ನೋಂದಣಿ ನವೀಕರಣ ಮಾಡಿಸದ ಕೆಂಪೇಗೌಡ ಆಸ್ಪತ್ರೆಗೆ ಬೀಗ: ನೋಟಿಸ್ ನೀಡಿದರೂ ಕ್ಯಾರೆ ಎನ್ನದೆ ಆಸ್ಪತ್ರೆ ಚಾಲು: ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ: ಆಸ್ಪತ್ರೆ ಸೇವೆ ತಾತ್ಕಾಲಿಕ ಸ್ಥಗಿತ

ನಗರದ ರೈಲ್ವೆ ಸ್ಟೇಷನ್ ಬಳಿಯ ಕೆಂಪೇಗೌಡ ಆಸ್ಪತ್ರೆಯ ಮಾಲೀಕರು ಆಸ್ಪತ್ರೆ ನೋಂದಣಿ ನವೀಕರಣ ಮಾಡಿಸದ ಹಿನ್ನೆಲೆಯಲ್ಲಿ ಕೆಂಪೇಗೌಡ ಆಸ್ಪತ್ರೆಗೆ ತಾತ್ಕಾಲಿಕವಾಗಿ ಬೀಗ ಹಾಕಲಾಯಿತು.

ಸೋಮವಾರ ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಯಿತು. ಆಸ್ಪತ್ರೆಯಲ್ಲಿ ಆಡಳಿತಾಧಿಕಾರಿಗಳು ಯಾರೊಬ್ಬರು ಇಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿಗೆ ನೋಟಿಸ್ ನೀಡಿ ಇಂದಿನಿಂದ ಆಸ್ಪತ್ರೆಯ ನೋಂದಣಿ ನವೀಕರಣ ಮಾಡದ ಹೊರತು ಆಸ್ಪತ್ರೆಯನ್ನು ತೆಗೆಯಲು ಅನುಮತಿ ಇರುವುದಿಲ್ಲ. ಆಗೊಮ್ಮೆ ಆಸ್ಪತ್ರೆಯನ್ನು ಕಾನೂನು ಬಾಹಿರವಾಗಿ ತೆರೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ಕೊಟ್ಟರು.

ಬಳಿಕ ಮಾತನಾಡಿದ ತಾಲ್ಲೂಕು ವೈದ್ಯಾಧಿಕಾರಿ ಡಾ. ಪರಮೇಶ್ವರ ಮಾತನಾಡಿ ಈ ಆಸ್ಪತ್ರೆಗೆ ಈಗಾಗಲೇ ನೋಂದಣಿ ಪ್ರಕ್ರಿಯೆ ಮಾಡಿಸಿಕೊಳ್ಳಿ ಎಂದು ಹಲವು ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ಈವರೆಗೆ ಯಾವುದೇ ಉತ್ತರ ನೀಡದೆ. ಆಸ್ಪತ್ರೆ ನೋಂದಣಿ ನವೀಕರಣ ಮಾಡಿಸಿಕೊಳ್ಳದೆ ಉದ್ಧಟತನ ಮೆರೆದಿದ್ದಾರೆ.

ರೋಗಿಗಳ ಆರೋಗ್ಯ ಹಿತದೃಷ್ಟಿಯಿಂದ ಆಸ್ಪತ್ರೆಗೆ ನೋಟಿಸ್ ನೀಡಿ ಇಂದಿನಿಂದ ಬೀಗ ಹಾಕಲಾಗಿದೆ. ನವೀಕರಣ ಮಾಡಿಸಿ ಸಕ್ಷಮ ಪ್ರಾಧಿಕಾರದ ಮುಂದೆ ಹಾಜರಾಗಿ ನೋಟಿಸ್ ಗೆ ಉತ್ತರ ನೀಡುವವರೆಗೂ ಆಸ್ಪತ್ರೆ ತೆರೆಯಲು ಅನುಮತಿ ಇರುವುದಿಲ್ಲ ಎಂದರು.

ತಾಲ್ಲೂಕು ವೈದ್ಯಾಧಿಕಾರಿ ಡಾ. ಪರಮೇಶ್ವರ ನೇತೃತ್ವದಲ್ಲಿ ಆಸ್ಪತ್ರೆ ಸಿಬ್ಬಂದಿಗೆ ನೋಟಿಸ್ ನೀಡಿ ಬೀಗ ಹಾಕಲಾಯಿತು. ಈ ವೇಳೆ ಎಎಸ್ಐ ಮಲ್ಲಿಕಾರ್ಜುನ ಇದ್ದರು.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

11 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

12 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

24 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

2 days ago