Categories: ಲೇಖನ

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ……….

ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ ಮಾರ್ಗದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಆರ್ಥಿಕವಾಗಿ ಒಂದಷ್ಟು ಸಣ್ಣಪುಟ್ಟ ವ್ಯತ್ಯಾಸಗಳಿರಬಹುದು. ಕೆಲವೊಮ್ಮೆ ಶ್ರೀಮಂತಿಕೆ ಹೆಚ್ಚಾಗಬಹುದು, ಕೆಲವೊಮ್ಮೆ ಬಡತನವೂ ಹೆಚ್ಚಾಗಬಹುದು. ಮತ್ತೆ ಕೆಲವೊಮ್ಮೆ ಸಾಲಗಾರರು ಆಗಬಹುದು. ಆದರೆ ಅವರ ಮನಸ್ಥಿತಿಗಳಲ್ಲಿ ಮಾತ್ರ ಬಹುತೇಕ ಸಾಮ್ಯತೆ ಇರುತ್ತದೆ.

ಎಲ್ಲರೂ ಸಾಮಾನ್ಯವಾಗಿ ಒಂದೇ ರೀತಿಯಲ್ಲಿ ಯೋಚಿಸುತ್ತಾರೆ. ಅತ್ಯಂತ ಶ್ರೀಮಂತರು, ತೀರಾ ಕಡು ಬಡವರು ಮಾತ್ರ ತಮ್ಮ ಆಲೋಚನೆಯಲ್ಲಿ ಭಿನ್ನತೆಯನ್ನು ಹೊಂದಿರುತ್ತಾರೆ. ವಠಾರ ಸಂಸ್ಕೃತಿಯೇ ಇರಲಿ ಅಥವಾ ಅಪಾರ್ಟ್ಮೆಂಟ್ ಸಂಸ್ಕೃತಿಯೇ ಇರಲಿ ಮನಸ್ಥಿತಿ ಮಾತ್ರ ಅದೇ ಸಂಸ್ಕೃತಿಯಾಗಿರುತ್ತದೆ. ವಿದ್ಯಾಭ್ಯಾಸ ಅಥವಾ ಅಕ್ಷರಸ್ಥರ ಸಂಖ್ಯೆ ಹೆಣ್ಣು ಗಂಡು ಇಬ್ಬರಲ್ಲಿಯು ಹೆಚ್ಚಾದರೂ ಸಹ ಮನೋಭಾವ ಮಾತ್ರ ಅದೇ ಇರುತ್ತದೆ. ಆ ರೀತಿಯ ಒಂದು ವಠಾರದ ಸುಪ್ರಭಾತ…….

ಭಕ್ತಿಯ ಸುಪ್ರಭಾತವಲ್ಲ,
ಬದುಕಿನ ಸುಪ್ರಭಾತ ಕೇಳಿ…….

ಬಹುತೇಕ ನಗರದ ವಠಾರಗಳಲ್ಲಿ ಬೆಳಗಿನ ಸುಪ್ರಭಾತ ಸುಮಾರು 5 ಗಂಟೆಗೆ ಪ್ರಾರಂಭವಾಗುತ್ತದೆ…………

ಅಲೆಅಲೆಯಾಗಿ, ವಿವಿಧ ಶಭ್ದ ತರಂಗಗಳು ಕಿವಿಗಪ್ಪಳಿಸುವುದು ಒಂದು ರೋಚಕ ಅನುಭವ………

ಒಂದು ಮನೆಯಿಂದ ಹೆಣ್ಣಿನ ಧ್ವನಿ ತನ್ನ ಗಂಡನಿಗೆ…‌‌
” ನೋಡಿ ಸ್ಕೂಲ್ ಗೆ ಮಗೂನ ಸೇರಿಸ್ಲಿಕ್ಕೆ ನಾಳೇನೇ Last date.
ಏನ್ ಮಾಡ್ತೀರೊ ಗೊತ್ತಿಲ್ಲ. 50000 ರೂಪಾಯಿ ಇವತ್ತು ರಾತ್ರಿ ಒಳಗೆ adjust ಮಾಡಲಿಲ್ಲ ಅಂದ್ರೆ,
ನಾಳೆ ನೀವು ನಂದು, ನನ್ ಮಗೂದು ಹೆಣ ನೋಡ್ಬೇಕು ಅಷ್ಟೆ. ”

ಇನ್ನೊಂದು ಮನೆಯಿಂದ ಗಂಡು ಧ್ವನಿ, ( ಸ್ವಗತ )
“ಅಮ್ಮ ಒಂದು ವಾರದಿಂದ ಒಂದೇ ಸಮನೆ ಕೆಮ್ತಾ ಇದಾರೆ. ಆಸ್ಪತ್ರೆಗೆ ಸೇರಿಸಬೇಕು ಅಂದ್ರೆ,
ಮಿನಿಮಮ್ 5000 ರೂಪಾಯಿ ಬೇಕು. ಅಷ್ಟು ದುಡ್ಡು ನನ್ನಿಂದ ಹೊಂದಿಸಲಿಕ್ಕೆ ಆಗ್ತಾ ಇಲ್ಲ.
ಛೆ, ಈ ನನ್ನ ಜನ್ಮಕ್ಕೆ ಬೆಂಕಿ ಹಾಕ. ಯಾಕಾದ್ರೂ ಬದುಕಿರಬೇಕು. ”

ಮತ್ತೊಂದು ಮನೆಯೊಳಗಿನ ಗಂಡು ಧ್ವನಿ, ಕೋಪದಿಂದ,….
“ಲೇ, ನಾಳೆ ಒಳಗೆ ನಿಮ್ಮಪ್ಪನ ಮನೆಯಿಂದ 1 ಲಕ್ಷ ದುಡ್ಡು ತರಲಿಲ್ಲ ಅಂದ್ರೆ, ನಿನ್ನ – ಮಗೂನ,
ಇಬ್ಬರನ್ನು ಸಾಯಿಸಿ ಜ್ಯೆಲಿಗೆ ಹೋಗ್ ಬಿಡ್ತೀನಿ. ಹುಷಾರ್. ಇದೇ Last chance. ”

ಮಗದೊಂದು ಮನೆಯಲ್ಲಿನ ಹೆಣ್ಣು ಧ್ವನಿ,‌ ಅಳುತ್ತಾ ತನ್ನ ಗಂಡನಿಗೆ,
“ಅಯ್ಯೋ ಮುಂಡೆ ಮಗನೇ, ತಿನ್ನೋಕೆ ಗತಿಯಿಲ್ಲ, ರಾತ್ರಿ ಕಂಠ ಪೂರ್ತಿ ಕುಡಿದು ದನಕ್ಕೆ ಹೊಡೆದಂಗೆ
ಹೊಡಿತೀಯ, ನಿನಗೆ ಬರಬಾರದು ಬರ. ದಾರಿಯಲ್ಲಿ ಓಡಾಡೋ ಯಾವುದಾದರೂ ಬಸ್ಸಿಗೆ ಸಿಕ್ಕಿ ಸಾವಾದ್ರೂ ಬರಬಾರದಾ ನಿನಗೆ. ನನ್ನ ಶಾಪ ತಟ್ಟಲಿ ನಿನಗೆ. ”

ಇನ್ನೊಂದು ಮನೆಯ ಹೆಣ್ಣು ಧ್ವನಿ, ತನ್ನ ಮಗಳಿಗೆ,..
” ಲೇ, ಕಾಲೇಜಿನಲ್ಲಿ ಅದ್ಯಾವನೋ ಹಿಂದೆ ಬೈಕಿನಲ್ಲಿ ಓಡಾಡ್ತಾ ಇದೀಯಂತೆ. ಇದೇ ಲಾಸ್ಟು.
ಇನ್ನೊಂದ್ಸಾರಿ ಈ ವಿಷ್ಯಾ ನನ್ ಕಿವಿಗೆ ಬಿದ್ರೆ, ನಾನೇ ನೇಣಾಕಿ ಸಾಯಿಸಿ ಬಿಡ್ತೀನಿ ಹುಷಾರ್. ”

Digital India, Smart city, Global leader, E-Governence, Brand Bangalore, ಹೀಗೆ ಅನೇಕ ಕನಸುಗಳನ್ನು ಜನರಲ್ಲಿ ಬಿತ್ತುತ್ತಿರುವ ಸರಕಾರಗಳು, ಕೆಳ ಮಧ್ಯಮ ವರ್ಗದ ಜನರ ಬದುಕು ಬವಣೆಗಳನ್ನು ಮೇಲಿನಿಂದ ನೋಡುತ್ತಿರುವಂತಿದೆ,

ಅಯ್ಯಾ, ಶಾಸಕರೇ, ಸಂಸದರೇ, ಮಂತ್ರಿಗಳೇ, ಅಧಿಕಾರಿಗಳೇ,
ಸ್ವಲ್ಪ ಕೆಳಗಿಳಿದು ಬನ್ನಿ.
ಗಮನಿಸಿ ನಮ್ಮನ್ನು, ನಿಮ್ಮ ಮುಂದಿನ ಯೋಜನೆಗಳನ್ನು ರೂಪಿಸುವ ಮೊದಲು.

ಏಕೆಂದರೆ ನಿಜವಾದ ಕೆಳ ಮಧ್ಯಮ ವರ್ಗದ ಬದುಕು ಈಗಲೂ ಇದೇ ರೀತಿಯ ಆದರೆ ಬೇರೆ ಬೇರೆ ರೂಪದಲ್ಲಿ ಬೆಳಗಿನ ನೋವಿನ ಸುಪ್ರಭಾತಗಳೊಂದಿಗೆ ಪ್ರಾರಂಭವಾಗುತ್ತದೆ.

ಇನ್ನು ರಾತ್ರಿಯ ಕರಾಳ ಬದುಕು ನರಕವನ್ನೇ ದರ್ಶನ ಮಾಡಿಸುತ್ತದೆ.
ಹೊಟ್ಟೆ ತುಂಬಿದವರಿಗೆ ಇದು ಅಷ್ಟಾಗಿ ಅರ್ಥವಾಗುವುದಿಲ್ಲ.

ಈ ಸುಪ್ರಭಾತ ಹಸಿದವರಿಗೆ,
ನೋವು ಅನುಭವಿಸಿದವರಿಗೆ,
ಕಷ್ಟಕ್ಕೆ ಸ್ಪಂದಿಸುವವರಿಗೆ ಮಾತ್ರ…

ನೊಂದವರ ನೋವಾ ನೋಯದವರೆತ್ತ ಬಲ್ಲರೋ………..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

4 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

7 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

9 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

10 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

16 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

17 hours ago