ನೈಜ ಪತ್ರಕರ್ತರಿಗೆ ಮಾತ್ರ ಸಂಘದಲ್ಲಿ ಅವಕಾಶ- ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

ಪತ್ರಕರ್ತರು ಸಮಾಜವನ್ನು ತಿದ್ದುವ ಸೇನಾನಿಗಳಾಗಿದ್ದು, ನಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಮೌಲ್ಯಗಳನ್ನು ಅಳವಡಿಸಿಕೊಂಡು ಕೆಲಸ ಮಾಡಬೇಕು. ಕಾರ್ಯನಿರತ ಪತ್ರಕರ್ತರ ಸಂಘ ಯಶಸ್ವಿಯಾಗಿ 90 ವರ್ಷಗಳನ್ನು ಪೂರೈಸಿ ತನ್ನದೇ ಆದ ಮೈಲಿಗಲ್ಲನ್ನು ಸ್ಥಾಪಿಸಿದೆ. ಡಿ ವಿ ಗುಂಡಪ್ಪನವರು ಸ್ಥಾಪಿಸಿ ಬಿಟ್ಟು ಹೋಗಿರುವ ಈ ಸಂಘವನ್ನು ನಾವು ಕೂಡ ಯಾವುದೇ ರೀತಿಯ ಕಳಂಕ ಬಾರದಂತೆ ಯಶಸ್ವಿಯಾಗಿ ಮುನ್ನಡೆಸಬೇಕು ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜಿ.ಶ್ರೀನಿವಾಸ್‌ ಹಾಗೂ ದೊಡ್ಡಬಳ್ಳಾಪುರ ತಾಲೂಕು ಕಾರ್ಯನಿರತಾ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರನ್ನು ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಅಭಿನಂದಿಸಿದರು. ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ತಾಲೂಕು ಸಂಘಗಳಿಗೆ ನೂತನವಾಗಿ ಆಯ್ಕೆಯಾಗುವ ಪದಾಧಿಕಾರಿಗಳು ಸಂಘದ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಏನೇ ಮನಸ್ತಾಪ ಇದ್ದರೂ ಕೂಡ ಅಲ್ಲೇ ಸಮಿತಿಯೊಳಗೆ ಬಗೆಹರಿಸಿಕೊಂಡು ಸಂಘದ ಹಾಗೂ ಸದಸ್ಯರ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ನೈಜ ಪತ್ರಕರ್ತರನ್ನು ಗುರುತಿಸಿ 

ಪ್ರಮುಖವಾಗಿ ಸಂಘದಲ್ಲಿ ಸದಸ್ಯತ್ವ ನೀಡುವ ಸಂದರ್ಭದಲ್ಲಿ ನೈಜ ಪತ್ರಕರ್ತರಿಗೆ ಅವಕಾಶ ನೀಡುವ ಕೆಲಸ ನೂತನ ಪದಾಧಿಕಾರಿಗಳಿಂದ ಆಗಬೇಕು. ಪತ್ರಿಕಾ ಕೆಲಸವನ್ನೇ ಮಾಡದೆ, ಪತ್ರಿಕೆಯನ್ನೇ ಮುದ್ರಣ ಮಾಡದೆ ಇರುವ ವ್ಯಕ್ತಿಗಳಿಗೆ ಸದಸ್ಯತ್ವ ನೀಡದೆ ಸಂಘದ ಧ್ಯೇಯೋದ್ದೇಶಗಳಿಗೆ ಬದ್ಧರಾಗಿ ಸಂಘವನ್ನು ಮುನ್ನಡೆಸಬೇಕು. ಪದಾಧಿಕಾರಿಗಳಾದವರು ಸಂಘದ ಸದಸ್ಯರಿಂದ ಬೆರಳು ತೋರಿಸಿಕೊಳ್ಳುವ ಅಷ್ಟರಮಟ್ಟಿಗೆ  ಹೋಗಬಾರದು. ಈ ನಿಟ್ಟಿನಲ್ಲಿ ಸಾಕಷ್ಟು ಜಾಗರೂಕರಾಗಿ ಕೆಲಸ ಮಾಡಿ ಎಂದು ಕಿವಿ ಮಾತನ್ನ ಹೇಳಿದರು.

ಈ ವೇಳೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿಸಿ ಲೋಕೇಶ್,  ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್, ಖಜಾಂಚಿ ಶಾಂತ ಮೂರ್ತಿ, ಉಪಾಧ್ಯಕ್ಷ ಮುರಳಿ ಮೋಹನ್, ನಿರ್ದೇಶಕರಾದ ಸತೀಶ್, ರಮೇಶ್ ದೊಡ್ಡಬಳ್ಳಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಚಂದ್ರಶೇಖರ್ ಡಿ ಉಪ್ಪಾರ್, ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ, ಪುರುಷೋತ್ತಮ ಗೌಡ, ಉಪಾಧ್ಯಕ್ಷ ಕೊತ್ತೂರಪ್ಪ, ನಿರ್ದೇಶಕರಾದ ತೆರದಾಳ ಶ್ರೀನಿವಾಸ್, ತಾಲ್ಲೂಕು ಖಜಾಂಚಿ.ಕೃಷ್ಣಮೂರ್ತಿ, ಉಮೇಶ್ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.

Ramesh Babu

Journalist

Recent Posts

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

4 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

4 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

16 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

18 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

18 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

19 hours ago