Categories: ಲೇಖನ

ನೊಂದವರ ನೋವ ನೋಯದವರೆತ್ತ ಬಲ್ಲರೋ…..

ನೊಂದವರ ನೋವ ನೋಯದವರೆತ್ತ ಬಲ್ಲರೋ………..

ಇಲ್ಲದವರ ನೋವನ್ನು ಅರಿಯಲಾಗದ ಸಾಹಿತ್ಯ,

ಉಳ್ಳವರ ಕ್ರೌರ್ಯವನ್ನು ಖಂಡಿಸಲಾಗದ ಬರಹ,

ಶೋಷಿತರ ಧ್ವನಿಯನ್ನು ಎತ್ತಿಹಿಡಿಯಲಾಗದ ಲೇಖನ,

ಶೋಷಕರ ದೌರ್ಜನ್ಯ ಟೀಕಿಸಲಾಗದ ಪ್ರಬಂಧ,

ಸಮಾನತೆಯನ್ನು ಮೂಡಿಸಲಾಗದ ಚರ್ಚೆ,

ಅಮಾನವೀಯತೆಯನ್ನು ದಿಕ್ಕರಿಸಲಾಗದ ಕವಿತೆ,

ಪರಿಸರ ನಾಶವನ್ನು ತಡೆಯಲಾಗದ ಕಥೆ,

ಭ್ರಷ್ಟತೆಯನ್ನು ಹೋಗಲಾಡಿಸಲಾಗದ ಅಂಕಣಗಳು,

ಸಂಬಂಧಗಳನ್ನು ಬೆಸೆಯಲಾಗದ ಕಾದಂಬರಿ,

ವಿಷವಿಕ್ಕುವ ಜನರನ್ನು ಗುರುತಿಸಲಾಗದ ಅಕ್ಷರಗಳು,

ಪ್ರೀತಿಯನ್ನು ಪ್ರೀತಿಸಲಾಗದ ಮನಸ್ಸುಗಳು,

ಮೌಲ್ಯಗಳು ನಾಶವಾಗುವುದನ್ನು ರಕ್ಷಿಸದ ಪದಗಳು,

ಇತರರ ಮನ ನೋಯಿಸುವ ವಾಕ್ಯಗಳು,

ಕಷ್ಠಗಳನ್ನು ನಿವಾರಿಸಲಾಗದ ಪ್ರವಚನಗಳು,

ದುಷ್ಟತನವನ್ನು ಮೆಟ್ಟಿ ನಿಲ್ಲದ ಭಾಷಣಗಳು,

ಭ್ರಮೆಗಳನ್ನು ಸೃಷ್ಟಿ ಮಾಡುವ ಹರಿಕಥೆಗಳು,

ಸತ್ಯವನ್ನು ಹೇಳಲಾಗದ ಚಿತ್ರಕಲೆ,

ಮಾನವೀಯ ಮೌಲ್ಯಗಳಿಲ್ಲದ ಸಿನಿಮಾ,

ಅವಾಸ್ತವಿಕ ಆದರ್ಶಗಳನ್ನು ತುಂಬುವ ಗ್ರಂಥಗಳು,

ಮನಸ್ಸಿನ ದುಗುಡವನ್ನು ಕಡಿಮೆ ಮಾಡಲಾಗದ ಜ್ಞಾನ,

ಭಾವನೆಗಳನ್ನು ನಿಯಂತ್ರಿಸಲಾಗದ ಭಕ್ತಿ,

ಇವು ನಿಮ್ಮ ಅಭಿವ್ಯಕ್ತಿಯ ಮಾಧ್ಯಮಗಳಾದರೂ,

ಅದನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯ ನಿಮಗಿದ್ದರೂ,

ಅದು ಕೇವಲ ನಿಮ್ಮ ಬುದ್ದಿಯ ಪ್ರದರ್ಶನ,

ಸ್ವಾರ್ಥದ ಪ್ರತಿಬಿಂಬ,

ಅಹಂನ ತೋರ್ಪಡೆ,

ಅಂತರಾಳದ ಅಸಹಿಷ್ಣುತೆಯ ಪ್ರಕಟಣೆ,

ಪ್ರಶಸ್ತಿ, ಬಿರುದು ಬಾವಲಿಗಳ ಆಸೆ ಅಷ್ಟೇ,

ಮೇಲೆ ಹೇಳಿದ ಎಲ್ಲವೂ ವ್ಯಕ್ತಿಯ, ಸಮಾಜದ, ದೇಶದ, ವಿಶ್ವದ,

ಜೀವಪರ ಹಿತದೃಷ್ಟಿ ಹೊಂದಿದ್ದರೆ ಮಾತ್ರ ಅದು ನಿಜಕ್ಕೂ,

ನಿಸ್ವಾರ್ಥ ಹೃದಯಗಳ ಆತ್ಮಸಾಕ್ಷಿಯ ಪ್ರತಿಬಿಂಬ,

ಅದು ಸಾಧ್ಯವಾದದ್ದೇ ಆದರೆ,
ನಿಮ್ಮ ವ್ಯಕ್ತಿತ್ವ,

ಉತ್ಕೃಷ್ಟ ಮಟ್ಟದಲ್ಲಿದೆ ಎಂದೇ ಅರ್ಥ,

ಅದಕ್ಕಾಗಿ…….

ಸಿನಿಮಾ ಮಾಡೋಣ ಬನ್ನಿ,

ಹೊಡೆದಾಟಗಳಿಲ್ಲದ – ರಕ್ತ ಚೆಲ್ಲದ – ಕುತಂತ್ರಗಳಿಲ್ಲದ –
ಆಕರ್ಷಕ – ಸೃಜನಾತ್ಮಕ – ಮನೋರಂಜನಾತ್ಮಕ –
ಮೌಲ್ಯಗಳನ್ನು ಎತ್ತಿ ಹಿಡಿಯುವ ಚಿತ್ರ,

ಸಾಹಿತ್ಯ ರಚಿಸೋಣ ಬನ್ನಿ,

ದ್ವೇಷಕಾರದ – ವಿಷಕಕ್ಕದ – ಪ್ರತಿಷ್ಠೆ ಮೆರೆಯದ –
ಚೆಂದದ ಭಾಷೆಯ – ಪ್ರೀತಿಯ ಚುಂಬನದ – ಮಾನವೀಯ ಬರಹ,

ಚಿತ್ರ ಬಿಡಿಸೋಣ ಬನ್ನಿ,

ಆತ್ಮವಂಚನೆಯಿಲ್ಲದ – ಬೆಂಕಿಯುಗುಳದ – ಅಶ್ಲೀಲವಲ್ಲದ –
ಪ್ರಕೃತಿಯ ಮಡಿಲಿನ – ಸೌಂದರ್ಯದ ಬೀಡಿನ – ಮನಮೋಹಕ ದೃಶ್ಯ,

ಸಂಗೀತ ನುಡಿಸುತ್ತಾ ಹಾಡೋಣ ಬನ್ನಿ,

ಅಹಂಕಾರಗಳಿಲ್ಲದ – ಪಂಥಬೇದಗಳಿಲ್ಲದ – ಕೃತಿಮತೆಯಿಲ್ಲದ –
ಮನಕೆ ಮುದನೀಡುವ – ಆಹ್ಲಾದಕರ – ಆರಾಧನಾ ಭಾವದಿಂದ,

ಪರಿಸರ ಉಳಿಸೋಣ ಬನ್ನಿ,

ವಿಷಗಾಳಿಯಿಲ್ಲದ – ಕಲ್ಮಶನೀರಲ್ಲದ – ಆಹಾರ ಕಲಬೆರಕೆಯಾಗದ
– ಹಚ್ಚಹಸಿರಿನ – ಸ್ವಚ್ಚ ಗಾಳಿಯ – ಶುಧ್ಧ ನೀರಿನ ಪ್ರಕೃತಿ,

ಸಂಘಟಿತರಾಗೋಣ ಬನ್ನಿ,

ಸ್ವಾರ್ಥಿಗಳಾಗದ – ಘರ್ಷಣೆಗಳಿಲ್ಲದ – ಸೇವಾಮನೋಭಾವದ –
ತ್ಯಾಗದ – ಪ್ರಾಮಾಣಿಕತೆಯ – ಅರ್ಪಣಾಮನೋಭಾವದ ಸಂಸ್ಥೆಯೊಂದಿಗೆ,

ಆಡಳಿತ ನಡೆಸೋಣ ಬನ್ನಿ,

ಭ್ರಷ್ಟತೆಯಿಲ್ಲದ – ದೌರ್ಜನ್ಯಗಳಿಲ್ಲದ – ಅನ್ಯಾಯ ಮಾಡದ –
ಸಮಾನತೆ – ಸ್ವಾತಂತ್ರ್ಯ – ಸೋದರತೆಯ ಜೀವಪರ ಸರ್ಕಾರ,

ಬದುಕೋಣ ಬನ್ನಿ,

ಚಿಂತೆಗಳಿಲ್ಲದ – ಜಿಗುಪ್ಸೆಗಳಿಲ್ಲದ – ನೋವುಗಳಿಲ್ಲದ –
ನೆಮ್ಮದಿಯ – ಆನಂದದಾಯಕ – ಸುಖದ ಜೀವನ,

ಮನುಷ್ಯರಾಗೋಣ ಬನ್ನಿ,

ಕಪಟತನವಿಲ್ಲದ – ದುರ್ಬುದ್ಧಿಗಳಿಲ್ಲದ – ಮನೋವಿಕಾರಗಳಿಲ್ಲದ –
ಜ್ಞಾನಸ್ಥ – ಧ್ಯಾನಸ್ಥ – ಯೋಗಸ್ಥ – ಕರ್ಮಸ್ಥ – ಜೀವಿಗಳಾಗಿ.

ಇದು ತಿರುಕನ ಕನಸಲ್ಲ ………

ನನಸಾಗಬಹುದಾದ ನಾಗರೀಕತೆಯ ಹೊಸ ಮನ್ವಂತರ ….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

10 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

10 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

13 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

13 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

18 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

22 hours ago