ಮನುಷ್ಯ ಸಾಮಾನ್ಯದವನಲ್ಲ. “ಹಾಸಿಗೆ ಇದ್ದಷ್ಟು ಕಾಲು ಚಾಚು” ಎಂಬ ಗಾದೆ ಮಾತು, ಇಂದು ಎಲ್ಲೂ ಕೂಡ ಅದು ಅನ್ವಯಿಸುತ್ತಿಲ್ಲ. ಅವನ ಆಸೆಗಳಿಗೆ ಇತಿಮಿತಿಗಳು ಇಲ್ಲದೆ ಆಸೆ -ದುರಾಸೆಯಿಂದ ಪ್ರಕೃತಿಯ ಮೇಲೆ ದಬ್ಬಾಳಿಕೆಗಳು ನಡೆಯುವ ಘಟನೆಗಳ ಕಾವು ಇತ್ತೀಚಿನ ಬೆಳವಣಿಗೆಯಾಗಿಬಿಟ್ಟಿದೆ.
ಆಹಾರ ಗಳಿಕೆಯ ಕೇಂದ್ರವಾಗಿದ್ದ ಕೃಷಿ ಕೂಡ ಇಂದು ಬೃಹತ್ ಉದ್ಯಮವಾಗಿ ಬೆಳೆದಿದೆ. ಅಪಾರವಾದ ಅರಣ್ಯವನ್ನ ನಾಶ ಮಾಡಿ ದೊಡ್ಡ ದೊಡ್ಡ ರೆಸಾರ್ಟ್ ಗಳನ್ನು ಕಟ್ಟಿಕೊಳ್ಳಲಾಗಿದೆ.
ಪ್ರಕೃತಿದತ್ತವಾಗಿ ಅತ್ಯಂತ ಸಂಪತ್ಭರಿತವಾದ ನಮ್ಮ ಭಾರತ ನಿಜಕ್ಕೂ ನೈಸರ್ಗಿಕ ನಿರ್ಮಿತವಾದ ಅಪಾರವಾದ ಅರಣ್ಯಗಳನ್ನ ಹೊಂದಿರುವಂತ ದೊಡ್ಡ ದೇಶ.
ಅರಣ್ಯ ಲೋಕದಲ್ಲಿ ಸಾವಿರಾರು ವರ್ಷಗಳಿಂದ ಬದುಕುತ್ತಿರುವ ಸಾವಿರಾರು ಪ್ರಾಣಿ, ಪಕ್ಷಿಗಳ ಜೀವಸಂಕುಲಗಳಿವೆ ಎನ್ನುವುದನ್ನು ಮರೆತು, ಪ್ರಕೃತಿಯೊಂದಿಗೆ ಮತ್ತು ಜೀವ ಸಂಕುಲಗಳ ಜೊತೆ ಅಭಿವೃದ್ಧಿ ಹೆಸರಿನಲ್ಲಿ ಮಾನವನು ದಬ್ಬಾಳಿಕೆ ಮಾಡುತ್ತಿದ್ದಾನೆ. ಪ್ರಕೃತಿಯಲ್ಲಿ ಪ್ರತಿಯೊಂದು ಜೀವಿ ಕೂಡ ತಾವು ನೆಲೆಸಿರುವ ಪರಿಸರದಲ್ಲಿ ಪರಸ್ಪರ ಹೊಂದಾಣಿಕೆಯಿಂದ ಬದುಕುತ್ತಿರುತ್ತವೆ. ಈ ಶತಮಾನದ ಪ್ರಾರಂಭದಲ್ಲಿ ಭೂಮಿಯ ಮೇಲಿದ್ದ ಜೀವ ಪ್ರಭೇದಗಳು ಈಗಾಗಲೇ ನಶಿಸಿ ಹೋಗಿವೆ. ಕೆಲವು ಪ್ರಭೇದಗಳು ಅವಸಾನದ ಅಂಚಿನಲ್ಲಿವೆ. ಇಂತಹ ಜೀವ ಸಂಕುಲಗಳನ್ನು ಮತ್ತು ಅರಣ್ಯಗಳನ್ನು ರಕ್ಷಿಸುವ ಬದಲು ಭೂಮಿಯ ಮೇಲಿನ ಪರಿಸರವನ್ನು ಹಾಳುಗೆಡುವುದರಲ್ಲಿ ಮನುಷ್ಯ ಮುಖ್ಯ ಪಾತ್ರವಹಿಸುತ್ತಿದ್ದಾನೆ.
ಇದು ಕೇವಲ ಅಮೆರಿಕ ದೇಶದಲ್ಲಿ ಮಾತ್ರವಲ್ಲ ಪ್ರಪಂಚದ ಎಲ್ಲಾ ದೇಶಗಳಲ್ಲೂ ಈ ಸಮಸ್ಯೆ ಕಂಡು ಬರುತ್ತದೆ. ದುರಾದೃಷ್ಟವೇನೆಂದರೆ ನಮ್ಮ ಭಾರತದಲ್ಲಿ ಕೂಡ ಪ್ರಗತಿಗಾಗಿ ಸಾವಿರಾರು ಎಕರೆ ಅರಣ್ಯ ಪ್ರದೇಶವನ್ನು ನಾಶ ಮಾಡಲಾಗುತ್ತಿದೆ. ಈಗ ಪ್ರಸ್ತುತ ನಡೆಯುತ್ತಿರುವ ಹೈದರಾಬಾದ್ ನ ಗಚ್ಚಿಬೌಲಿಯಲ್ಲಿ ಸುಮಾರು 400 ಎಕರೆ ಅರಣ್ಯ ಪ್ರದೇಶದ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ.
1974 ರಿಂದ ಹೈದರಾಬಾದ್ ವಿಶ್ವವಿದ್ಯಾಲಯದ ಅವಿಭಾಜ್ಯ ಅಂಗವಾಗಿರುವ 400 ಎಕರೆಗಳ ಅರಣ್ಯವನ್ನ ವಿವಿಧ ಉದ್ದೇಶಗಳಿಗಾಗಿ ಸರ್ವನಾಶ ಮಾಡಲಾಗುತ್ತಿದೆ. ಸದಾ ಹಚ್ಚ ಹಸಿರಿನಿಂದ ಕಂಗೊಳಿಸಿ ಅಲ್ಲಿನ ವಾತಾವರಣವನ್ನ ತಂಪಾಗಿಸುತ್ತಿದ್ದ ಅರಣ್ಯದಲ್ಲಿ ಈಗ ನೀರಸ ಮೌನ ಆವರಿಸಿದೆ.
ಇಂಥ ಘಟನೆಗಳು ಪದೇ ಪದೇ ನಡೆಯುತ್ತಿದ್ದರು ಕೂಡ ನಾವುಗಳು ಏಕೆ ಮೌನ ತಾಳುತಿದ್ದೇವೊ? ಎಂಬ ಪ್ರಶ್ನೆ ಮನದಲ್ಲಿ ಮೂಡುತ್ತಿದೆ.
🖋📝🖊ಅಪ್ಪುರಾಜ್, ಸ್ನಾತಕೋತ್ತರ ವಿದ್ಯಾರ್ಥಿ
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…