Categories: ಲೇಖನ

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ……….

ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ ಮಾರ್ಗದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಆರ್ಥಿಕವಾಗಿ ಒಂದಷ್ಟು ಸಣ್ಣಪುಟ್ಟ ವ್ಯತ್ಯಾಸಗಳಿರಬಹುದು. ಕೆಲವೊಮ್ಮೆ ಶ್ರೀಮಂತಿಕೆ ಹೆಚ್ಚಾಗಬಹುದು, ಕೆಲವೊಮ್ಮೆ ಬಡತನವೂ ಹೆಚ್ಚಾಗಬಹುದು. ಮತ್ತೆ ಕೆಲವೊಮ್ಮೆ ಸಾಲಗಾರರು ಆಗಬಹುದು. ಆದರೆ ಅವರ ಮನಸ್ಥಿತಿಗಳಲ್ಲಿ ಮಾತ್ರ ಬಹುತೇಕ ಸಾಮ್ಯತೆ ಇರುತ್ತದೆ.

ಎಲ್ಲರೂ ಸಾಮಾನ್ಯವಾಗಿ ಒಂದೇ ರೀತಿಯಲ್ಲಿ ಯೋಚಿಸುತ್ತಾರೆ. ಅತ್ಯಂತ ಶ್ರೀಮಂತರು, ತೀರಾ ಕಡು ಬಡವರು ಮಾತ್ರ ತಮ್ಮ ಆಲೋಚನೆಯಲ್ಲಿ ಭಿನ್ನತೆಯನ್ನು ಹೊಂದಿರುತ್ತಾರೆ. ವಠಾರ ಸಂಸ್ಕೃತಿಯೇ ಇರಲಿ ಅಥವಾ ಅಪಾರ್ಟ್ಮೆಂಟ್ ಸಂಸ್ಕೃತಿಯೇ ಇರಲಿ ಮನಸ್ಥಿತಿ ಮಾತ್ರ ಅದೇ ಸಂಸ್ಕೃತಿಯಾಗಿರುತ್ತದೆ. ವಿದ್ಯಾಭ್ಯಾಸ ಅಥವಾ ಅಕ್ಷರಸ್ಥರ ಸಂಖ್ಯೆ ಹೆಣ್ಣು ಗಂಡು ಇಬ್ಬರಲ್ಲಿಯು ಹೆಚ್ಚಾದರೂ ಸಹ ಮನೋಭಾವ ಮಾತ್ರ ಅದೇ ಇರುತ್ತದೆ. ಆ ರೀತಿಯ ಒಂದು ವಠಾರದ ಸುಪ್ರಭಾತ…….

ಭಕ್ತಿಯ ಸುಪ್ರಭಾತವಲ್ಲ,
ಬದುಕಿನ ಸುಪ್ರಭಾತ ಕೇಳಿ…….

ಬಹುತೇಕ ನಗರದ ವಠಾರಗಳಲ್ಲಿ ಬೆಳಗಿನ ಸುಪ್ರಭಾತ ಸುಮಾರು 5 ಗಂಟೆಗೆ ಪ್ರಾರಂಭವಾಗುತ್ತದೆ…………

ಅಲೆಅಲೆಯಾಗಿ, ವಿವಿಧ ಶಭ್ದ ತರಂಗಗಳು ಕಿವಿಗಪ್ಪಳಿಸುವುದು ಒಂದು ರೋಚಕ ಅನುಭವ………

ಒಂದು ಮನೆಯಿಂದ ಹೆಣ್ಣಿನ ಧ್ವನಿ ತನ್ನ ಗಂಡನಿಗೆ…‌‌
” ನೋಡಿ ಸ್ಕೂಲ್ ಗೆ ಮಗೂನ ಸೇರಿಸ್ಲಿಕ್ಕೆ ನಾಳೇನೇ Last date.
ಏನ್ ಮಾಡ್ತೀರೊ ಗೊತ್ತಿಲ್ಲ. 50000 ರೂಪಾಯಿ ಇವತ್ತು ರಾತ್ರಿ ಒಳಗೆ adjust ಮಾಡಲಿಲ್ಲ ಅಂದ್ರೆ,
ನಾಳೆ ನೀವು ನಂದು, ನನ್ ಮಗೂದು ಹೆಣ ನೋಡ್ಬೇಕು ಅಷ್ಟೆ. ”

ಇನ್ನೊಂದು ಮನೆಯಿಂದ ಗಂಡು ಧ್ವನಿ, ( ಸ್ವಗತ )
“ಅಮ್ಮ ಒಂದು ವಾರದಿಂದ ಒಂದೇ ಸಮನೆ ಕೆಮ್ತಾ ಇದಾರೆ. ಆಸ್ಪತ್ರೆಗೆ ಸೇರಿಸಬೇಕು ಅಂದ್ರೆ,
ಮಿನಿಮಮ್ 5000 ರೂಪಾಯಿ ಬೇಕು. ಅಷ್ಟು ದುಡ್ಡು ನನ್ನಿಂದ ಹೊಂದಿಸಲಿಕ್ಕೆ ಆಗ್ತಾ ಇಲ್ಲ.
ಛೆ, ಈ ನನ್ನ ಜನ್ಮಕ್ಕೆ ಬೆಂಕಿ ಹಾಕ. ಯಾಕಾದ್ರೂ ಬದುಕಿರಬೇಕು. ”

ಮತ್ತೊಂದು ಮನೆಯೊಳಗಿನ ಗಂಡು ಧ್ವನಿ, ಕೋಪದಿಂದ,….
“ಲೇ, ನಾಳೆ ಒಳಗೆ ನಿಮ್ಮಪ್ಪನ ಮನೆಯಿಂದ 1 ಲಕ್ಷ ದುಡ್ಡು ತರಲಿಲ್ಲ ಅಂದ್ರೆ, ನಿನ್ನ – ಮಗೂನ,
ಇಬ್ಬರನ್ನು ಸಾಯಿಸಿ ಜ್ಯೆಲಿಗೆ ಹೋಗ್ ಬಿಡ್ತೀನಿ. ಹುಷಾರ್. ಇದೇ Last chance. ”

ಮಗದೊಂದು ಮನೆಯಲ್ಲಿನ ಹೆಣ್ಣು ಧ್ವನಿ,‌ ಅಳುತ್ತಾ ತನ್ನ ಗಂಡನಿಗೆ,
“ಅಯ್ಯೋ ಮುಂಡೆ ಮಗನೇ, ತಿನ್ನೋಕೆ ಗತಿಯಿಲ್ಲ, ರಾತ್ರಿ ಕಂಠ ಪೂರ್ತಿ ಕುಡಿದು ದನಕ್ಕೆ ಹೊಡೆದಂಗೆ
ಹೊಡಿತೀಯ, ನಿನಗೆ ಬರಬಾರದು ಬರ. ದಾರಿಯಲ್ಲಿ ಓಡಾಡೋ ಯಾವುದಾದರೂ ಬಸ್ಸಿಗೆ ಸಿಕ್ಕಿ ಸಾವಾದ್ರೂ ಬರಬಾರದಾ ನಿನಗೆ. ನನ್ನ ಶಾಪ ತಟ್ಟಲಿ ನಿನಗೆ. ”

ಇನ್ನೊಂದು ಮನೆಯ ಹೆಣ್ಣು ಧ್ವನಿ, ತನ್ನ ಮಗಳಿಗೆ,..
” ಲೇ, ಕಾಲೇಜಿನಲ್ಲಿ ಅದ್ಯಾವನೋ ಹಿಂದೆ ಬೈಕಿನಲ್ಲಿ ಓಡಾಡ್ತಾ ಇದೀಯಂತೆ. ಇದೇ ಲಾಸ್ಟು.
ಇನ್ನೊಂದ್ಸಾರಿ ಈ ವಿಷ್ಯಾ ನನ್ ಕಿವಿಗೆ ಬಿದ್ರೆ, ನಾನೇ ನೇಣಾಕಿ ಸಾಯಿಸಿ ಬಿಡ್ತೀನಿ ಹುಷಾರ್. ”

Digital India, Smart city, Global leader, E-Governence, Brand Bangalore, ಹೀಗೆ ಅನೇಕ ಕನಸುಗಳನ್ನು ಜನರಲ್ಲಿ ಬಿತ್ತುತ್ತಿರುವ ಸರಕಾರಗಳು, ಕೆಳ ಮಧ್ಯಮ ವರ್ಗದ ಜನರ ಬದುಕು ಬವಣೆಗಳನ್ನು ಮೇಲಿನಿಂದ ನೋಡುತ್ತಿರುವಂತಿದೆ,

ಅಯ್ಯಾ, ಶಾಸಕರೇ, ಸಂಸದರೇ, ಮಂತ್ರಿಗಳೇ, ಅಧಿಕಾರಿಗಳೇ,
ಸ್ವಲ್ಪ ಕೆಳಗಿಳಿದು ಬನ್ನಿ.
ಗಮನಿಸಿ ನಮ್ಮನ್ನು, ನಿಮ್ಮ ಮುಂದಿನ ಯೋಜನೆಗಳನ್ನು ರೂಪಿಸುವ ಮೊದಲು.

ಏಕೆಂದರೆ ನಿಜವಾದ ಕೆಳ ಮಧ್ಯಮ ವರ್ಗದ ಬದುಕು ಈಗಲೂ ಇದೇ ರೀತಿಯ ಆದರೆ ಬೇರೆ ಬೇರೆ ರೂಪದಲ್ಲಿ ಬೆಳಗಿನ ನೋವಿನ ಸುಪ್ರಭಾತಗಳೊಂದಿಗೆ ಪ್ರಾರಂಭವಾಗುತ್ತದೆ.

ಇನ್ನು ರಾತ್ರಿಯ ಕರಾಳ ಬದುಕು ನರಕವನ್ನೇ ದರ್ಶನ ಮಾಡಿಸುತ್ತದೆ.
ಹೊಟ್ಟೆ ತುಂಬಿದವರಿಗೆ ಇದು ಅಷ್ಟಾಗಿ ಅರ್ಥವಾಗುವುದಿಲ್ಲ.

ಈ ಸುಪ್ರಭಾತ ಹಸಿದವರಿಗೆ,
ನೋವು ಅನುಭವಿಸಿದವರಿಗೆ,
ಕಷ್ಟಕ್ಕೆ ಸ್ಪಂದಿಸುವವರಿಗೆ ಮಾತ್ರ…

ನೊಂದವರ ನೋವಾ ನೋಯದವರೆತ್ತ ಬಲ್ಲರೋ………..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

3 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

15 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

17 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

20 hours ago