ ತಯಾರಾಗುವ ಸೀರೆಗೆ ಮಾರುಕಟ್ಟೆಯಲ್ಲಿ ಬಹಳ ಬೇಡಿಕೆ ಇದೆ.

ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಗಳ ನಡೆಯಿಂದ ನೇಕಾರರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಾರ್ಮಿಕರ ಸಮಸ್ಯೆ, ಮಾರುಕಟ್ಟೆ ಸಮಸ್ಯೆ, ಸಬ್ಸಿಡಿ ಸ್ಥಗಿತ, ವಿವಿಧ ಸೌಲಭ್ಯಗಳ ಸ್ಥಗಿತ, ವಿದ್ಯುತ್ ದರ ಏರಿಕೆ‌ ಸೇರಿದಂತೆ ಇತರೆ ಸಮಸ್ಯೆಗಳಿರುವ ನೇಕಾರಿಕೆಗೆ ಈಗ ಜಿಎಸ್‌ಟಿ ಹೊರೆಯಾಗಿ ನೇಕಾರರನ್ನು ಕಂಗಾಲಾಗಿಸಿದೆ.

ವಿದ್ಯುತ್ ದರ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಮತ್ತು ದರ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಸದಸ್ಯರು ಸರ್ಕಾರಕ್ಕೆ ಒತ್ತಾಯಿಸಿದರು.

ನಗರದಲ್ಲಿ ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಮಿತಿಯ ಅಧ್ಯಕ್ಷ ವೆಂಕಟೇಶ್, ಪ್ರತಿ ಯೂನಿಟ್ ವಿದ್ಯುತ್ ದರವನ್ನು ನಾಲ್ಕು ರೂಪಾಯಿಗಳಿಂದ ಏಳು ರುಪಾಯಿಗೆ ಏರಿಸಿ ಜನಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಲಾಗಿದೆ, ಐದರಿಂದ ಆರು ಸ್ಲಾಬ್ ಗಳಲ್ಲಿ ಏರಿಕೆಯಾಗಬೇಕಿದ್ದ ವಿದ್ಯುತ್ ದರ ಎರಡು ಹಂತಗಳಿಗೆ ಬದಲಾಯಿಸಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ ಎ‌ಂದರು.

ವಿದ್ಯುತ್ ದರ ಪಟ್ಟಿಯಲ್ಲಿ ಹೆಸರಿಲ್ಲದೇ ಹೆಚ್ಚಳ ಮಾಡಿರುವ ಶುಲ್ಕವನ್ನು ಕೂಡಲೆ ಕಡಿಮೆ ಮಾಡಬೇಕು, ಹೊಸ ಲೆಕ್ಕದ ಪ್ರಕಾರ ವಿದ್ಯುತ್ ದರ ನಿಗದಿ ಪಡಿಸದೇ ಹಳೆ ದರ ಪಟ್ಟಿ ಪ್ರಕಾರ ವಿದ್ಯುತ್ ಶುಲ್ಕ ಪಡೆಯಬೇಕು ಮತ್ತು ಈಗಾಗಲೇ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಉಚಿತ 200 ಯೂನಿಟ್ ವಿದ್ಯುತ್ ಅತಿ ಶೀಘ್ರವಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಹಿಂದಿನ ಬಿಜೆಪಿ ಸರ್ಕಾರ ವಿದ್ಯುತ್ ನೇಕಾರರಿಗೆ ಐಡಿ ಕಾರ್ಡ್ ವಿತರಣೆ ಮಾಡುವ ಭರವಸೆಯನ್ನು ನೀಡಿತ್ತು, ನೇಕಾರರ ಸೆನ್ಸಸ್ ಕಾರ್ಯ ನಡೆಸಿತ್ತು, ಕಳೆದ ಒಂದು ವರ್ಷದಿಂದ ಐಡಿ ಕಾರ್ಡ್ ವಿತರಣೆ ಮಾಡದೇ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ, ನೇಕಾರರಿಗೆ ಗುರುತಿನ ಚೀಟಿ ವಿತರಣೆಯಾದರೇ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಕುಟುಂಬಕ್ಕೆ ನೀಡುತ್ತಿರುವ ಎಲ್ಲಾ ಸೌಕರ್ಯಗಳನ್ನು ನೇಕಾರರ ಕುಟುಂಬಸ್ಥರು ಪಡೆಯಲು ಅರ್ಹರಾಗಿರುತ್ತೇವೆ ಎಂದರು.

ಈ ಕೂಡಲೆ ಸರ್ಕಾರ ವಿದ್ಯುತ್ ದರ ಇಳಿಕೆ ಸೇರಿದಂತೆ ನೇಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲ್ಲೂಕಿನ ಬೇರೆ ಬೇರೆ ನೇಕಾರ ಸಂಘಟನೆಗಳನ್ನು ಒಟ್ಟುಗೂಡಿಸಿಕೊಂಡು ನೇಕಾರರ ಒಕ್ಕೂಟದೊಂದಿಗೆ ಪ್ರಬಲವಾದ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ವೇಳೆ ಶ್ರೀನಿವಾಸ್ ಸುರೇಶ್, ಮಲ್ಲೇಶ್, ಚೌಡಯ್ಯ ರಘುಕುಮಾರ್ ರಾಜಶೇಖರ್, ಇದ್ರೀಸ್, ರಮಣ, ಸಹ ಕಾರ್ಯದರ್ಶಿ ಮುನಿರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

6 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

13 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

14 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago