ದೊಡ್ಡಬಳ್ಳಾಪುರ : ನೋಂದಣಿಯ ವಿಚಾರಕ್ಕೆ ಇಬ್ಬರ ನಡುವೆ ನೂಕಾಟ ತಲ್ಲಾಟ ಆಗಿದ್ದು, ಓರ್ವನ ತಲೆಗೆ ಪೆಟ್ಟು ಬಿದ್ದಿದೆ. ಹಾಗೇ ಉಪ ನೋಂದಣಾಧಿಕಾರಿಗಳ ಕಚೇರಿ ಒಳಗಿನ ಕೌಂಟರ್ ಗಾಜು ಪುಡಿ ಪುಡಿಯಾಗಿವರುವ ಘಟನೆ ದೊಡ್ಡಬಳ್ಳಾಪುರ ಉಪ ನೋಂದಣಿ ಕಚೇರಿಯಲ್ಲಿಂದು ಸಂಜೆ ನಡೆದಿದೆ.
ನೋಂದಣಿಗೆ ಸಂಬಂಧಿಸಿದಂತೆ ಶ್ರೀಕಾಂತ್ ಮತ್ತು ಜಯಣ್ಣ ಎಂಬುವವರು ನಡುವೆ ಗಲಾಟೆಯಾಗಿದೆ. ಪತ್ರಬರಹಗಾರ ಜಯಣ್ಣ ಎಂಬುವವರ ತಲೆಗೆ ಗಂಭೀರ ಗಾಯವಾಗಿದ್ದು, ಅಸ್ಪತ್ರೆಗೆ ರವಾನಿಸಲಾಗಿದೆ.
ನಮ್ಮ ಫೈಲ್ ಮೊದಲು ಮಾಡಿ ಎಂದು ಜಗಳ ಪ್ರಾರಂಭವಾಗಿ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡುವ ಹಂತಕ್ಕೆ ಹೋಗಿದೆ. ಜಯಣ್ಣ (54) ಹಲ್ಲೆಗೊಳಗಾದ ವ್ಯಕ್ತಿ. ಶ್ರೀಕಾಂತ್ ಎಂಬ ವ್ಯಕ್ತಿ ಹಲ್ಲೆ ಮಾಡಿದ್ದಾನೆ ಎಂದು ಜಯಣ್ಣ ಆರೋಪ ಮಾಡಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಬಂದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…