ನೋಂದಾಯಿತ ಸಾಂಸ್ಕೃತಿಕ ಸಂಘ-ಸಂಸ್ಥೆಗಳಿಂದ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಸಹಾಯಧನ ನೀಡಲಾಗುವುದು.

ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಾಂಸ್ಕೃತಿಕ ವಾತಾವರಣ ಉಂಟು ಮಾಡುವಲ್ಲಿ ಶ್ರಮಿಸುತ್ತಿರುವ ಸಂಘ-ಸಂಸ್ಥೆಗಳನ್ನು ಪ್ರೋತ್ಸಾಹಿಸಲು 2023-24ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು, ಸೇವಾ ಸಿಂಧು ಪೋರ್ಟಲ್ sevasindhu.karnataka.gov.in ಮುಖಾಂತರ ನವೆಂಬರ್ 14 ರಿಂದ ಡಿಸೆಂಬರ್ 13 ರವರೆಗೆ ಕಾಲಾವಕಾಶ ನೀಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸೇವಾ ಸಿಂಧು ಪೋರ್ಟಲ್‌ ಹಾಗೂ ಇಲಾಖೆಯ ವೆಬ್ ಸೈಟ್ www.kannadasiri.karnataka.gov.in ನಲ್ಲಿ ಮಾರ್ಗಸೂಚಿಯನ್ನು ಅಳವಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 080 22279954, 9986837037, 8792662814, 8792662816, 08022213530 ದೂರವಾಣಿ ಸಂಖ್ಯೆಯನ್ನು ಹಾಗೂ ಆಯಾ ಜಿಲ್ಲೆಯ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದು. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

6 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

6 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

9 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

9 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

18 hours ago