ನೇಹಾ ಹಿರೇಮಠ ಹತ್ಯೆ ಪ್ರಕರಣ: ಹತ್ಯೆ ಖಂಡಿಸಿ ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ

ನೇಹಾ ಹಿರೇಮಠ ಹತ್ಯೆ ಖಂಡಿಸಿ ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯಾದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ವಿರೋಧಿ, ಹಿಂದೂ ವಿರೋಧಿ ಚಟುವಟಿಕೆ ಹೆಚ್ಚಾಗಿ ಶಾಂತಿ ಸೌಹಾರ್ದತೆ ಕದಡುತ್ತಿದೆ. ಭಯೋತ್ಪಾದಕತೆ ಹೆಚ್ಚಾಗುತ್ತಿದೆ. ಹಿಂದೂಗಳ ಮೇಲೆ ದಬ್ಬಾಳಿಕೆ, ಕೊಲೆಯಂತಹ ಪ್ರಕರಣಗಳು ಮರುಕಳಿಸುತ್ತಿವೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಧೀರಜ್ ಮುನಿರಾಜ್ ಕಿಡಿಕಾರಿದರು.

ನೇಹಾಳನ್ನು ಹತ್ಯೆ ಮಾಡಿದ ಕೊಲೆಗಾರನನ್ನು ಸಾರ್ವಜನಿಕವಾಗಿ ಶಿಕ್ಷೆ ನೀಡಬೇಕು. ರಾಜ್ಯದಲ್ಲಿ ಇಂತಹ ಹತ್ಯೆಗಳು ಮರುಕಳಿಸದಂತೆ ಸರ್ಕಾರ ಕ್ರಮವಹಿಸಬೇಕು. ಹೆಣ್ಣು ಮಕ್ಕಳ ಗೌರವ ಉಳಿಸುವವರೆಗೂ ಬಿಜೆಪಿ‌ ಪ್ರತಿಭಟನೆ ನಡೆಸುತ್ತಲೇ ಇರುತ್ತದೆ. ಇದರಲ್ಲಿ ನಾವು ರಾಜಕೀಯ ನಡೆಸುವುದಿಲ್ಲ. ಮಹಿಳೆಯರ ಗೌರವಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ತಿಳಿಸಿದರು.‌

ಲವ್ ಜಿಹಾದ್, ಬಲವಂತದ ಮತಾಂತರ ಸೇರಿದಂತೆ ಹಿಂದೂ ವಿರೋಧಿ ಚಟುವಟಿಕೆಗಳು ಉತ್ತರ ಕರ್ನಾಟಕಕ್ಕೂ ವ್ಯಾಪಿಸಿದೆ. ಹಿಂದೂ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗುತ್ತಿದೆ. ಇಂತಹ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿದರು.

ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಸೇರಿದಂತೆ ಎಲ್ಲಾ ರೀತಿಯಲ್ಲಿ ಸಬಲರಾಗಬೇಕೆಂದು ಬಿಜೆಪಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯಾವ ಯೋಜನೆ ಜಾರಿ ಮಾಡುತ್ತಿಲ್ಲ ಎಂದು ಗುಡುಗಿದರು.

ಕೇರಳದಲ್ಲಿ‌ 70 ಸಾವಿರಕ್ಕೂ ಹೆಚ್ಚು ಹಿಂದೂ ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ. ಪತ್ತೆ ಹಚ್ಚುವುದಕ್ಕೆ ಪೊಲೀಸರಿಗೂ ಸಾದ್ಯವಾಗಿಲ್ಲ. ನಾಳೆ ನಮ್ಮ ಮನೆ ಹೆಣ್ಣು ಮಕ್ಕಳಿಗೆ ಈ ಪರಿಸ್ಥಿತಿ ಬರದಂತೆ ತಡೆಯಬೇಕು ಎಂದರು.

ಈ ವೇಳೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಬಜರಂಗದಳ ಸದಸ್ಯರು ‌ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

1 hour ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

2 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

5 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

8 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

10 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

15 hours ago