ದೊಡ್ಡಬಳ್ಳಾಪುರ ನಗರ ನೇಯ್ಗೆ ಉದ್ಯಮಕ್ಕೆ ಪ್ರಸಿದ್ಧಿ ಪಡೆದ ಊರು. ದೊಡ್ಡಬಳ್ಳಾಪುರ ನಗರ ಹಾಗೂ ನಗರದ ಸುತ್ತಮುತ್ತ ಪ್ರದೇಶದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮಗ್ಗಗಳಿದ್ದು, 35 ಸಾವಿರಕ್ಕೂ ಹೆಚ್ಚು ಮಂದಿ ನೇಯ್ಗೆ ಉದ್ಯಮಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇಲ್ಲಿ ತಯಾರಾಗುವ ಸೀರೆಗೆ ಮಾರುಕಟ್ಟೆಯಲ್ಲಿ ಬಹಳ ಬೇಡಿಕೆ ಇದೆ.
ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಗಳ ನಡೆಯಿಂದ ನೇಕಾರರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಾರ್ಮಿಕರ ಸಮಸ್ಯೆ, ಮಾರುಕಟ್ಟೆ ಸಮಸ್ಯೆ, ಸಬ್ಸಿಡಿ ಸ್ಥಗಿತ, ವಿವಿಧ ಸೌಲಭ್ಯಗಳ ಸ್ಥಗಿತ, ವಿದ್ಯುತ್ ದರ ಏರಿಕೆ ಸೇರಿದಂತೆ ಇತರೆ ಸಮಸ್ಯೆಗಳಿರುವ ನೇಕಾರಿಕೆಗೆ ಈಗ ಜಿಎಸ್ಟಿ ಹೊರೆಯಾಗಿ ನೇಕಾರರನ್ನು ಕಂಗಾಲಾಗಿಸಿದೆ.
ವಿದ್ಯುತ್ ದರ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಮತ್ತು ದರ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಸದಸ್ಯರು ಸರ್ಕಾರಕ್ಕೆ ಒತ್ತಾಯಿಸಿದರು.
ವಿದ್ಯುತ್ ದರ ಪಟ್ಟಿಯಲ್ಲಿ ಹೆಸರಿಲ್ಲದೇ ಹೆಚ್ಚಳ ಮಾಡಿರುವ ಶುಲ್ಕವನ್ನು ಕೂಡಲೆ ಕಡಿಮೆ ಮಾಡಬೇಕು, ಹೊಸ ಲೆಕ್ಕದ ಪ್ರಕಾರ ವಿದ್ಯುತ್ ದರ ನಿಗದಿ ಪಡಿಸದೇ ಹಳೆ ದರ ಪಟ್ಟಿ ಪ್ರಕಾರ ವಿದ್ಯುತ್ ಶುಲ್ಕ ಪಡೆಯಬೇಕು ಮತ್ತು ಈಗಾಗಲೇ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಉಚಿತ 200 ಯೂನಿಟ್ ವಿದ್ಯುತ್ ಅತಿ ಶೀಘ್ರವಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಈ ಕೂಡಲೆ ಸರ್ಕಾರ ವಿದ್ಯುತ್ ದರ ಇಳಿಕೆ ಸೇರಿದಂತೆ ನೇಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲ್ಲೂಕಿನ ಬೇರೆ ಬೇರೆ ನೇಕಾರ ಸಂಘಟನೆಗಳನ್ನು ಒಟ್ಟುಗೂಡಿಸಿಕೊಂಡು ನೇಕಾರರ ಒಕ್ಕೂಟದೊಂದಿಗೆ ಪ್ರಬಲವಾದ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…