ನೋಂದಾಯಿತ ರೈತರಿಂದ ರಾಗಿ ಖರೀದಿ: ದಲ್ಲಾಳಿತನ ಕಂಡುಬಂದಲ್ಲಿ ಕ್ರಮ ಗ್ಯಾರೆಂಟಿ: ದಲ್ಲಾಳಿಗಳಿಗೆ ಚಾಟಿ ಬೀಸಿದ ಡಿಸಿ ಹಾಗೂ ಎಸ್ಪಿ

ಕನಿಷ್ಟ ಬೆಂಬಲ ಯೋಜನೆಯಡಿ ನೋಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01 ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಖರೀದಿ ಪ್ರಕ್ರಿಯೆ ಪ್ರಾರಂಭ ಆದ ದಿನದಿಂದಲೂ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳು ರಾಗಿ ಖರೀದಿ ಕೇಂದ್ರದ ಬಳಿ ಉದ್ಭವಗೊಂಡು ರೈತರು ಪರಿತಪಿಸುವಂತಾಗಿದೆ.

ಈ ಹಿನ್ನೆಲೆ ಇಂದು‌ ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಆವರಣದ ರಾಗಿ ಖರೀದಿ ಕೇಂದ್ರದ ಬಳಿ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪರಿಶೀಲನೆ ನಡೆಸಿದರು.

ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ರಾಗಿ ಖರೀದಿ ಮಾಡಬೇಕು. ಯಾವುದೇ ಗೊಂದಲವಿಲ್ಲದೇ ಅಧಿಕಾರಿಗಳು ಸರ್ಕಾರದ ನಿಯಮನುಸಾರ ರಾಗಿ ಖರೀದಿ ಮಾಡಬೇಕು. ದಲ್ಲಾಳಿಗಳಿಗೆ ಅವಕಾಶ ಮಾಡಿಕೊಡಬಾರದು. ಒಂದು ದಲ್ಲಾಳಿಗಳ ಕಾಟ ಮುಂದುವರಿದರೆ ಕೂಡಲೇ ಪೊಲೀಸ್ ಠಾಣೆ‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರೈತರಿಗೆ ಡಿಸಿ ಹಾಗೂ ಎಸ್ಪಿ ತಿಳಿಸಿದರು.

ರೈತರು ತಮಗೆ ನಿಗದಿ ಮಾಡಿದ ದಿನದಂದೇ ರಾಗಿ ಖರೀದಿ ಕೇಂದ್ರದ ಬಳಿ ಬರಬೇಕು. ಮುಂಚಿತವಾಗಿ ಬಂದು ಪರದಾಡಬಾರದು. ಯಾವ ದಲ್ಲಾಳಿಗೆ ಮಾರು ಹೋಗಬಾರದು. ಎಲ್ಲರ ರಾಗಿಯನ್ನು ನಿಗದಿತ ದಿನಾಂಕದೊಳಗೆ ಖರೀದಿ ಮಾಡಲಾಗುತ್ತದೆ. ರಾಗಿ ಖರೀದಿ ಕೇಂದ್ರದ ಬಳಿ ಲೋಪದೋಷ ಕಂಡುಬಂದಲ್ಲಿ ಸಂಬಂಧಪಟ್ಟವರಿಗೆ ತಿಳಿಸಿದರೆ ಕೂಡಲೇ ಬಗೆಹರಿಸಲಾಗುತ್ತದೆ ಎಂದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

16 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago