ನೋಂದಣಿ ನವೀಕರಣ ಮಾಡಿಸದ ಕೆಂಪೇಗೌಡ ಆಸ್ಪತ್ರೆಗೆ ಬೀಗ: ನೋಟಿಸ್ ನೀಡಿದರೂ ಕ್ಯಾರೆ ಎನ್ನದೆ ಆಸ್ಪತ್ರೆ ಚಾಲು: ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ: ಆಸ್ಪತ್ರೆ ಸೇವೆ ತಾತ್ಕಾಲಿಕ ಸ್ಥಗಿತ

ನಗರದ ರೈಲ್ವೆ ಸ್ಟೇಷನ್ ಬಳಿಯ ಕೆಂಪೇಗೌಡ ಆಸ್ಪತ್ರೆಯ ಮಾಲೀಕರು ಆಸ್ಪತ್ರೆ ನೋಂದಣಿ ನವೀಕರಣ ಮಾಡಿಸದ ಹಿನ್ನೆಲೆಯಲ್ಲಿ ಕೆಂಪೇಗೌಡ ಆಸ್ಪತ್ರೆಗೆ ತಾತ್ಕಾಲಿಕವಾಗಿ ಬೀಗ ಹಾಕಲಾಯಿತು.

ಸೋಮವಾರ ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಯಿತು. ಆಸ್ಪತ್ರೆಯಲ್ಲಿ ಆಡಳಿತಾಧಿಕಾರಿಗಳು ಯಾರೊಬ್ಬರು ಇಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿಗೆ ನೋಟಿಸ್ ನೀಡಿ ಇಂದಿನಿಂದ ಆಸ್ಪತ್ರೆಯ ನೋಂದಣಿ ನವೀಕರಣ ಮಾಡದ ಹೊರತು ಆಸ್ಪತ್ರೆಯನ್ನು ತೆಗೆಯಲು ಅನುಮತಿ ಇರುವುದಿಲ್ಲ. ಆಗೊಮ್ಮೆ ಆಸ್ಪತ್ರೆಯನ್ನು ಕಾನೂನು ಬಾಹಿರವಾಗಿ ತೆರೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ಕೊಟ್ಟರು.

ಬಳಿಕ ಮಾತನಾಡಿದ ತಾಲ್ಲೂಕು ವೈದ್ಯಾಧಿಕಾರಿ ಡಾ. ಪರಮೇಶ್ವರ ಮಾತನಾಡಿ ಈ ಆಸ್ಪತ್ರೆಗೆ ಈಗಾಗಲೇ ನೋಂದಣಿ ಪ್ರಕ್ರಿಯೆ ಮಾಡಿಸಿಕೊಳ್ಳಿ ಎಂದು ಹಲವು ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ಈವರೆಗೆ ಯಾವುದೇ ಉತ್ತರ ನೀಡದೆ. ಆಸ್ಪತ್ರೆ ನೋಂದಣಿ ನವೀಕರಣ ಮಾಡಿಸಿಕೊಳ್ಳದೆ ಉದ್ಧಟತನ ಮೆರೆದಿದ್ದಾರೆ.

ರೋಗಿಗಳ ಆರೋಗ್ಯ ಹಿತದೃಷ್ಟಿಯಿಂದ ಆಸ್ಪತ್ರೆಗೆ ನೋಟಿಸ್ ನೀಡಿ ಇಂದಿನಿಂದ ಬೀಗ ಹಾಕಲಾಗಿದೆ. ನವೀಕರಣ ಮಾಡಿಸಿ ಸಕ್ಷಮ ಪ್ರಾಧಿಕಾರದ ಮುಂದೆ ಹಾಜರಾಗಿ ನೋಟಿಸ್ ಗೆ ಉತ್ತರ ನೀಡುವವರೆಗೂ ಆಸ್ಪತ್ರೆ ತೆರೆಯಲು ಅನುಮತಿ ಇರುವುದಿಲ್ಲ ಎಂದರು.

ತಾಲ್ಲೂಕು ವೈದ್ಯಾಧಿಕಾರಿ ಡಾ. ಪರಮೇಶ್ವರ ನೇತೃತ್ವದಲ್ಲಿ ಆಸ್ಪತ್ರೆ ಸಿಬ್ಬಂದಿಗೆ ನೋಟಿಸ್ ನೀಡಿ ಬೀಗ ಹಾಕಲಾಯಿತು. ಈ ವೇಳೆ ಎಎಸ್ಐ ಮಲ್ಲಿಕಾರ್ಜುನ ಇದ್ದರು.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

2 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

3 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

23 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago