ಕನಿಷ್ಟ ಬೆಂಬಲ ಯೋಜನೆಯಡಿ ನೋಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01 ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಖರೀದಿ ಪ್ರಕ್ರಿಯೆ ಪ್ರಾರಂಭ ಆದ ದಿನದಿಂದಲೂ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳು ರಾಗಿ ಖರೀದಿ ಕೇಂದ್ರದ ಬಳಿ ಉದ್ಭವಗೊಂಡು ರೈತರು ಪರಿತಪಿಸುವಂತಾಗಿದೆ.
ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಆವರಣದ ರಾಗಿ ಖರೀದಿ ಕೇಂದ್ರದ ಬಳಿ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪರಿಶೀಲನೆ ನಡೆಸಿದರು.
ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ರಾಗಿ ಖರೀದಿ ಮಾಡಬೇಕು. ಯಾವುದೇ ಗೊಂದಲವಿಲ್ಲದೇ ಅಧಿಕಾರಿಗಳು ಸರ್ಕಾರದ ನಿಯಮನುಸಾರ ರಾಗಿ ಖರೀದಿ ಮಾಡಬೇಕು. ದಲ್ಲಾಳಿಗಳಿಗೆ ಅವಕಾಶ ಮಾಡಿಕೊಡಬಾರದು. ಒಂದು ದಲ್ಲಾಳಿಗಳ ಕಾಟ ಮುಂದುವರಿದರೆ ಕೂಡಲೇ ಪೊಲೀಸ್ ಠಾಣೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರೈತರಿಗೆ ಡಿಸಿ ಹಾಗೂ ಎಸ್ಪಿ ತಿಳಿಸಿದರು.
ರೈತರು ತಮಗೆ ನಿಗದಿ ಮಾಡಿದ ದಿನದಂದೇ ರಾಗಿ ಖರೀದಿ ಕೇಂದ್ರದ ಬಳಿ ಬರಬೇಕು. ಮುಂಚಿತವಾಗಿ ಬಂದು ಪರದಾಡಬಾರದು. ಯಾವ ದಲ್ಲಾಳಿಗೆ ಮಾರು ಹೋಗಬಾರದು. ಎಲ್ಲರ ರಾಗಿಯನ್ನು ನಿಗದಿತ ದಿನಾಂಕದೊಳಗೆ ಖರೀದಿ ಮಾಡಲಾಗುತ್ತದೆ. ರಾಗಿ ಖರೀದಿ ಕೇಂದ್ರದ ಬಳಿ ಲೋಪದೋಷ ಕಂಡುಬಂದಲ್ಲಿ ಸಂಬಂಧಪಟ್ಟವರಿಗೆ ತಿಳಿಸಿದರೆ ಕೂಡಲೇ ಬಗೆಹರಿಸಲಾಗುತ್ತದೆ ಎಂದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…