Categories: ಲೇಖನ

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ……….

ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ ಮಾರ್ಗದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಆರ್ಥಿಕವಾಗಿ ಒಂದಷ್ಟು ಸಣ್ಣಪುಟ್ಟ ವ್ಯತ್ಯಾಸಗಳಿರಬಹುದು. ಕೆಲವೊಮ್ಮೆ ಶ್ರೀಮಂತಿಕೆ ಹೆಚ್ಚಾಗಬಹುದು, ಕೆಲವೊಮ್ಮೆ ಬಡತನವೂ ಹೆಚ್ಚಾಗಬಹುದು. ಮತ್ತೆ ಕೆಲವೊಮ್ಮೆ ಸಾಲಗಾರರು ಆಗಬಹುದು. ಆದರೆ ಅವರ ಮನಸ್ಥಿತಿಗಳಲ್ಲಿ ಮಾತ್ರ ಬಹುತೇಕ ಸಾಮ್ಯತೆ ಇರುತ್ತದೆ.

ಎಲ್ಲರೂ ಸಾಮಾನ್ಯವಾಗಿ ಒಂದೇ ರೀತಿಯಲ್ಲಿ ಯೋಚಿಸುತ್ತಾರೆ. ಅತ್ಯಂತ ಶ್ರೀಮಂತರು, ತೀರಾ ಕಡು ಬಡವರು ಮಾತ್ರ ತಮ್ಮ ಆಲೋಚನೆಯಲ್ಲಿ ಭಿನ್ನತೆಯನ್ನು ಹೊಂದಿರುತ್ತಾರೆ. ವಠಾರ ಸಂಸ್ಕೃತಿಯೇ ಇರಲಿ ಅಥವಾ ಅಪಾರ್ಟ್ಮೆಂಟ್ ಸಂಸ್ಕೃತಿಯೇ ಇರಲಿ ಮನಸ್ಥಿತಿ ಮಾತ್ರ ಅದೇ ಸಂಸ್ಕೃತಿಯಾಗಿರುತ್ತದೆ. ವಿದ್ಯಾಭ್ಯಾಸ ಅಥವಾ ಅಕ್ಷರಸ್ಥರ ಸಂಖ್ಯೆ ಹೆಣ್ಣು ಗಂಡು ಇಬ್ಬರಲ್ಲಿಯು ಹೆಚ್ಚಾದರೂ ಸಹ ಮನೋಭಾವ ಮಾತ್ರ ಅದೇ ಇರುತ್ತದೆ. ಆ ರೀತಿಯ ಒಂದು ವಠಾರದ ಸುಪ್ರಭಾತ…….

ಭಕ್ತಿಯ ಸುಪ್ರಭಾತವಲ್ಲ,
ಬದುಕಿನ ಸುಪ್ರಭಾತ ಕೇಳಿ…….

ಬಹುತೇಕ ನಗರದ ವಠಾರಗಳಲ್ಲಿ ಬೆಳಗಿನ ಸುಪ್ರಭಾತ ಸುಮಾರು 5 ಗಂಟೆಗೆ ಪ್ರಾರಂಭವಾಗುತ್ತದೆ…………

ಅಲೆಅಲೆಯಾಗಿ, ವಿವಿಧ ಶಭ್ದ ತರಂಗಗಳು ಕಿವಿಗಪ್ಪಳಿಸುವುದು ಒಂದು ರೋಚಕ ಅನುಭವ………

ಒಂದು ಮನೆಯಿಂದ ಹೆಣ್ಣಿನ ಧ್ವನಿ ತನ್ನ ಗಂಡನಿಗೆ…‌‌
” ನೋಡಿ ಸ್ಕೂಲ್ ಗೆ ಮಗೂನ ಸೇರಿಸ್ಲಿಕ್ಕೆ ನಾಳೇನೇ Last date.
ಏನ್ ಮಾಡ್ತೀರೊ ಗೊತ್ತಿಲ್ಲ. 50000 ರೂಪಾಯಿ ಇವತ್ತು ರಾತ್ರಿ ಒಳಗೆ adjust ಮಾಡಲಿಲ್ಲ ಅಂದ್ರೆ,
ನಾಳೆ ನೀವು ನಂದು, ನನ್ ಮಗೂದು ಹೆಣ ನೋಡ್ಬೇಕು ಅಷ್ಟೆ. ”

ಇನ್ನೊಂದು ಮನೆಯಿಂದ ಗಂಡು ಧ್ವನಿ, ( ಸ್ವಗತ )
“ಅಮ್ಮ ಒಂದು ವಾರದಿಂದ ಒಂದೇ ಸಮನೆ ಕೆಮ್ತಾ ಇದಾರೆ. ಆಸ್ಪತ್ರೆಗೆ ಸೇರಿಸಬೇಕು ಅಂದ್ರೆ,
ಮಿನಿಮಮ್ 5000 ರೂಪಾಯಿ ಬೇಕು. ಅಷ್ಟು ದುಡ್ಡು ನನ್ನಿಂದ ಹೊಂದಿಸಲಿಕ್ಕೆ ಆಗ್ತಾ ಇಲ್ಲ.
ಛೆ, ಈ ನನ್ನ ಜನ್ಮಕ್ಕೆ ಬೆಂಕಿ ಹಾಕ. ಯಾಕಾದ್ರೂ ಬದುಕಿರಬೇಕು. ”

ಮತ್ತೊಂದು ಮನೆಯೊಳಗಿನ ಗಂಡು ಧ್ವನಿ, ಕೋಪದಿಂದ,….
“ಲೇ, ನಾಳೆ ಒಳಗೆ ನಿಮ್ಮಪ್ಪನ ಮನೆಯಿಂದ 1 ಲಕ್ಷ ದುಡ್ಡು ತರಲಿಲ್ಲ ಅಂದ್ರೆ, ನಿನ್ನ – ಮಗೂನ,
ಇಬ್ಬರನ್ನು ಸಾಯಿಸಿ ಜ್ಯೆಲಿಗೆ ಹೋಗ್ ಬಿಡ್ತೀನಿ. ಹುಷಾರ್. ಇದೇ Last chance. ”

ಮಗದೊಂದು ಮನೆಯಲ್ಲಿನ ಹೆಣ್ಣು ಧ್ವನಿ,‌ ಅಳುತ್ತಾ ತನ್ನ ಗಂಡನಿಗೆ,
“ಅಯ್ಯೋ ಮುಂಡೆ ಮಗನೇ, ತಿನ್ನೋಕೆ ಗತಿಯಿಲ್ಲ, ರಾತ್ರಿ ಕಂಠ ಪೂರ್ತಿ ಕುಡಿದು ದನಕ್ಕೆ ಹೊಡೆದಂಗೆ
ಹೊಡಿತೀಯ, ನಿನಗೆ ಬರಬಾರದು ಬರ. ದಾರಿಯಲ್ಲಿ ಓಡಾಡೋ ಯಾವುದಾದರೂ ಬಸ್ಸಿಗೆ ಸಿಕ್ಕಿ ಸಾವಾದ್ರೂ ಬರಬಾರದಾ ನಿನಗೆ. ನನ್ನ ಶಾಪ ತಟ್ಟಲಿ ನಿನಗೆ. ”

ಇನ್ನೊಂದು ಮನೆಯ ಹೆಣ್ಣು ಧ್ವನಿ, ತನ್ನ ಮಗಳಿಗೆ,..
” ಲೇ, ಕಾಲೇಜಿನಲ್ಲಿ ಅದ್ಯಾವನೋ ಹಿಂದೆ ಬೈಕಿನಲ್ಲಿ ಓಡಾಡ್ತಾ ಇದೀಯಂತೆ. ಇದೇ ಲಾಸ್ಟು.
ಇನ್ನೊಂದ್ಸಾರಿ ಈ ವಿಷ್ಯಾ ನನ್ ಕಿವಿಗೆ ಬಿದ್ರೆ, ನಾನೇ ನೇಣಾಕಿ ಸಾಯಿಸಿ ಬಿಡ್ತೀನಿ ಹುಷಾರ್. ”

Digital India, Smart city, Global leader, E-Governence, Brand Bangalore, ಹೀಗೆ ಅನೇಕ ಕನಸುಗಳನ್ನು ಜನರಲ್ಲಿ ಬಿತ್ತುತ್ತಿರುವ ಸರಕಾರಗಳು, ಕೆಳ ಮಧ್ಯಮ ವರ್ಗದ ಜನರ ಬದುಕು ಬವಣೆಗಳನ್ನು ಮೇಲಿನಿಂದ ನೋಡುತ್ತಿರುವಂತಿದೆ,

ಅಯ್ಯಾ, ಶಾಸಕರೇ, ಸಂಸದರೇ, ಮಂತ್ರಿಗಳೇ, ಅಧಿಕಾರಿಗಳೇ,
ಸ್ವಲ್ಪ ಕೆಳಗಿಳಿದು ಬನ್ನಿ.
ಗಮನಿಸಿ ನಮ್ಮನ್ನು, ನಿಮ್ಮ ಮುಂದಿನ ಯೋಜನೆಗಳನ್ನು ರೂಪಿಸುವ ಮೊದಲು.

ಏಕೆಂದರೆ ನಿಜವಾದ ಕೆಳ ಮಧ್ಯಮ ವರ್ಗದ ಬದುಕು ಈಗಲೂ ಇದೇ ರೀತಿಯ ಆದರೆ ಬೇರೆ ಬೇರೆ ರೂಪದಲ್ಲಿ ಬೆಳಗಿನ ನೋವಿನ ಸುಪ್ರಭಾತಗಳೊಂದಿಗೆ ಪ್ರಾರಂಭವಾಗುತ್ತದೆ.

ಇನ್ನು ರಾತ್ರಿಯ ಕರಾಳ ಬದುಕು ನರಕವನ್ನೇ ದರ್ಶನ ಮಾಡಿಸುತ್ತದೆ.
ಹೊಟ್ಟೆ ತುಂಬಿದವರಿಗೆ ಇದು ಅಷ್ಟಾಗಿ ಅರ್ಥವಾಗುವುದಿಲ್ಲ.

ಈ ಸುಪ್ರಭಾತ ಹಸಿದವರಿಗೆ,
ನೋವು ಅನುಭವಿಸಿದವರಿಗೆ,
ಕಷ್ಟಕ್ಕೆ ಸ್ಪಂದಿಸುವವರಿಗೆ ಮಾತ್ರ…

ನೊಂದವರ ನೋವಾ ನೋಯದವರೆತ್ತ ಬಲ್ಲರೋ………..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

44 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

56 minutes ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

24 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago