ಕನಿಷ್ಟ ಬೆಂಬಲ ಯೋಜನೆಯಡಿ ನೋಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01 ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಖರೀದಿ ಪ್ರಕ್ರಿಯೆ ಪ್ರಾರಂಭ ಆದ ದಿನದಿಂದಲೂ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳು ರಾಗಿ ಖರೀದಿ ಕೇಂದ್ರದ ಬಳಿ ಉದ್ಭವಗೊಂಡು ರೈತರು ಪರಿತಪಿಸುವಂತಾಗಿದೆ.
ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಆವರಣದ ರಾಗಿ ಖರೀದಿ ಕೇಂದ್ರದ ಬಳಿ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪರಿಶೀಲನೆ ನಡೆಸಿದರು.
ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ರಾಗಿ ಖರೀದಿ ಮಾಡಬೇಕು. ಯಾವುದೇ ಗೊಂದಲವಿಲ್ಲದೇ ಅಧಿಕಾರಿಗಳು ಸರ್ಕಾರದ ನಿಯಮನುಸಾರ ರಾಗಿ ಖರೀದಿ ಮಾಡಬೇಕು. ದಲ್ಲಾಳಿಗಳಿಗೆ ಅವಕಾಶ ಮಾಡಿಕೊಡಬಾರದು. ಒಂದು ದಲ್ಲಾಳಿಗಳ ಕಾಟ ಮುಂದುವರಿದರೆ ಕೂಡಲೇ ಪೊಲೀಸ್ ಠಾಣೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರೈತರಿಗೆ ಡಿಸಿ ಹಾಗೂ ಎಸ್ಪಿ ತಿಳಿಸಿದರು.
ರೈತರು ತಮಗೆ ನಿಗದಿ ಮಾಡಿದ ದಿನದಂದೇ ರಾಗಿ ಖರೀದಿ ಕೇಂದ್ರದ ಬಳಿ ಬರಬೇಕು. ಮುಂಚಿತವಾಗಿ ಬಂದು ಪರದಾಡಬಾರದು. ಯಾವ ದಲ್ಲಾಳಿಗೆ ಮಾರು ಹೋಗಬಾರದು. ಎಲ್ಲರ ರಾಗಿಯನ್ನು ನಿಗದಿತ ದಿನಾಂಕದೊಳಗೆ ಖರೀದಿ ಮಾಡಲಾಗುತ್ತದೆ. ರಾಗಿ ಖರೀದಿ ಕೇಂದ್ರದ ಬಳಿ ಲೋಪದೋಷ ಕಂಡುಬಂದಲ್ಲಿ ಸಂಬಂಧಪಟ್ಟವರಿಗೆ ತಿಳಿಸಿದರೆ ಕೂಡಲೇ ಬಗೆಹರಿಸಲಾಗುತ್ತದೆ ಎಂದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…