ನೋಂದಣಿ ನವೀಕರಣ ಮಾಡಿಸದ ಕೆಂಪೇಗೌಡ ಆಸ್ಪತ್ರೆಗೆ ಬೀಗ: ನೋಟಿಸ್ ನೀಡಿದರೂ ಕ್ಯಾರೆ ಎನ್ನದೆ ಆಸ್ಪತ್ರೆ ಚಾಲು: ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ: ಆಸ್ಪತ್ರೆ ಸೇವೆ ತಾತ್ಕಾಲಿಕ ಸ್ಥಗಿತ

ನಗರದ ರೈಲ್ವೆ ಸ್ಟೇಷನ್ ಬಳಿಯ ಕೆಂಪೇಗೌಡ ಆಸ್ಪತ್ರೆಯ ಮಾಲೀಕರು ಆಸ್ಪತ್ರೆ ನೋಂದಣಿ ನವೀಕರಣ ಮಾಡಿಸದ ಹಿನ್ನೆಲೆಯಲ್ಲಿ ಕೆಂಪೇಗೌಡ ಆಸ್ಪತ್ರೆಗೆ ತಾತ್ಕಾಲಿಕವಾಗಿ ಬೀಗ ಹಾಕಲಾಯಿತು.

ಸೋಮವಾರ ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಯಿತು. ಆಸ್ಪತ್ರೆಯಲ್ಲಿ ಆಡಳಿತಾಧಿಕಾರಿಗಳು ಯಾರೊಬ್ಬರು ಇಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿಗೆ ನೋಟಿಸ್ ನೀಡಿ ಇಂದಿನಿಂದ ಆಸ್ಪತ್ರೆಯ ನೋಂದಣಿ ನವೀಕರಣ ಮಾಡದ ಹೊರತು ಆಸ್ಪತ್ರೆಯನ್ನು ತೆಗೆಯಲು ಅನುಮತಿ ಇರುವುದಿಲ್ಲ. ಆಗೊಮ್ಮೆ ಆಸ್ಪತ್ರೆಯನ್ನು ಕಾನೂನು ಬಾಹಿರವಾಗಿ ತೆರೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ಕೊಟ್ಟರು.

ಬಳಿಕ ಮಾತನಾಡಿದ ತಾಲ್ಲೂಕು ವೈದ್ಯಾಧಿಕಾರಿ ಡಾ. ಪರಮೇಶ್ವರ ಮಾತನಾಡಿ ಈ ಆಸ್ಪತ್ರೆಗೆ ಈಗಾಗಲೇ ನೋಂದಣಿ ಪ್ರಕ್ರಿಯೆ ಮಾಡಿಸಿಕೊಳ್ಳಿ ಎಂದು ಹಲವು ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ಈವರೆಗೆ ಯಾವುದೇ ಉತ್ತರ ನೀಡದೆ. ಆಸ್ಪತ್ರೆ ನೋಂದಣಿ ನವೀಕರಣ ಮಾಡಿಸಿಕೊಳ್ಳದೆ ಉದ್ಧಟತನ ಮೆರೆದಿದ್ದಾರೆ.

ರೋಗಿಗಳ ಆರೋಗ್ಯ ಹಿತದೃಷ್ಟಿಯಿಂದ ಆಸ್ಪತ್ರೆಗೆ ನೋಟಿಸ್ ನೀಡಿ ಇಂದಿನಿಂದ ಬೀಗ ಹಾಕಲಾಗಿದೆ. ನವೀಕರಣ ಮಾಡಿಸಿ ಸಕ್ಷಮ ಪ್ರಾಧಿಕಾರದ ಮುಂದೆ ಹಾಜರಾಗಿ ನೋಟಿಸ್ ಗೆ ಉತ್ತರ ನೀಡುವವರೆಗೂ ಆಸ್ಪತ್ರೆ ತೆರೆಯಲು ಅನುಮತಿ ಇರುವುದಿಲ್ಲ ಎಂದರು.

ತಾಲ್ಲೂಕು ವೈದ್ಯಾಧಿಕಾರಿ ಡಾ. ಪರಮೇಶ್ವರ ನೇತೃತ್ವದಲ್ಲಿ ಆಸ್ಪತ್ರೆ ಸಿಬ್ಬಂದಿಗೆ ನೋಟಿಸ್ ನೀಡಿ ಬೀಗ ಹಾಕಲಾಯಿತು. ಈ ವೇಳೆ ಎಎಸ್ಐ ಮಲ್ಲಿಕಾರ್ಜುನ ಇದ್ದರು.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

10 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

13 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

17 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago