ದೊಡ್ಡಬಳ್ಳಾಪುರ : ನೋಂದಣಿಯ ವಿಚಾರಕ್ಕೆ ಇಬ್ಬರ ನಡುವೆ ನೂಕಾಟ ತಲ್ಲಾಟ ಆಗಿದ್ದು, ಓರ್ವನ ತಲೆಗೆ ಪೆಟ್ಟು ಬಿದ್ದಿದೆ. ಹಾಗೇ ಉಪ ನೋಂದಣಾಧಿಕಾರಿಗಳ ಕಚೇರಿ ಒಳಗಿನ ಕೌಂಟರ್ ಗಾಜು ಪುಡಿ ಪುಡಿಯಾಗಿವರುವ ಘಟನೆ ದೊಡ್ಡಬಳ್ಳಾಪುರ ಉಪ ನೋಂದಣಿ ಕಚೇರಿಯಲ್ಲಿಂದು ಸಂಜೆ ನಡೆದಿದೆ.
ನೋಂದಣಿಗೆ ಸಂಬಂಧಿಸಿದಂತೆ ಶ್ರೀಕಾಂತ್ ಮತ್ತು ಜಯಣ್ಣ ಎಂಬುವವರು ನಡುವೆ ಗಲಾಟೆಯಾಗಿದೆ. ಪತ್ರಬರಹಗಾರ ಜಯಣ್ಣ ಎಂಬುವವರ ತಲೆಗೆ ಗಂಭೀರ ಗಾಯವಾಗಿದ್ದು, ಅಸ್ಪತ್ರೆಗೆ ರವಾನಿಸಲಾಗಿದೆ.
ನಮ್ಮ ಫೈಲ್ ಮೊದಲು ಮಾಡಿ ಎಂದು ಜಗಳ ಪ್ರಾರಂಭವಾಗಿ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡುವ ಹಂತಕ್ಕೆ ಹೋಗಿದೆ. ಜಯಣ್ಣ (54) ಹಲ್ಲೆಗೊಳಗಾದ ವ್ಯಕ್ತಿ. ಶ್ರೀಕಾಂತ್ ಎಂಬ ವ್ಯಕ್ತಿ ಹಲ್ಲೆ ಮಾಡಿದ್ದಾನೆ ಎಂದು ಜಯಣ್ಣ ಆರೋಪ ಮಾಡಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಬಂದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
Das Schreiben einer Facharbeit stellt für viele Schüler und Studenten eine große Herausforderung dar. Der…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…