ಮನುಷ್ಯ ಸಾಮಾನ್ಯದವನಲ್ಲ. “ಹಾಸಿಗೆ ಇದ್ದಷ್ಟು ಕಾಲು ಚಾಚು” ಎಂಬ ಗಾದೆ ಮಾತು, ಇಂದು ಎಲ್ಲೂ ಕೂಡ ಅದು ಅನ್ವಯಿಸುತ್ತಿಲ್ಲ. ಅವನ ಆಸೆಗಳಿಗೆ ಇತಿಮಿತಿಗಳು ಇಲ್ಲದೆ ಆಸೆ -ದುರಾಸೆಯಿಂದ ಪ್ರಕೃತಿಯ ಮೇಲೆ ದಬ್ಬಾಳಿಕೆಗಳು ನಡೆಯುವ ಘಟನೆಗಳ ಕಾವು ಇತ್ತೀಚಿನ ಬೆಳವಣಿಗೆಯಾಗಿಬಿಟ್ಟಿದೆ.
ಆಹಾರ ಗಳಿಕೆಯ ಕೇಂದ್ರವಾಗಿದ್ದ ಕೃಷಿ ಕೂಡ ಇಂದು ಬೃಹತ್ ಉದ್ಯಮವಾಗಿ ಬೆಳೆದಿದೆ. ಅಪಾರವಾದ ಅರಣ್ಯವನ್ನ ನಾಶ ಮಾಡಿ ದೊಡ್ಡ ದೊಡ್ಡ ರೆಸಾರ್ಟ್ ಗಳನ್ನು ಕಟ್ಟಿಕೊಳ್ಳಲಾಗಿದೆ.
ಪ್ರಕೃತಿದತ್ತವಾಗಿ ಅತ್ಯಂತ ಸಂಪತ್ಭರಿತವಾದ ನಮ್ಮ ಭಾರತ ನಿಜಕ್ಕೂ ನೈಸರ್ಗಿಕ ನಿರ್ಮಿತವಾದ ಅಪಾರವಾದ ಅರಣ್ಯಗಳನ್ನ ಹೊಂದಿರುವಂತ ದೊಡ್ಡ ದೇಶ.
ಅರಣ್ಯ ಲೋಕದಲ್ಲಿ ಸಾವಿರಾರು ವರ್ಷಗಳಿಂದ ಬದುಕುತ್ತಿರುವ ಸಾವಿರಾರು ಪ್ರಾಣಿ, ಪಕ್ಷಿಗಳ ಜೀವಸಂಕುಲಗಳಿವೆ ಎನ್ನುವುದನ್ನು ಮರೆತು, ಪ್ರಕೃತಿಯೊಂದಿಗೆ ಮತ್ತು ಜೀವ ಸಂಕುಲಗಳ ಜೊತೆ ಅಭಿವೃದ್ಧಿ ಹೆಸರಿನಲ್ಲಿ ಮಾನವನು ದಬ್ಬಾಳಿಕೆ ಮಾಡುತ್ತಿದ್ದಾನೆ. ಪ್ರಕೃತಿಯಲ್ಲಿ ಪ್ರತಿಯೊಂದು ಜೀವಿ ಕೂಡ ತಾವು ನೆಲೆಸಿರುವ ಪರಿಸರದಲ್ಲಿ ಪರಸ್ಪರ ಹೊಂದಾಣಿಕೆಯಿಂದ ಬದುಕುತ್ತಿರುತ್ತವೆ. ಈ ಶತಮಾನದ ಪ್ರಾರಂಭದಲ್ಲಿ ಭೂಮಿಯ ಮೇಲಿದ್ದ ಜೀವ ಪ್ರಭೇದಗಳು ಈಗಾಗಲೇ ನಶಿಸಿ ಹೋಗಿವೆ. ಕೆಲವು ಪ್ರಭೇದಗಳು ಅವಸಾನದ ಅಂಚಿನಲ್ಲಿವೆ. ಇಂತಹ ಜೀವ ಸಂಕುಲಗಳನ್ನು ಮತ್ತು ಅರಣ್ಯಗಳನ್ನು ರಕ್ಷಿಸುವ ಬದಲು ಭೂಮಿಯ ಮೇಲಿನ ಪರಿಸರವನ್ನು ಹಾಳುಗೆಡುವುದರಲ್ಲಿ ಮನುಷ್ಯ ಮುಖ್ಯ ಪಾತ್ರವಹಿಸುತ್ತಿದ್ದಾನೆ.
ಇದು ಕೇವಲ ಅಮೆರಿಕ ದೇಶದಲ್ಲಿ ಮಾತ್ರವಲ್ಲ ಪ್ರಪಂಚದ ಎಲ್ಲಾ ದೇಶಗಳಲ್ಲೂ ಈ ಸಮಸ್ಯೆ ಕಂಡು ಬರುತ್ತದೆ. ದುರಾದೃಷ್ಟವೇನೆಂದರೆ ನಮ್ಮ ಭಾರತದಲ್ಲಿ ಕೂಡ ಪ್ರಗತಿಗಾಗಿ ಸಾವಿರಾರು ಎಕರೆ ಅರಣ್ಯ ಪ್ರದೇಶವನ್ನು ನಾಶ ಮಾಡಲಾಗುತ್ತಿದೆ. ಈಗ ಪ್ರಸ್ತುತ ನಡೆಯುತ್ತಿರುವ ಹೈದರಾಬಾದ್ ನ ಗಚ್ಚಿಬೌಲಿಯಲ್ಲಿ ಸುಮಾರು 400 ಎಕರೆ ಅರಣ್ಯ ಪ್ರದೇಶದ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ.
1974 ರಿಂದ ಹೈದರಾಬಾದ್ ವಿಶ್ವವಿದ್ಯಾಲಯದ ಅವಿಭಾಜ್ಯ ಅಂಗವಾಗಿರುವ 400 ಎಕರೆಗಳ ಅರಣ್ಯವನ್ನ ವಿವಿಧ ಉದ್ದೇಶಗಳಿಗಾಗಿ ಸರ್ವನಾಶ ಮಾಡಲಾಗುತ್ತಿದೆ. ಸದಾ ಹಚ್ಚ ಹಸಿರಿನಿಂದ ಕಂಗೊಳಿಸಿ ಅಲ್ಲಿನ ವಾತಾವರಣವನ್ನ ತಂಪಾಗಿಸುತ್ತಿದ್ದ ಅರಣ್ಯದಲ್ಲಿ ಈಗ ನೀರಸ ಮೌನ ಆವರಿಸಿದೆ.
ಇಂಥ ಘಟನೆಗಳು ಪದೇ ಪದೇ ನಡೆಯುತ್ತಿದ್ದರು ಕೂಡ ನಾವುಗಳು ಏಕೆ ಮೌನ ತಾಳುತಿದ್ದೇವೊ? ಎಂಬ ಪ್ರಶ್ನೆ ಮನದಲ್ಲಿ ಮೂಡುತ್ತಿದೆ.
🖋📝🖊ಅಪ್ಪುರಾಜ್, ಸ್ನಾತಕೋತ್ತರ ವಿದ್ಯಾರ್ಥಿ
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…