ಮನುಷ್ಯ ಸಾಮಾನ್ಯದವನಲ್ಲ. “ಹಾಸಿಗೆ ಇದ್ದಷ್ಟು ಕಾಲು ಚಾಚು” ಎಂಬ ಗಾದೆ ಮಾತು, ಇಂದು ಎಲ್ಲೂ ಕೂಡ ಅದು ಅನ್ವಯಿಸುತ್ತಿಲ್ಲ. ಅವನ ಆಸೆಗಳಿಗೆ ಇತಿಮಿತಿಗಳು ಇಲ್ಲದೆ ಆಸೆ -ದುರಾಸೆಯಿಂದ ಪ್ರಕೃತಿಯ ಮೇಲೆ ದಬ್ಬಾಳಿಕೆಗಳು ನಡೆಯುವ ಘಟನೆಗಳ ಕಾವು ಇತ್ತೀಚಿನ ಬೆಳವಣಿಗೆಯಾಗಿಬಿಟ್ಟಿದೆ.
ಆಹಾರ ಗಳಿಕೆಯ ಕೇಂದ್ರವಾಗಿದ್ದ ಕೃಷಿ ಕೂಡ ಇಂದು ಬೃಹತ್ ಉದ್ಯಮವಾಗಿ ಬೆಳೆದಿದೆ. ಅಪಾರವಾದ ಅರಣ್ಯವನ್ನ ನಾಶ ಮಾಡಿ ದೊಡ್ಡ ದೊಡ್ಡ ರೆಸಾರ್ಟ್ ಗಳನ್ನು ಕಟ್ಟಿಕೊಳ್ಳಲಾಗಿದೆ.
ಪ್ರಕೃತಿದತ್ತವಾಗಿ ಅತ್ಯಂತ ಸಂಪತ್ಭರಿತವಾದ ನಮ್ಮ ಭಾರತ ನಿಜಕ್ಕೂ ನೈಸರ್ಗಿಕ ನಿರ್ಮಿತವಾದ ಅಪಾರವಾದ ಅರಣ್ಯಗಳನ್ನ ಹೊಂದಿರುವಂತ ದೊಡ್ಡ ದೇಶ.
ಅರಣ್ಯ ಲೋಕದಲ್ಲಿ ಸಾವಿರಾರು ವರ್ಷಗಳಿಂದ ಬದುಕುತ್ತಿರುವ ಸಾವಿರಾರು ಪ್ರಾಣಿ, ಪಕ್ಷಿಗಳ ಜೀವಸಂಕುಲಗಳಿವೆ ಎನ್ನುವುದನ್ನು ಮರೆತು, ಪ್ರಕೃತಿಯೊಂದಿಗೆ ಮತ್ತು ಜೀವ ಸಂಕುಲಗಳ ಜೊತೆ ಅಭಿವೃದ್ಧಿ ಹೆಸರಿನಲ್ಲಿ ಮಾನವನು ದಬ್ಬಾಳಿಕೆ ಮಾಡುತ್ತಿದ್ದಾನೆ. ಪ್ರಕೃತಿಯಲ್ಲಿ ಪ್ರತಿಯೊಂದು ಜೀವಿ ಕೂಡ ತಾವು ನೆಲೆಸಿರುವ ಪರಿಸರದಲ್ಲಿ ಪರಸ್ಪರ ಹೊಂದಾಣಿಕೆಯಿಂದ ಬದುಕುತ್ತಿರುತ್ತವೆ. ಈ ಶತಮಾನದ ಪ್ರಾರಂಭದಲ್ಲಿ ಭೂಮಿಯ ಮೇಲಿದ್ದ ಜೀವ ಪ್ರಭೇದಗಳು ಈಗಾಗಲೇ ನಶಿಸಿ ಹೋಗಿವೆ. ಕೆಲವು ಪ್ರಭೇದಗಳು ಅವಸಾನದ ಅಂಚಿನಲ್ಲಿವೆ. ಇಂತಹ ಜೀವ ಸಂಕುಲಗಳನ್ನು ಮತ್ತು ಅರಣ್ಯಗಳನ್ನು ರಕ್ಷಿಸುವ ಬದಲು ಭೂಮಿಯ ಮೇಲಿನ ಪರಿಸರವನ್ನು ಹಾಳುಗೆಡುವುದರಲ್ಲಿ ಮನುಷ್ಯ ಮುಖ್ಯ ಪಾತ್ರವಹಿಸುತ್ತಿದ್ದಾನೆ.
ಇದು ಕೇವಲ ಅಮೆರಿಕ ದೇಶದಲ್ಲಿ ಮಾತ್ರವಲ್ಲ ಪ್ರಪಂಚದ ಎಲ್ಲಾ ದೇಶಗಳಲ್ಲೂ ಈ ಸಮಸ್ಯೆ ಕಂಡು ಬರುತ್ತದೆ. ದುರಾದೃಷ್ಟವೇನೆಂದರೆ ನಮ್ಮ ಭಾರತದಲ್ಲಿ ಕೂಡ ಪ್ರಗತಿಗಾಗಿ ಸಾವಿರಾರು ಎಕರೆ ಅರಣ್ಯ ಪ್ರದೇಶವನ್ನು ನಾಶ ಮಾಡಲಾಗುತ್ತಿದೆ. ಈಗ ಪ್ರಸ್ತುತ ನಡೆಯುತ್ತಿರುವ ಹೈದರಾಬಾದ್ ನ ಗಚ್ಚಿಬೌಲಿಯಲ್ಲಿ ಸುಮಾರು 400 ಎಕರೆ ಅರಣ್ಯ ಪ್ರದೇಶದ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ.
1974 ರಿಂದ ಹೈದರಾಬಾದ್ ವಿಶ್ವವಿದ್ಯಾಲಯದ ಅವಿಭಾಜ್ಯ ಅಂಗವಾಗಿರುವ 400 ಎಕರೆಗಳ ಅರಣ್ಯವನ್ನ ವಿವಿಧ ಉದ್ದೇಶಗಳಿಗಾಗಿ ಸರ್ವನಾಶ ಮಾಡಲಾಗುತ್ತಿದೆ. ಸದಾ ಹಚ್ಚ ಹಸಿರಿನಿಂದ ಕಂಗೊಳಿಸಿ ಅಲ್ಲಿನ ವಾತಾವರಣವನ್ನ ತಂಪಾಗಿಸುತ್ತಿದ್ದ ಅರಣ್ಯದಲ್ಲಿ ಈಗ ನೀರಸ ಮೌನ ಆವರಿಸಿದೆ.
ಇಂಥ ಘಟನೆಗಳು ಪದೇ ಪದೇ ನಡೆಯುತ್ತಿದ್ದರು ಕೂಡ ನಾವುಗಳು ಏಕೆ ಮೌನ ತಾಳುತಿದ್ದೇವೊ? ಎಂಬ ಪ್ರಶ್ನೆ ಮನದಲ್ಲಿ ಮೂಡುತ್ತಿದೆ.
🖋📝🖊ಅಪ್ಪುರಾಜ್, ಸ್ನಾತಕೋತ್ತರ ವಿದ್ಯಾರ್ಥಿ
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…
ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…
ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…
ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…
ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…
ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…