Categories: ಲೇಖನ

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ……….

ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ ಮಾರ್ಗದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಆರ್ಥಿಕವಾಗಿ ಒಂದಷ್ಟು ಸಣ್ಣಪುಟ್ಟ ವ್ಯತ್ಯಾಸಗಳಿರಬಹುದು. ಕೆಲವೊಮ್ಮೆ ಶ್ರೀಮಂತಿಕೆ ಹೆಚ್ಚಾಗಬಹುದು, ಕೆಲವೊಮ್ಮೆ ಬಡತನವೂ ಹೆಚ್ಚಾಗಬಹುದು. ಮತ್ತೆ ಕೆಲವೊಮ್ಮೆ ಸಾಲಗಾರರು ಆಗಬಹುದು. ಆದರೆ ಅವರ ಮನಸ್ಥಿತಿಗಳಲ್ಲಿ ಮಾತ್ರ ಬಹುತೇಕ ಸಾಮ್ಯತೆ ಇರುತ್ತದೆ.

ಎಲ್ಲರೂ ಸಾಮಾನ್ಯವಾಗಿ ಒಂದೇ ರೀತಿಯಲ್ಲಿ ಯೋಚಿಸುತ್ತಾರೆ. ಅತ್ಯಂತ ಶ್ರೀಮಂತರು, ತೀರಾ ಕಡು ಬಡವರು ಮಾತ್ರ ತಮ್ಮ ಆಲೋಚನೆಯಲ್ಲಿ ಭಿನ್ನತೆಯನ್ನು ಹೊಂದಿರುತ್ತಾರೆ. ವಠಾರ ಸಂಸ್ಕೃತಿಯೇ ಇರಲಿ ಅಥವಾ ಅಪಾರ್ಟ್ಮೆಂಟ್ ಸಂಸ್ಕೃತಿಯೇ ಇರಲಿ ಮನಸ್ಥಿತಿ ಮಾತ್ರ ಅದೇ ಸಂಸ್ಕೃತಿಯಾಗಿರುತ್ತದೆ. ವಿದ್ಯಾಭ್ಯಾಸ ಅಥವಾ ಅಕ್ಷರಸ್ಥರ ಸಂಖ್ಯೆ ಹೆಣ್ಣು ಗಂಡು ಇಬ್ಬರಲ್ಲಿಯು ಹೆಚ್ಚಾದರೂ ಸಹ ಮನೋಭಾವ ಮಾತ್ರ ಅದೇ ಇರುತ್ತದೆ. ಆ ರೀತಿಯ ಒಂದು ವಠಾರದ ಸುಪ್ರಭಾತ…….

ಭಕ್ತಿಯ ಸುಪ್ರಭಾತವಲ್ಲ,
ಬದುಕಿನ ಸುಪ್ರಭಾತ ಕೇಳಿ…….

ಬಹುತೇಕ ನಗರದ ವಠಾರಗಳಲ್ಲಿ ಬೆಳಗಿನ ಸುಪ್ರಭಾತ ಸುಮಾರು 5 ಗಂಟೆಗೆ ಪ್ರಾರಂಭವಾಗುತ್ತದೆ…………

ಅಲೆಅಲೆಯಾಗಿ, ವಿವಿಧ ಶಭ್ದ ತರಂಗಗಳು ಕಿವಿಗಪ್ಪಳಿಸುವುದು ಒಂದು ರೋಚಕ ಅನುಭವ………

ಒಂದು ಮನೆಯಿಂದ ಹೆಣ್ಣಿನ ಧ್ವನಿ ತನ್ನ ಗಂಡನಿಗೆ…‌‌
” ನೋಡಿ ಸ್ಕೂಲ್ ಗೆ ಮಗೂನ ಸೇರಿಸ್ಲಿಕ್ಕೆ ನಾಳೇನೇ Last date.
ಏನ್ ಮಾಡ್ತೀರೊ ಗೊತ್ತಿಲ್ಲ. 50000 ರೂಪಾಯಿ ಇವತ್ತು ರಾತ್ರಿ ಒಳಗೆ adjust ಮಾಡಲಿಲ್ಲ ಅಂದ್ರೆ,
ನಾಳೆ ನೀವು ನಂದು, ನನ್ ಮಗೂದು ಹೆಣ ನೋಡ್ಬೇಕು ಅಷ್ಟೆ. ”

ಇನ್ನೊಂದು ಮನೆಯಿಂದ ಗಂಡು ಧ್ವನಿ, ( ಸ್ವಗತ )
“ಅಮ್ಮ ಒಂದು ವಾರದಿಂದ ಒಂದೇ ಸಮನೆ ಕೆಮ್ತಾ ಇದಾರೆ. ಆಸ್ಪತ್ರೆಗೆ ಸೇರಿಸಬೇಕು ಅಂದ್ರೆ,
ಮಿನಿಮಮ್ 5000 ರೂಪಾಯಿ ಬೇಕು. ಅಷ್ಟು ದುಡ್ಡು ನನ್ನಿಂದ ಹೊಂದಿಸಲಿಕ್ಕೆ ಆಗ್ತಾ ಇಲ್ಲ.
ಛೆ, ಈ ನನ್ನ ಜನ್ಮಕ್ಕೆ ಬೆಂಕಿ ಹಾಕ. ಯಾಕಾದ್ರೂ ಬದುಕಿರಬೇಕು. ”

ಮತ್ತೊಂದು ಮನೆಯೊಳಗಿನ ಗಂಡು ಧ್ವನಿ, ಕೋಪದಿಂದ,….
“ಲೇ, ನಾಳೆ ಒಳಗೆ ನಿಮ್ಮಪ್ಪನ ಮನೆಯಿಂದ 1 ಲಕ್ಷ ದುಡ್ಡು ತರಲಿಲ್ಲ ಅಂದ್ರೆ, ನಿನ್ನ – ಮಗೂನ,
ಇಬ್ಬರನ್ನು ಸಾಯಿಸಿ ಜ್ಯೆಲಿಗೆ ಹೋಗ್ ಬಿಡ್ತೀನಿ. ಹುಷಾರ್. ಇದೇ Last chance. ”

ಮಗದೊಂದು ಮನೆಯಲ್ಲಿನ ಹೆಣ್ಣು ಧ್ವನಿ,‌ ಅಳುತ್ತಾ ತನ್ನ ಗಂಡನಿಗೆ,
“ಅಯ್ಯೋ ಮುಂಡೆ ಮಗನೇ, ತಿನ್ನೋಕೆ ಗತಿಯಿಲ್ಲ, ರಾತ್ರಿ ಕಂಠ ಪೂರ್ತಿ ಕುಡಿದು ದನಕ್ಕೆ ಹೊಡೆದಂಗೆ
ಹೊಡಿತೀಯ, ನಿನಗೆ ಬರಬಾರದು ಬರ. ದಾರಿಯಲ್ಲಿ ಓಡಾಡೋ ಯಾವುದಾದರೂ ಬಸ್ಸಿಗೆ ಸಿಕ್ಕಿ ಸಾವಾದ್ರೂ ಬರಬಾರದಾ ನಿನಗೆ. ನನ್ನ ಶಾಪ ತಟ್ಟಲಿ ನಿನಗೆ. ”

ಇನ್ನೊಂದು ಮನೆಯ ಹೆಣ್ಣು ಧ್ವನಿ, ತನ್ನ ಮಗಳಿಗೆ,..
” ಲೇ, ಕಾಲೇಜಿನಲ್ಲಿ ಅದ್ಯಾವನೋ ಹಿಂದೆ ಬೈಕಿನಲ್ಲಿ ಓಡಾಡ್ತಾ ಇದೀಯಂತೆ. ಇದೇ ಲಾಸ್ಟು.
ಇನ್ನೊಂದ್ಸಾರಿ ಈ ವಿಷ್ಯಾ ನನ್ ಕಿವಿಗೆ ಬಿದ್ರೆ, ನಾನೇ ನೇಣಾಕಿ ಸಾಯಿಸಿ ಬಿಡ್ತೀನಿ ಹುಷಾರ್. ”

Digital India, Smart city, Global leader, E-Governence, Brand Bangalore, ಹೀಗೆ ಅನೇಕ ಕನಸುಗಳನ್ನು ಜನರಲ್ಲಿ ಬಿತ್ತುತ್ತಿರುವ ಸರಕಾರಗಳು, ಕೆಳ ಮಧ್ಯಮ ವರ್ಗದ ಜನರ ಬದುಕು ಬವಣೆಗಳನ್ನು ಮೇಲಿನಿಂದ ನೋಡುತ್ತಿರುವಂತಿದೆ,

ಅಯ್ಯಾ, ಶಾಸಕರೇ, ಸಂಸದರೇ, ಮಂತ್ರಿಗಳೇ, ಅಧಿಕಾರಿಗಳೇ,
ಸ್ವಲ್ಪ ಕೆಳಗಿಳಿದು ಬನ್ನಿ.
ಗಮನಿಸಿ ನಮ್ಮನ್ನು, ನಿಮ್ಮ ಮುಂದಿನ ಯೋಜನೆಗಳನ್ನು ರೂಪಿಸುವ ಮೊದಲು.

ಏಕೆಂದರೆ ನಿಜವಾದ ಕೆಳ ಮಧ್ಯಮ ವರ್ಗದ ಬದುಕು ಈಗಲೂ ಇದೇ ರೀತಿಯ ಆದರೆ ಬೇರೆ ಬೇರೆ ರೂಪದಲ್ಲಿ ಬೆಳಗಿನ ನೋವಿನ ಸುಪ್ರಭಾತಗಳೊಂದಿಗೆ ಪ್ರಾರಂಭವಾಗುತ್ತದೆ.

ಇನ್ನು ರಾತ್ರಿಯ ಕರಾಳ ಬದುಕು ನರಕವನ್ನೇ ದರ್ಶನ ಮಾಡಿಸುತ್ತದೆ.
ಹೊಟ್ಟೆ ತುಂಬಿದವರಿಗೆ ಇದು ಅಷ್ಟಾಗಿ ಅರ್ಥವಾಗುವುದಿಲ್ಲ.

ಈ ಸುಪ್ರಭಾತ ಹಸಿದವರಿಗೆ,
ನೋವು ಅನುಭವಿಸಿದವರಿಗೆ,
ಕಷ್ಟಕ್ಕೆ ಸ್ಪಂದಿಸುವವರಿಗೆ ಮಾತ್ರ…

ನೊಂದವರ ನೋವಾ ನೋಯದವರೆತ್ತ ಬಲ್ಲರೋ………..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

2 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

4 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

11 hours ago