Categories: ಕೋಲಾರ

ನೇರವಾಗಿ ನಿಮ್ಮ ಖಾತೆಗೆ ಹಣ ಹಾಕುವ ಮೂಲಕ ನುಡಿದಂತೆ ನಡೆದಿದ್ದೇವೆ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ರಾಜ್ಯದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ನೇರವಾಗಿ ಫಲಾನುಭವಿಗಳ ಕೈಗೆ ಸೌಲಭ್ಯಗಳನ್ನು ಒದಗಿಸಲಾಗುತ್ತಾ ಇದ್ದು ನುಡಿದಂತೆ ನಡೆದುಕೊಂಡಿದ್ದೇವೆ ನಿಮ್ಮ ಸಹಕಾರವು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಇರಲಿ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು

ತಾಲೂಕಿನ ಮೂರಾಂಡಹಳ್ಳಿ ಹಾಗೂ ಕೊಂಡರಾಜನಹಳ್ಳಿಯಲ್ಲಿ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಪರವಾಗಿ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಹತ್ತು ವರ್ಷ ಬಿಜೆಪಿ ಒಂದಾದರೂ ಕೊಟ್ಟ ಭರವಸೆಯನ್ನು ಜಾರಿ ಮಾಡಿದ್ದಾರಾ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ ಪ್ರತಿ ಮಹಿಳೆಯರಿಗೆ ೧ ಲಕ್ಷ ಕೊಡ್ತೇವೆ ಎಂದು ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿಯವರು ಘೋಷಣೆ ಮಾಡಿದ್ದಾರೆ ಇದು ಕಾಂಗ್ರೆಸ್ ಪಕ್ಷದ ಬಡವರ ದಲಿತರ ಬಗ್ಗೆ ಇರುವ ಕಾಳಜಿ ಎಂದರು,

ಕೋಲಾರ ಕ್ಷೇತ್ರವನ್ನು ಈಗಾಗಲೇ ಅಭಿವೃದ್ದಿಯತ್ತ ಕೊಂಡೊಯ್ಯಲಾಗುತ್ತಿದೆ, ಕಾಂಗ್ರೆಸ್ ಪಕ್ಷ ದೇಶಕ್ಕೆ ಸ್ವಾತಂತ್ರ್ಯ ಕೊಟ್ಟಂತ ಪಕ್ಷ ದೇಶಕ್ಕೆ ವಿದ್ಯುತ್, ಟಿವಿ, ಬಡವರಿಗೆ ಭೂಮಿ ನೀಡಿದ್ದು ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ನೀಡಿದೆ ಹಾಗಾಗಿಯೇ ಕಾಂಗ್ರೇಸ್ ಪಕ್ಷವನ್ನು ದೇಶದಲ್ಲಿ‌ ಅಧಿಕಾರಕ್ಕೆ ತಂದರೆ ಒಂದಲ್ಲ ಒಂದು ರೀತಿಯಲ್ಲಿ ಬಡವರಿಗೆ ಅನುಕೂಲವಾಗುವಂತೆ ಮಾಡುತ್ತಾರೆ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಬೆಂಬಲವಿರಲಿ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಕೋಲಾರದಿಂದ ಕೆವಿ ಗೌತಮ್ ಅವರನ್ನು ಅಧಿಕೃತವಾಗಿ ಅಭ್ಯರ್ಥಿಯಾಗಿದ್ದಾರೆ, ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿ ವಿದ್ಯಾರ್ಥಿ ಘಟಕದಲ್ಲಿ ಸಂಘಟನೆ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದ್ದಾರೆ, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ‌ ಕಳೆದ 17 ಚುನಾವಣೆಗಳ ಪೈಕಿ 15 ಚುನಾವಣೆಗಳಲ್ಲಿ‌ 15 ಬಾರಿ ಗೆದ್ದಿದೆ, ನಮ್ಮ ಪಕ್ಷದ ಜಾತ್ಯಾತೀತ ತತ್ವ ಸಿದ್ದಾಂತಗಳನ್ನು ಯೋಜನೆಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗಬೇಕಿದೆ ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ೫ ಗ್ಯಾರೆಂಟಿಗಳನ್ನು ಘೋಷಣೆ ಮಾಡಿದ್ದೆವು ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದ ಎಂಟು ತಿಂಗಳಲ್ಲಿ ೫ ಗ್ಯಾರೆಂಟಿಗಳನ್ನು ಜಾರಿ ಮಾಡಿ ಫಲಾನುಭವಿಗಳಿಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರಿಗೆ ತಲುಪಿಸಿದ್ದೇವೆ ಎಂದರು.

ಬಿಜೆಪಿಯವರು ಸಹ  2014ರ ಚುನಾವಣೆಯ ಪೂರ್ವದಲ್ಲಿ ಕೆಲವು ಆಶ್ವಾಸನೆ ನೀಡಿದ್ದರು. ಅದರಲ್ಲಿ ಪ್ರಮುಖವಾಗಿ ಕಾಂಗ್ರೇಸ್ ನವರು ಕಪ್ಪು ಹಣವನ್ನು ಸ್ವಿಸ್ ಬ್ಯಾಂಕ್ ನಲ್ಲಿ ಇಟ್ಟಿದ್ದಾರೆ ಅದನ್ನು ತಂದು ದೇಶದ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಣ ಕೊಡುತ್ತೇವೆ ಎಂದು ಆಶ್ವಾಸನೆ ನೀಡಿದ್ದರು ಅಧಿಕಾರಕ್ಕೆ ಬಂದು ೧೦ ವರ್ಷದಲ್ಲಿ ಯಾವೊಬ್ಬರಿಗೂ ೧೫ ಲಕ್ಷ ಹಣ ನೀಡಲಿಲ್ಲ, ಅದರಂತೆ ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಇಳಿಸುತ್ತೇವೆ ಎಂದಿದ್ದರೂ ದುಪ್ಪಟ್ಡು ಬೆಲೆ ಏರಿಕೆ ಮಾಡಿದ್ದಾರೆ, ಬಿಜೆಪಿಯು ಜಾತಿ ಜಾತಿಗಳ ನಡುವೆ ಕೋಮು ಸಂಘರ್ಷ ಉಂಟು ಮಾಡಿ ಗಲಭೆಗಳನ್ನು ಮಾಡುಡುವುದು ಬಿಟ್ಟರೆ ಅಭಿವೃದ್ದಿ ಬಿಜೆಪಿಯಿಂದ ಶೂನ್ಯ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ೪೦೦ ಸೀಟು ಬಂದರೆ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎನ್ನುತ್ತಿದ್ದಾರೆ ಹಾಗಾಗಿ ಪ್ರತಿಯೊಬ್ಬರು ಕಾಂಗ್ರೇಸ್ ಅಭ್ಯರ್ಥಿಗೆ ಮತ ನೀಡುವ ಮೂಲಕ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ,ದೇಶದ ಪ್ರಜಾಪ್ರಭುತ್ವದ ಹಬ್ಬ ಲೋಕಸಭಾ ಚುನಾವಣೆ ಅದಕ್ಕೆ ನೀವೆ ಮಾಲೀಕರು ನೀವೇ ಯಜಮಾನರು ನಿಮ್ಮ ಹಕ್ಕು ನಿಮ್ಮ ಜವಾಬ್ದಾರಿ, ದೇಶ ಯಾವ ದಿಕ್ಕಿನಲ್ಲಿ ಹೋಗಬೇಕು ಎನ್ನುವ ಚಿಂತೆಯೊಂದಿಗೆ ಜಾತ್ಯಾತೀತ ಹಾಗೂ ಅಭಿವೃದ್ದಿಗೆ ಮತ್ತೊಂದು ಹೆಸರಾಗಿರುವ ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸಬೇಕು ಎಂದರು.

ಕಳೆದ ಹತ್ತು ವರ್ಷಗಳಲ್ಲಿ ಆಡಳಿತ ವ್ಯವಸ್ಥೆ ಹೇಗಿತ್ತು, ರೈತರ ಪರವಾದ ಕಾರ್ಯಕ್ರಮಗಳನ್ನು ಮಾಡಿದ್ದಾರೆಯೇ, ಜನರ ಬದುಕಿಗಾಗಿ ಯಾವುದಾದ್ರೂ ಒಂದೇ ಒಂದು ವ್ಯವಸ್ಥೆ ಮಾಡಲಿಲ್ಲ, ಯುವ ಜನತೆ ಕೇಂದ್ರ ಸರ್ಕಾರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳಬೇಕಿದೆ, ದೇಶದ ಚುನಾವಣೆ ರೈತರಿಗೆ ಶೋಷಿತರಿಗೆ, ಮಹಿಳೆಯರಿಗೆ ಯಾವ ರೀತಿ ಸಂಬಲೀಕರಣಕ್ಕಾಗಿ ಯೋಜನೆಗಳನ್ನು ಮಾಡುತ್ತಿದ್ದಾರೆ ಅನ್ನೋದು ಮುಖ್ಯ ಹಾಗಾಗಿ ಪ್ರತಿಯೊಬ್ಬರೂ ಕಾಂಗ್ರೇಸ್ ಅಭ್ಯರ್ಥಿಗೆ ಕೆವಿ ಗೌತಮ್ ಅವರನ್ನು ಬೆಂಬಲಿಸಬೇಕು ಎಂದರು.

ಕಾಂಗ್ರೇಸ್ ಅಭ್ಯರ್ಥಿ ಕೆವಿ ಗೌತಮ್ ಮಾತನಾಡಿ, ಪಕ್ಷಕ್ಕೆ ನಿಷ್ಟೆಯಿಂದ ಕೆಲಸ ಮಾಡಿದ್ದಲ್ಲಿ ಗುರುತಿಸಿ ಒಳ್ಳೆಯ ಸ್ಥಾನ ಕೊಡುತ್ತೆ ಅನ್ನೋದು ನಾನೇ ಉದಾಹಣೆ, ಬೇರೆ ರಾಜ್ಯದಲ್ಲಿ ಬಿಜೆಪಿಯ ಅನಾಚಾರಗಳು ಹೆಚ್ಚಾಗಿದೆ ಗುಜರಾತ್, ಯುಪಿ ಸೇರಿದಂತೆ ಅನೇಕ ಕಡೆಗಳಲ್ಲಿ ದೌರ್ಜನ್ಯ ದಬ್ಬಾಳಿಕೆ ಮಾಡುತ್ತಿದ್ದಾರೆ ರೈತರ ಪ್ರತಿಭಟನೆ ವೇಳೆ ೬೦೦ ಜನರು ಸತ್ತರೂ ಒಂದೇ ಒಂದು ಹನಿ ಕಣ್ಣೀರನ್ನು ಹಾಕಲಿಲ್ಲ ಪ್ರಧಾನಿ ಮೋದಿ, ಕಳೆದ ಹತ್ತು ವರ್ಷದಲ್ಲಿ ಬಿಜೆಪಿ ಯವರು ನೀಡಿರುವ ಒಂದೇ ಒಂದು ವಾಗ್ದಾನವನ್ನು ಈಡೇರಿಸಲಿಲ್ಲ ಸಂವಿಧಾನ ಅಪಾಯದಲ್ಲಿದೆ ರೈತರಿಗೆ ಆದಾವಿಲ್ಲ, ಮಹಿಳೆಯರಿಗೆ ರಕ್ಷಣೆ ಇಲ್ಲ, ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಿ ಜನರ ಅಭಿವೃದ್ಧಿಗೆ ಕಾಂಗ್ರೆಸ್ ಕಾರಣವಾಗಿದೆ ನನಗೆ ಮತ ಕೊಟ್ಟು ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದರು

ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀಕೃಷ್ಣ, ನಾಗನಾಳ ಸೋಮಣ್ಣ,ವ ಮುನಿಅಂಜಿನಪ್ಪ, ಕೆ.ವಿ ದಯಾನಂದ್, ವಕ್ಕಲೇರಿ ರಾಜಪ್ಪ, ಮಂಜುನಾಥ್, ಅಂಬರೀಷ್, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಕೊಂಡರಾಜನಹಳ್ಳಿ ಗ್ರಾಪಂ ಅಧ್ಯಕ್ಷ ಮಂಜುನಾಥ್, ಖಾದ್ರಿಪುರ ಬಾಬು, ನಿರಂಜನ್ ರಾಮಚಂದ್ರಪ್ಪ, ಜಯರಾಮ್ ಮುಂತಾದವರು ಇದ್ದರು

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

4 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

5 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

10 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago