ನೇಹಾ ಹಿರೇಮಠ ಹತ್ಯೆ ಪ್ರಕರಣ: ಹತ್ಯೆ ಖಂಡಿಸಿ ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ

ನೇಹಾ ಹಿರೇಮಠ ಹತ್ಯೆ ಖಂಡಿಸಿ ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯಾದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ವಿರೋಧಿ, ಹಿಂದೂ ವಿರೋಧಿ ಚಟುವಟಿಕೆ ಹೆಚ್ಚಾಗಿ ಶಾಂತಿ ಸೌಹಾರ್ದತೆ ಕದಡುತ್ತಿದೆ. ಭಯೋತ್ಪಾದಕತೆ ಹೆಚ್ಚಾಗುತ್ತಿದೆ. ಹಿಂದೂಗಳ ಮೇಲೆ ದಬ್ಬಾಳಿಕೆ, ಕೊಲೆಯಂತಹ ಪ್ರಕರಣಗಳು ಮರುಕಳಿಸುತ್ತಿವೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಧೀರಜ್ ಮುನಿರಾಜ್ ಕಿಡಿಕಾರಿದರು.

ನೇಹಾಳನ್ನು ಹತ್ಯೆ ಮಾಡಿದ ಕೊಲೆಗಾರನನ್ನು ಸಾರ್ವಜನಿಕವಾಗಿ ಶಿಕ್ಷೆ ನೀಡಬೇಕು. ರಾಜ್ಯದಲ್ಲಿ ಇಂತಹ ಹತ್ಯೆಗಳು ಮರುಕಳಿಸದಂತೆ ಸರ್ಕಾರ ಕ್ರಮವಹಿಸಬೇಕು. ಹೆಣ್ಣು ಮಕ್ಕಳ ಗೌರವ ಉಳಿಸುವವರೆಗೂ ಬಿಜೆಪಿ‌ ಪ್ರತಿಭಟನೆ ನಡೆಸುತ್ತಲೇ ಇರುತ್ತದೆ. ಇದರಲ್ಲಿ ನಾವು ರಾಜಕೀಯ ನಡೆಸುವುದಿಲ್ಲ. ಮಹಿಳೆಯರ ಗೌರವಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ತಿಳಿಸಿದರು.‌

ಲವ್ ಜಿಹಾದ್, ಬಲವಂತದ ಮತಾಂತರ ಸೇರಿದಂತೆ ಹಿಂದೂ ವಿರೋಧಿ ಚಟುವಟಿಕೆಗಳು ಉತ್ತರ ಕರ್ನಾಟಕಕ್ಕೂ ವ್ಯಾಪಿಸಿದೆ. ಹಿಂದೂ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗುತ್ತಿದೆ. ಇಂತಹ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿದರು.

ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಸೇರಿದಂತೆ ಎಲ್ಲಾ ರೀತಿಯಲ್ಲಿ ಸಬಲರಾಗಬೇಕೆಂದು ಬಿಜೆಪಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯಾವ ಯೋಜನೆ ಜಾರಿ ಮಾಡುತ್ತಿಲ್ಲ ಎಂದು ಗುಡುಗಿದರು.

ಕೇರಳದಲ್ಲಿ‌ 70 ಸಾವಿರಕ್ಕೂ ಹೆಚ್ಚು ಹಿಂದೂ ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ. ಪತ್ತೆ ಹಚ್ಚುವುದಕ್ಕೆ ಪೊಲೀಸರಿಗೂ ಸಾದ್ಯವಾಗಿಲ್ಲ. ನಾಳೆ ನಮ್ಮ ಮನೆ ಹೆಣ್ಣು ಮಕ್ಕಳಿಗೆ ಈ ಪರಿಸ್ಥಿತಿ ಬರದಂತೆ ತಡೆಯಬೇಕು ಎಂದರು.

ಈ ವೇಳೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಬಜರಂಗದಳ ಸದಸ್ಯರು ‌ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago