ನೇಹಾ ಹಿರೇಮಠ ಹತ್ಯೆ ಪ್ರಕರಣ: ಹತ್ಯೆ ಖಂಡಿಸಿ ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ

ನೇಹಾ ಹಿರೇಮಠ ಹತ್ಯೆ ಖಂಡಿಸಿ ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯಾದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ವಿರೋಧಿ, ಹಿಂದೂ ವಿರೋಧಿ ಚಟುವಟಿಕೆ ಹೆಚ್ಚಾಗಿ ಶಾಂತಿ ಸೌಹಾರ್ದತೆ ಕದಡುತ್ತಿದೆ. ಭಯೋತ್ಪಾದಕತೆ ಹೆಚ್ಚಾಗುತ್ತಿದೆ. ಹಿಂದೂಗಳ ಮೇಲೆ ದಬ್ಬಾಳಿಕೆ, ಕೊಲೆಯಂತಹ ಪ್ರಕರಣಗಳು ಮರುಕಳಿಸುತ್ತಿವೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಧೀರಜ್ ಮುನಿರಾಜ್ ಕಿಡಿಕಾರಿದರು.

ನೇಹಾಳನ್ನು ಹತ್ಯೆ ಮಾಡಿದ ಕೊಲೆಗಾರನನ್ನು ಸಾರ್ವಜನಿಕವಾಗಿ ಶಿಕ್ಷೆ ನೀಡಬೇಕು. ರಾಜ್ಯದಲ್ಲಿ ಇಂತಹ ಹತ್ಯೆಗಳು ಮರುಕಳಿಸದಂತೆ ಸರ್ಕಾರ ಕ್ರಮವಹಿಸಬೇಕು. ಹೆಣ್ಣು ಮಕ್ಕಳ ಗೌರವ ಉಳಿಸುವವರೆಗೂ ಬಿಜೆಪಿ‌ ಪ್ರತಿಭಟನೆ ನಡೆಸುತ್ತಲೇ ಇರುತ್ತದೆ. ಇದರಲ್ಲಿ ನಾವು ರಾಜಕೀಯ ನಡೆಸುವುದಿಲ್ಲ. ಮಹಿಳೆಯರ ಗೌರವಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ತಿಳಿಸಿದರು.‌

ಲವ್ ಜಿಹಾದ್, ಬಲವಂತದ ಮತಾಂತರ ಸೇರಿದಂತೆ ಹಿಂದೂ ವಿರೋಧಿ ಚಟುವಟಿಕೆಗಳು ಉತ್ತರ ಕರ್ನಾಟಕಕ್ಕೂ ವ್ಯಾಪಿಸಿದೆ. ಹಿಂದೂ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗುತ್ತಿದೆ. ಇಂತಹ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿದರು.

ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಸೇರಿದಂತೆ ಎಲ್ಲಾ ರೀತಿಯಲ್ಲಿ ಸಬಲರಾಗಬೇಕೆಂದು ಬಿಜೆಪಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯಾವ ಯೋಜನೆ ಜಾರಿ ಮಾಡುತ್ತಿಲ್ಲ ಎಂದು ಗುಡುಗಿದರು.

ಕೇರಳದಲ್ಲಿ‌ 70 ಸಾವಿರಕ್ಕೂ ಹೆಚ್ಚು ಹಿಂದೂ ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ. ಪತ್ತೆ ಹಚ್ಚುವುದಕ್ಕೆ ಪೊಲೀಸರಿಗೂ ಸಾದ್ಯವಾಗಿಲ್ಲ. ನಾಳೆ ನಮ್ಮ ಮನೆ ಹೆಣ್ಣು ಮಕ್ಕಳಿಗೆ ಈ ಪರಿಸ್ಥಿತಿ ಬರದಂತೆ ತಡೆಯಬೇಕು ಎಂದರು.

ಈ ವೇಳೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಬಜರಂಗದಳ ಸದಸ್ಯರು ‌ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

33 minutes ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

2 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

7 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago