ನೋಂದಾಯಿತ ಕಾರ್ಮಿಕ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ, ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಗಳನ್ನು ನೀಡಲಾಗುತ್ತಿದೆ.

ಕಾರ್ಮಿಕ ಅಧಿಕಾರಿಗಳ ಕಛೇರಿ ಬೆಂಗಳೂರು ಗ್ರಾಮಾಂತರ ಉಪ ವಿಭಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ನೈಜ ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಇಚ್ಚಿಸಿದ್ದಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಕಾರ್ಮಿಕ ಅಧಿಕಾರಿಗಳ ಕಚೇರಿ /ಕಾರ್ಮಿಕ ನಿರೀಕ್ಷಕರ ಕಚೇರಿ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಇವರ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ದಿನಾಂಕ:16-09-2023 ರಂದು ಅಂತಿಮ ದಿನವಾಗಿರುತ್ತದೆ. ತದನಂತರ ಬರುವ ಅರ್ಜಿಗಳನ್ನ ಸ್ವೀಕರಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಚೇರಿ ಬೆಂಗಳೂರು ಗ್ರಾಮಾಂತರ ಉಪ ವಿಭಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೋಮೇಶ್ವರ ಬಡಾವಣೆ, ದೊಡ್ಡಬಳ್ಳಾಪುರ ಅಥವಾ ಕಾರ್ಮಿಕ ನಿರೀಕ್ಷಕರ ಕಛೇರಿ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಇವರ ಕಚೇರಿಗಳನ್ನು ಸಂಪರ್ಕಿಸಬಹುದಾಗಿರುತ್ತದೆ.

ಈ ಯೋಜನೆ ಸೌಲಭ್ಯ ಪಡೆಯಲು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ನೋಂದಣಿ ಗುರುತಿನ ಚೀಟಿ, 2023-24 ನೇ ಸಾಲಿನಲ್ಲಿ ಪ್ರಥಮ ಅಥವಾ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವ್ಯಾಸಂಗ ಪ್ರಮಾಣ ಪತ್ರ, ಎಸ್. ಎಸ್. ಎಲ್. ಸಿ. ಪರೀಕ್ಷೆಯ ದೃಢೀಕೃತ ಅಂಕಪಟ್ಟಿ, ಯಾವುದೇ ಸರ್ಕಾರಿ ಯೋಜನೆಯಡಿ ಇದುವರೆಗೂ ಲ್ಯಾಪ್ ಟಾಪ್ ಪಡೆದಿರುವುದಿಲ್ಲ ಎಂಬ ಬಗ್ಗೆ ಸ್ವಯಂ ದೃಢೀಕರಣ ಪತ್ರ ಸಲ್ಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಹೆಚ್.ಆರ್. ನಾಗೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

View Comments

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

7 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

14 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

14 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago