ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೊಂದಾಯಿತ ಆಲ್ ಇಂಡಿಯಾ ಜನರಕ್ಷಾ ಪಾರ್ಟಿ ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.
ಅಖಿಲ ಭಾರತ ಜನರಕ್ಷಾ ಪಕ್ಷವು ರಾಜಕೀಯ ಪಕ್ಷವಾಗಿ ಈಗಾಗಲೇ ರಿಜಿಸ್ಟರ್ ಮಾಡಿಕೊಂಡಿದ್ದು ಆಯೋಗದ ದಾಖಲೆಗಳ ಪ್ರಕಾರ ಅಖಿಲ ಭಾರತ ಜನರಕ್ಷಾ ಪಕ್ಷವು ಮೂರು ವರ್ಷಗಳಿಂದ ತನ್ನ ವಾರ್ಷಿಕ ಲೆಕ್ಕಪರಿಶೋಧಕ ಖಾತೆಗಳ ಮಾಹಿತಿಯನ್ನು ಆಯೋಗದ ಅನುಸಾರ ನಿಗದಿತ ಅವಧಿಯೊಳಗೆ ನಮೂನೆ ಪತ್ರದ ಮೂಲಕ ಸಲ್ಲಿಸಿರುವುದಿಲ್ಲ.
ನೋಂದಾಯಿತ ಮಾನ್ಯತೆಯನ್ನು ಪಡೆಯದ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ಸಂವಿಧಾನದ 324ನೇ ವಿಧಿಯಡಿ ಜನ ಪ್ರಾತಿನಿಧ್ಯ ಕಾಯ್ದೆ 1951 ಸೆಕ್ಷನ್ 29ಎ ನಿಬಂಧನೆಗಳ ಅಡಿಯಲ್ಲಿ ಪಕ್ಷಗಳ ನೋಂದಣಿಯನ್ನು ಏಕೆ ರದ್ದು ಮಾಡಬಾರದು ಎಂದು ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿಮಾಡಿದೆ.
ನೋಟಿಸ್ ನ ಅನುಸಾರ ಪಕ್ಷದ ಅಧ್ಯಕ್ಷರು ಅಥವಾ ಪ್ರಧಾನ ಕಾರ್ಯದರ್ಶಿಯವರ ಸರಿಯಾಗಿ ಮಾಹಿತಿಯನ್ನೊಳಗೊಂಡ ಅಫಿಡೆವಿಟ್ನೊಂದಿಗೆ ಹಾಗೂ ಪಕ್ಷವು ಪ್ರಸ್ತಾವಿಸುವ ಎಲ್ಲಾ ಪೋಷಕ ದಾಖಲೆಗಳನ್ನು ಅಕ್ಟೋಬರ್ 14 ರೊಳಗೆ ಚುನಾವಣಾ ಆಯೋಗಕ್ಕೆ ತಲುಪಿಸಬೇಕು. ಹಾಗೇ ಪಕ್ಷದ ವಿಚಾರಣೆಯು ಅದೇ ದಿನದಂದು ನಿಗದಿಪಡಿಸಿದ್ದು, ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಮುಖಂಡರು ಕಡ್ಡಾಯವಾಗಿ ಹಾಜರಿರಲು ಚುನಾವಣಾ ಆಯೋಗವು ತಿಳಿಸಿದೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…
ಬೆಂಗಳೂರು: ಹಬ್ಬಗಳ ಸೀಸನ್ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…
ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…
ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…