ನೇಹಾ ಹಿರೇಮಠ ಹತ್ಯೆ ಪ್ರಕರಣ: ಹತ್ಯೆ ಖಂಡಿಸಿ ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ

ನೇಹಾ ಹಿರೇಮಠ ಹತ್ಯೆ ಖಂಡಿಸಿ ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯಾದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ವಿರೋಧಿ, ಹಿಂದೂ ವಿರೋಧಿ ಚಟುವಟಿಕೆ ಹೆಚ್ಚಾಗಿ ಶಾಂತಿ ಸೌಹಾರ್ದತೆ ಕದಡುತ್ತಿದೆ. ಭಯೋತ್ಪಾದಕತೆ ಹೆಚ್ಚಾಗುತ್ತಿದೆ. ಹಿಂದೂಗಳ ಮೇಲೆ ದಬ್ಬಾಳಿಕೆ, ಕೊಲೆಯಂತಹ ಪ್ರಕರಣಗಳು ಮರುಕಳಿಸುತ್ತಿವೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಧೀರಜ್ ಮುನಿರಾಜ್ ಕಿಡಿಕಾರಿದರು.

ನೇಹಾಳನ್ನು ಹತ್ಯೆ ಮಾಡಿದ ಕೊಲೆಗಾರನನ್ನು ಸಾರ್ವಜನಿಕವಾಗಿ ಶಿಕ್ಷೆ ನೀಡಬೇಕು. ರಾಜ್ಯದಲ್ಲಿ ಇಂತಹ ಹತ್ಯೆಗಳು ಮರುಕಳಿಸದಂತೆ ಸರ್ಕಾರ ಕ್ರಮವಹಿಸಬೇಕು. ಹೆಣ್ಣು ಮಕ್ಕಳ ಗೌರವ ಉಳಿಸುವವರೆಗೂ ಬಿಜೆಪಿ‌ ಪ್ರತಿಭಟನೆ ನಡೆಸುತ್ತಲೇ ಇರುತ್ತದೆ. ಇದರಲ್ಲಿ ನಾವು ರಾಜಕೀಯ ನಡೆಸುವುದಿಲ್ಲ. ಮಹಿಳೆಯರ ಗೌರವಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ತಿಳಿಸಿದರು.‌

ಲವ್ ಜಿಹಾದ್, ಬಲವಂತದ ಮತಾಂತರ ಸೇರಿದಂತೆ ಹಿಂದೂ ವಿರೋಧಿ ಚಟುವಟಿಕೆಗಳು ಉತ್ತರ ಕರ್ನಾಟಕಕ್ಕೂ ವ್ಯಾಪಿಸಿದೆ. ಹಿಂದೂ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗುತ್ತಿದೆ. ಇಂತಹ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿದರು.

ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಸೇರಿದಂತೆ ಎಲ್ಲಾ ರೀತಿಯಲ್ಲಿ ಸಬಲರಾಗಬೇಕೆಂದು ಬಿಜೆಪಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯಾವ ಯೋಜನೆ ಜಾರಿ ಮಾಡುತ್ತಿಲ್ಲ ಎಂದು ಗುಡುಗಿದರು.

ಕೇರಳದಲ್ಲಿ‌ 70 ಸಾವಿರಕ್ಕೂ ಹೆಚ್ಚು ಹಿಂದೂ ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ. ಪತ್ತೆ ಹಚ್ಚುವುದಕ್ಕೆ ಪೊಲೀಸರಿಗೂ ಸಾದ್ಯವಾಗಿಲ್ಲ. ನಾಳೆ ನಮ್ಮ ಮನೆ ಹೆಣ್ಣು ಮಕ್ಕಳಿಗೆ ಈ ಪರಿಸ್ಥಿತಿ ಬರದಂತೆ ತಡೆಯಬೇಕು ಎಂದರು.

ಈ ವೇಳೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಬಜರಂಗದಳ ಸದಸ್ಯರು ‌ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

7 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

7 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

22 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago