ಕನಿಷ್ಟ ಬೆಂಬಲ ಯೋಜನೆಯಡಿ ನೋಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01 ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಖರೀದಿ ಪ್ರಕ್ರಿಯೆ ಪ್ರಾರಂಭ ಆದ ದಿನದಿಂದಲೂ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳು ರಾಗಿ ಖರೀದಿ ಕೇಂದ್ರದ ಬಳಿ ಉದ್ಭವಗೊಂಡು ರೈತರು ಪರಿತಪಿಸುವಂತಾಗಿದೆ.
ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಆವರಣದ ರಾಗಿ ಖರೀದಿ ಕೇಂದ್ರದ ಬಳಿ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪರಿಶೀಲನೆ ನಡೆಸಿದರು.
ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ರಾಗಿ ಖರೀದಿ ಮಾಡಬೇಕು. ಯಾವುದೇ ಗೊಂದಲವಿಲ್ಲದೇ ಅಧಿಕಾರಿಗಳು ಸರ್ಕಾರದ ನಿಯಮನುಸಾರ ರಾಗಿ ಖರೀದಿ ಮಾಡಬೇಕು. ದಲ್ಲಾಳಿಗಳಿಗೆ ಅವಕಾಶ ಮಾಡಿಕೊಡಬಾರದು. ಒಂದು ದಲ್ಲಾಳಿಗಳ ಕಾಟ ಮುಂದುವರಿದರೆ ಕೂಡಲೇ ಪೊಲೀಸ್ ಠಾಣೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರೈತರಿಗೆ ಡಿಸಿ ಹಾಗೂ ಎಸ್ಪಿ ತಿಳಿಸಿದರು.
ರೈತರು ತಮಗೆ ನಿಗದಿ ಮಾಡಿದ ದಿನದಂದೇ ರಾಗಿ ಖರೀದಿ ಕೇಂದ್ರದ ಬಳಿ ಬರಬೇಕು. ಮುಂಚಿತವಾಗಿ ಬಂದು ಪರದಾಡಬಾರದು. ಯಾವ ದಲ್ಲಾಳಿಗೆ ಮಾರು ಹೋಗಬಾರದು. ಎಲ್ಲರ ರಾಗಿಯನ್ನು ನಿಗದಿತ ದಿನಾಂಕದೊಳಗೆ ಖರೀದಿ ಮಾಡಲಾಗುತ್ತದೆ. ರಾಗಿ ಖರೀದಿ ಕೇಂದ್ರದ ಬಳಿ ಲೋಪದೋಷ ಕಂಡುಬಂದಲ್ಲಿ ಸಂಬಂಧಪಟ್ಟವರಿಗೆ ತಿಳಿಸಿದರೆ ಕೂಡಲೇ ಬಗೆಹರಿಸಲಾಗುತ್ತದೆ ಎಂದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…