ದೊಡ್ಡಬಳ್ಳಾಪುರ : ನೋಂದಣಿಯ ವಿಚಾರಕ್ಕೆ ಇಬ್ಬರ ನಡುವೆ ನೂಕಾಟ ತಲ್ಲಾಟ ಆಗಿದ್ದು, ಓರ್ವನ ತಲೆಗೆ ಪೆಟ್ಟು ಬಿದ್ದಿದೆ. ಹಾಗೇ ಉಪ ನೋಂದಣಾಧಿಕಾರಿಗಳ ಕಚೇರಿ ಒಳಗಿನ ಕೌಂಟರ್ ಗಾಜು ಪುಡಿ ಪುಡಿಯಾಗಿವರುವ ಘಟನೆ ದೊಡ್ಡಬಳ್ಳಾಪುರ ಉಪ ನೋಂದಣಿ ಕಚೇರಿಯಲ್ಲಿಂದು ಸಂಜೆ ನಡೆದಿದೆ.
ನೋಂದಣಿಗೆ ಸಂಬಂಧಿಸಿದಂತೆ ಶ್ರೀಕಾಂತ್ ಮತ್ತು ಜಯಣ್ಣ ಎಂಬುವವರು ನಡುವೆ ಗಲಾಟೆಯಾಗಿದೆ. ಪತ್ರಬರಹಗಾರ ಜಯಣ್ಣ ಎಂಬುವವರ ತಲೆಗೆ ಗಂಭೀರ ಗಾಯವಾಗಿದ್ದು, ಅಸ್ಪತ್ರೆಗೆ ರವಾನಿಸಲಾಗಿದೆ.
ನಮ್ಮ ಫೈಲ್ ಮೊದಲು ಮಾಡಿ ಎಂದು ಜಗಳ ಪ್ರಾರಂಭವಾಗಿ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡುವ ಹಂತಕ್ಕೆ ಹೋಗಿದೆ. ಜಯಣ್ಣ (54) ಹಲ್ಲೆಗೊಳಗಾದ ವ್ಯಕ್ತಿ. ಶ್ರೀಕಾಂತ್ ಎಂಬ ವ್ಯಕ್ತಿ ಹಲ್ಲೆ ಮಾಡಿದ್ದಾನೆ ಎಂದು ಜಯಣ್ಣ ಆರೋಪ ಮಾಡಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಬಂದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…