ನೇಯ್ಗೆ ಉದ್ಯಮಕ್ಕೆ ತಟ್ಟಿದ ಬೆಲೆ ಏರಿಕೆ ಬಿಸಿ: ಸಂಕಷ್ಟದಲ್ಲಿ ನೇಕಾರರು: ನೇಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಆಗ್ರಹ

ದೊಡ್ಡಬಳ್ಳಾಪುರ ನಗರ ನೇಯ್ಗೆ ಉದ್ಯಮಕ್ಕೆ ಪ್ರಸಿದ್ಧಿ ಪಡೆದ ಊರು. ದೊಡ್ಡಬಳ್ಳಾಪುರ ನಗರ ಹಾಗೂ ನಗರದ ಸುತ್ತಮುತ್ತ ಪ್ರದೇಶದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮಗ್ಗಗಳಿದ್ದು, 35 ಸಾವಿರಕ್ಕೂ ಹೆಚ್ಚು ಮಂದಿ ನೇಯ್ಗೆ ಉದ್ಯಮಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇಲ್ಲಿ ತಯಾರಾಗುವ ಸೀರೆಗೆ ಮಾರುಕಟ್ಟೆಯಲ್ಲಿ ಬಹಳ ಬೇಡಿಕೆ ಇದೆ.

ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಗಳ ನಡೆಯಿಂದ ನೇಕಾರರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಾರ್ಮಿಕರ ಸಮಸ್ಯೆ, ಮಾರುಕಟ್ಟೆ ಸಮಸ್ಯೆ, ಸಬ್ಸಿಡಿ ಸ್ಥಗಿತ, ವಿವಿಧ ಸೌಲಭ್ಯಗಳ ಸ್ಥಗಿತ, ವಿದ್ಯುತ್ ದರ ಏರಿಕೆ‌ ಸೇರಿದಂತೆ ಇತರೆ ಸಮಸ್ಯೆಗಳಿರುವ ನೇಕಾರಿಕೆಗೆ ಈಗ ಜಿಎಸ್‌ಟಿ ಹೊರೆಯಾಗಿ ನೇಕಾರರನ್ನು ಕಂಗಾಲಾಗಿಸಿದೆ.

ವಿದ್ಯುತ್ ದರ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಮತ್ತು ದರ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಸದಸ್ಯರು ಸರ್ಕಾರಕ್ಕೆ ಒತ್ತಾಯಿಸಿದರು.

ನಗರದಲ್ಲಿ ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಮಿತಿಯ ಅಧ್ಯಕ್ಷ ವೆಂಕಟೇಶ್, ಪ್ರತಿ ಯೂನಿಟ್ ವಿದ್ಯುತ್ ದರವನ್ನು ನಾಲ್ಕು ರೂಪಾಯಿಗಳಿಂದ ಏಳು ರುಪಾಯಿಗೆ ಏರಿಸಿ ಜನಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಲಾಗಿದೆ, ಐದರಿಂದ ಆರು ಸ್ಲಾಬ್ ಗಳಲ್ಲಿ ಏರಿಕೆಯಾಗಬೇಕಿದ್ದ ವಿದ್ಯುತ್ ದರ ಎರಡು ಹಂತಗಳಿಗೆ ಬದಲಾಯಿಸಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ ಎ‌ಂದರು.

ವಿದ್ಯುತ್ ದರ ಪಟ್ಟಿಯಲ್ಲಿ ಹೆಸರಿಲ್ಲದೇ ಹೆಚ್ಚಳ ಮಾಡಿರುವ ಶುಲ್ಕವನ್ನು ಕೂಡಲೆ ಕಡಿಮೆ ಮಾಡಬೇಕು, ಹೊಸ ಲೆಕ್ಕದ ಪ್ರಕಾರ ವಿದ್ಯುತ್ ದರ ನಿಗದಿ ಪಡಿಸದೇ ಹಳೆ ದರ ಪಟ್ಟಿ ಪ್ರಕಾರ ವಿದ್ಯುತ್ ಶುಲ್ಕ ಪಡೆಯಬೇಕು ಮತ್ತು ಈಗಾಗಲೇ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಉಚಿತ 200 ಯೂನಿಟ್ ವಿದ್ಯುತ್ ಅತಿ ಶೀಘ್ರವಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಹಿಂದಿನ ಬಿಜೆಪಿ ಸರ್ಕಾರ ವಿದ್ಯುತ್ ನೇಕಾರರಿಗೆ ಐಡಿ ಕಾರ್ಡ್ ವಿತರಣೆ ಮಾಡುವ ಭರವಸೆಯನ್ನು ನೀಡಿತ್ತು, ನೇಕಾರರ ಸೆನ್ಸಸ್ ಕಾರ್ಯ ನಡೆಸಿತ್ತು, ಕಳೆದ ಒಂದು ವರ್ಷದಿಂದ ಐಡಿ ಕಾರ್ಡ್ ವಿತರಣೆ ಮಾಡದೇ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ, ನೇಕಾರರಿಗೆ ಗುರುತಿನ ಚೀಟಿ ವಿತರಣೆಯಾದರೇ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಕುಟುಂಬಕ್ಕೆ ನೀಡುತ್ತಿರುವ ಎಲ್ಲಾ ಸೌಕರ್ಯಗಳನ್ನು ನೇಕಾರರ ಕುಟುಂಬಸ್ಥರು ಪಡೆಯಲು ಅರ್ಹರಾಗಿರುತ್ತೇವೆ ಎಂದರು.

ಈ ಕೂಡಲೆ ಸರ್ಕಾರ ವಿದ್ಯುತ್ ದರ ಇಳಿಕೆ ಸೇರಿದಂತೆ ನೇಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲ್ಲೂಕಿನ ಬೇರೆ ಬೇರೆ ನೇಕಾರ ಸಂಘಟನೆಗಳನ್ನು ಒಟ್ಟುಗೂಡಿಸಿಕೊಂಡು ನೇಕಾರರ ಒಕ್ಕೂಟದೊಂದಿಗೆ ಪ್ರಬಲವಾದ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ವೇಳೆ ಶ್ರೀನಿವಾಸ್ ಸುರೇಶ್, ಮಲ್ಲೇಶ್, ಚೌಡಯ್ಯ ರಘುಕುಮಾರ್ ರಾಜಶೇಖರ್, ಇದ್ರೀಸ್, ರಮಣ, ಸಹ ಕಾರ್ಯದರ್ಶಿ ಮುನಿರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

23 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago