ಕನಿಷ್ಟ ಬೆಂಬಲ ಯೋಜನೆಯಡಿ ನೋಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01 ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಖರೀದಿ ಪ್ರಕ್ರಿಯೆ ಪ್ರಾರಂಭ ಆದ ದಿನದಿಂದಲೂ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳು ರಾಗಿ ಖರೀದಿ ಕೇಂದ್ರದ ಬಳಿ ಉದ್ಭವಗೊಂಡು ರೈತರು ಪರಿತಪಿಸುವಂತಾಗಿದೆ.
ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಆವರಣದ ರಾಗಿ ಖರೀದಿ ಕೇಂದ್ರದ ಬಳಿ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪರಿಶೀಲನೆ ನಡೆಸಿದರು.
ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ರಾಗಿ ಖರೀದಿ ಮಾಡಬೇಕು. ಯಾವುದೇ ಗೊಂದಲವಿಲ್ಲದೇ ಅಧಿಕಾರಿಗಳು ಸರ್ಕಾರದ ನಿಯಮನುಸಾರ ರಾಗಿ ಖರೀದಿ ಮಾಡಬೇಕು. ದಲ್ಲಾಳಿಗಳಿಗೆ ಅವಕಾಶ ಮಾಡಿಕೊಡಬಾರದು. ಒಂದು ದಲ್ಲಾಳಿಗಳ ಕಾಟ ಮುಂದುವರಿದರೆ ಕೂಡಲೇ ಪೊಲೀಸ್ ಠಾಣೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರೈತರಿಗೆ ಡಿಸಿ ಹಾಗೂ ಎಸ್ಪಿ ತಿಳಿಸಿದರು.
ರೈತರು ತಮಗೆ ನಿಗದಿ ಮಾಡಿದ ದಿನದಂದೇ ರಾಗಿ ಖರೀದಿ ಕೇಂದ್ರದ ಬಳಿ ಬರಬೇಕು. ಮುಂಚಿತವಾಗಿ ಬಂದು ಪರದಾಡಬಾರದು. ಯಾವ ದಲ್ಲಾಳಿಗೆ ಮಾರು ಹೋಗಬಾರದು. ಎಲ್ಲರ ರಾಗಿಯನ್ನು ನಿಗದಿತ ದಿನಾಂಕದೊಳಗೆ ಖರೀದಿ ಮಾಡಲಾಗುತ್ತದೆ. ರಾಗಿ ಖರೀದಿ ಕೇಂದ್ರದ ಬಳಿ ಲೋಪದೋಷ ಕಂಡುಬಂದಲ್ಲಿ ಸಂಬಂಧಪಟ್ಟವರಿಗೆ ತಿಳಿಸಿದರೆ ಕೂಡಲೇ ಬಗೆಹರಿಸಲಾಗುತ್ತದೆ ಎಂದರು.
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…