ನೋಂದಾಯಿತ ಕಾರ್ಮಿಕ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ, ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಗಳನ್ನು ನೀಡಲಾಗುತ್ತಿದೆ.

ಕಾರ್ಮಿಕ ಅಧಿಕಾರಿಗಳ ಕಛೇರಿ ಬೆಂಗಳೂರು ಗ್ರಾಮಾಂತರ ಉಪ ವಿಭಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ನೈಜ ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಇಚ್ಚಿಸಿದ್ದಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಕಾರ್ಮಿಕ ಅಧಿಕಾರಿಗಳ ಕಚೇರಿ /ಕಾರ್ಮಿಕ ನಿರೀಕ್ಷಕರ ಕಚೇರಿ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಇವರ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ದಿನಾಂಕ:16-09-2023 ರಂದು ಅಂತಿಮ ದಿನವಾಗಿರುತ್ತದೆ. ತದನಂತರ ಬರುವ ಅರ್ಜಿಗಳನ್ನ ಸ್ವೀಕರಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಚೇರಿ ಬೆಂಗಳೂರು ಗ್ರಾಮಾಂತರ ಉಪ ವಿಭಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೋಮೇಶ್ವರ ಬಡಾವಣೆ, ದೊಡ್ಡಬಳ್ಳಾಪುರ ಅಥವಾ ಕಾರ್ಮಿಕ ನಿರೀಕ್ಷಕರ ಕಛೇರಿ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಇವರ ಕಚೇರಿಗಳನ್ನು ಸಂಪರ್ಕಿಸಬಹುದಾಗಿರುತ್ತದೆ.

ಈ ಯೋಜನೆ ಸೌಲಭ್ಯ ಪಡೆಯಲು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ನೋಂದಣಿ ಗುರುತಿನ ಚೀಟಿ, 2023-24 ನೇ ಸಾಲಿನಲ್ಲಿ ಪ್ರಥಮ ಅಥವಾ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವ್ಯಾಸಂಗ ಪ್ರಮಾಣ ಪತ್ರ, ಎಸ್. ಎಸ್. ಎಲ್. ಸಿ. ಪರೀಕ್ಷೆಯ ದೃಢೀಕೃತ ಅಂಕಪಟ್ಟಿ, ಯಾವುದೇ ಸರ್ಕಾರಿ ಯೋಜನೆಯಡಿ ಇದುವರೆಗೂ ಲ್ಯಾಪ್ ಟಾಪ್ ಪಡೆದಿರುವುದಿಲ್ಲ ಎಂಬ ಬಗ್ಗೆ ಸ್ವಯಂ ದೃಢೀಕರಣ ಪತ್ರ ಸಲ್ಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಹೆಚ್.ಆರ್. ನಾಗೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

View Comments

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

4 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago