ಕನಿಷ್ಟ ಬೆಂಬಲ ಯೋಜನೆಯಡಿ ನೋಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01 ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಖರೀದಿ ಪ್ರಕ್ರಿಯೆ ಪ್ರಾರಂಭ ಆದ ದಿನದಿಂದಲೂ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳು ರಾಗಿ ಖರೀದಿ ಕೇಂದ್ರದ ಬಳಿ ಉದ್ಭವಗೊಂಡು ರೈತರು ಪರಿತಪಿಸುವಂತಾಗಿದೆ.
ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಆವರಣದ ರಾಗಿ ಖರೀದಿ ಕೇಂದ್ರದ ಬಳಿ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪರಿಶೀಲನೆ ನಡೆಸಿದರು.
ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ರಾಗಿ ಖರೀದಿ ಮಾಡಬೇಕು. ಯಾವುದೇ ಗೊಂದಲವಿಲ್ಲದೇ ಅಧಿಕಾರಿಗಳು ಸರ್ಕಾರದ ನಿಯಮನುಸಾರ ರಾಗಿ ಖರೀದಿ ಮಾಡಬೇಕು. ದಲ್ಲಾಳಿಗಳಿಗೆ ಅವಕಾಶ ಮಾಡಿಕೊಡಬಾರದು. ಒಂದು ದಲ್ಲಾಳಿಗಳ ಕಾಟ ಮುಂದುವರಿದರೆ ಕೂಡಲೇ ಪೊಲೀಸ್ ಠಾಣೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರೈತರಿಗೆ ಡಿಸಿ ಹಾಗೂ ಎಸ್ಪಿ ತಿಳಿಸಿದರು.
ರೈತರು ತಮಗೆ ನಿಗದಿ ಮಾಡಿದ ದಿನದಂದೇ ರಾಗಿ ಖರೀದಿ ಕೇಂದ್ರದ ಬಳಿ ಬರಬೇಕು. ಮುಂಚಿತವಾಗಿ ಬಂದು ಪರದಾಡಬಾರದು. ಯಾವ ದಲ್ಲಾಳಿಗೆ ಮಾರು ಹೋಗಬಾರದು. ಎಲ್ಲರ ರಾಗಿಯನ್ನು ನಿಗದಿತ ದಿನಾಂಕದೊಳಗೆ ಖರೀದಿ ಮಾಡಲಾಗುತ್ತದೆ. ರಾಗಿ ಖರೀದಿ ಕೇಂದ್ರದ ಬಳಿ ಲೋಪದೋಷ ಕಂಡುಬಂದಲ್ಲಿ ಸಂಬಂಧಪಟ್ಟವರಿಗೆ ತಿಳಿಸಿದರೆ ಕೂಡಲೇ ಬಗೆಹರಿಸಲಾಗುತ್ತದೆ ಎಂದರು.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…