ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಕ್ಕೆ ಚುನಾವಣೆ ಆಯೋಗದಿಂದ ನೋಟಿಸ್ ಜಾರಿ

ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೊಂದಾಯಿತ ಆಲ್ ಇಂಡಿಯಾ ಜನರಕ್ಷಾ ಪಾರ್ಟಿ ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.

ಅಖಿಲ ಭಾರತ ಜನರಕ್ಷಾ ಪಕ್ಷವು ರಾಜಕೀಯ ಪಕ್ಷವಾಗಿ ಈಗಾಗಲೇ ರಿಜಿಸ್ಟರ್ ಮಾಡಿಕೊಂಡಿದ್ದು ಆಯೋಗದ ದಾಖಲೆಗಳ ಪ್ರಕಾರ ಅಖಿಲ ಭಾರತ ಜನರಕ್ಷಾ ಪಕ್ಷವು ಮೂರು ವರ್ಷಗಳಿಂದ ತನ್ನ ವಾರ್ಷಿಕ ಲೆಕ್ಕಪರಿಶೋಧಕ ಖಾತೆಗಳ ಮಾಹಿತಿಯನ್ನು ಆಯೋಗದ ಅನುಸಾರ ನಿಗದಿತ ಅವಧಿಯೊಳಗೆ ನಮೂನೆ ಪತ್ರದ ಮೂಲಕ ಸಲ್ಲಿಸಿರುವುದಿಲ್ಲ.

ನೋಂದಾಯಿತ ಮಾನ್ಯತೆಯನ್ನು ಪಡೆಯದ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ಸಂವಿಧಾನದ 324ನೇ ವಿಧಿಯಡಿ ಜನ ಪ್ರಾತಿನಿಧ್ಯ ಕಾಯ್ದೆ 1951 ಸೆಕ್ಷನ್ 29ಎ ನಿಬಂಧನೆಗಳ ಅಡಿಯಲ್ಲಿ ಪಕ್ಷಗಳ ನೋಂದಣಿಯನ್ನು ಏಕೆ ರದ್ದು ಮಾಡಬಾರದು ಎಂದು ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿಮಾಡಿದೆ.

ನೋಟಿಸ್ ನ ಅನುಸಾರ ಪಕ್ಷದ ಅಧ್ಯಕ್ಷರು ಅಥವಾ ಪ್ರಧಾನ ಕಾರ್ಯದರ್ಶಿಯವರ ಸರಿಯಾಗಿ ಮಾಹಿತಿಯನ್ನೊಳಗೊಂಡ ಅಫಿಡೆವಿಟ್‌ನೊಂದಿಗೆ ಹಾಗೂ ಪಕ್ಷವು ಪ್ರಸ್ತಾವಿಸುವ ಎಲ್ಲಾ ಪೋಷಕ ದಾಖಲೆಗಳನ್ನು ಅಕ್ಟೋಬರ್ 14 ರೊಳಗೆ ಚುನಾವಣಾ ಆಯೋಗಕ್ಕೆ ತಲುಪಿಸಬೇಕು. ಹಾಗೇ ಪಕ್ಷದ ವಿಚಾರಣೆಯು ಅದೇ ದಿನದಂದು ನಿಗದಿಪಡಿಸಿದ್ದು, ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಮುಖಂಡರು ಕಡ್ಡಾಯವಾಗಿ ಹಾಜರಿರಲು ಚುನಾವಣಾ ಆಯೋಗವು ತಿಳಿಸಿದೆ.

Ramesh Babu

Journalist

Recent Posts

ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ- ಪಿಡಿಒ ರಮೇಶ್

ಚಿಕ್ಕನಾಯಕನಹಳ್ಳಿ: ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ,  ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ…

1 hour ago

ಹಣದ ಹರಿವು

ಹೊರಹೋಗುವ ಸುಲಭ ದಾರಿಗಳು, ಒಳಬರುವ ಕಠಿಣ ಹಾದಿಗಳು....... ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು...... ಆಧುನಿಕತೆ…

2 hours ago

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

20 hours ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

1 day ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

3 days ago