ನೇಹಾ ಹಿರೇಮಠ ಹತ್ಯೆ ಖಂಡಿಸಿ ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯಾದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ವಿರೋಧಿ, ಹಿಂದೂ ವಿರೋಧಿ ಚಟುವಟಿಕೆ ಹೆಚ್ಚಾಗಿ ಶಾಂತಿ ಸೌಹಾರ್ದತೆ ಕದಡುತ್ತಿದೆ. ಭಯೋತ್ಪಾದಕತೆ ಹೆಚ್ಚಾಗುತ್ತಿದೆ. ಹಿಂದೂಗಳ ಮೇಲೆ ದಬ್ಬಾಳಿಕೆ, ಕೊಲೆಯಂತಹ ಪ್ರಕರಣಗಳು ಮರುಕಳಿಸುತ್ತಿವೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಧೀರಜ್ ಮುನಿರಾಜ್ ಕಿಡಿಕಾರಿದರು.
ನೇಹಾಳನ್ನು ಹತ್ಯೆ ಮಾಡಿದ ಕೊಲೆಗಾರನನ್ನು ಸಾರ್ವಜನಿಕವಾಗಿ ಶಿಕ್ಷೆ ನೀಡಬೇಕು. ರಾಜ್ಯದಲ್ಲಿ ಇಂತಹ ಹತ್ಯೆಗಳು ಮರುಕಳಿಸದಂತೆ ಸರ್ಕಾರ ಕ್ರಮವಹಿಸಬೇಕು. ಹೆಣ್ಣು ಮಕ್ಕಳ ಗೌರವ ಉಳಿಸುವವರೆಗೂ ಬಿಜೆಪಿ ಪ್ರತಿಭಟನೆ ನಡೆಸುತ್ತಲೇ ಇರುತ್ತದೆ. ಇದರಲ್ಲಿ ನಾವು ರಾಜಕೀಯ ನಡೆಸುವುದಿಲ್ಲ. ಮಹಿಳೆಯರ ಗೌರವಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಸೇರಿದಂತೆ ಎಲ್ಲಾ ರೀತಿಯಲ್ಲಿ ಸಬಲರಾಗಬೇಕೆಂದು ಬಿಜೆಪಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯಾವ ಯೋಜನೆ ಜಾರಿ ಮಾಡುತ್ತಿಲ್ಲ ಎಂದು ಗುಡುಗಿದರು.
ಕೇರಳದಲ್ಲಿ 70 ಸಾವಿರಕ್ಕೂ ಹೆಚ್ಚು ಹಿಂದೂ ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ. ಪತ್ತೆ ಹಚ್ಚುವುದಕ್ಕೆ ಪೊಲೀಸರಿಗೂ ಸಾದ್ಯವಾಗಿಲ್ಲ. ನಾಳೆ ನಮ್ಮ ಮನೆ ಹೆಣ್ಣು ಮಕ್ಕಳಿಗೆ ಈ ಪರಿಸ್ಥಿತಿ ಬರದಂತೆ ತಡೆಯಬೇಕು ಎಂದರು.
ಈ ವೇಳೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಬಜರಂಗದಳ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…