Categories: ರಾಜ್ಯ

ನೋಟಿನ ಕಂತೆಯಲ್ಲಿ ಇತ್ತು ಬಿಳಿ ಕಾಗದ.! ವಂಚಿಸಲು ಯತ್ನಿಸಿದವನಿಗೆ ಬಿತ್ತು ಗೂಸಾ.!

ಆಸ್ತಿ ಖರೀದಿ ಮಾಡಿ ಹಣ ನೀಡುವಾಗ ನೋಟಿನ‌ ಕಂತೆಗಳ ಮಧ್ಯೆ ಬಿಳಿ ಹಾಳೆಗಳನ್ನು ಇಟ್ಟು ವಂಚನೆ ಮಾಡುವಾಗ ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಭೂಪ.

ಮಂಡ್ಯ ನಗರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಘಟನೆ ನಡೆದಿದೆ. ವಂಚಿಸಲು ಯತ್ನಿಸುವಾಗ ಸಾರ್ವಜನಿಕರಿಗೆ ಸಿಕ್ಕಿಬಿದ್ದ ಸೈಯದ್ ಅಮೀನ್. ಕೂಡಲೇ ಸೈಯದ್ ಅಮೀನ್ ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಲಾಯಿತು.

ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಉಮೇಶ್ ಅವರ ಬಳಿ ಜಮೀನು ಖರೀದಿ ಮಾಡಿದ್ದ ಸೈಯದ್ ಅಮೀನ್, ಉಮೇಶ್ ಅವರ ಜಮೀನು ಖರೀದಿಸಿ ಮುಂಗಡ ಹಣ ನೀಡುವಾಗ ನೋಟಿನ ಕಂತೆಯಲ್ಲಿ ಬಿಳಿ ಹಾಳೆ ಇಟ್ಟು ವಂಚನೆ ಮಾಡಲು ಯತ್ನಿಸಿದ ಸೈಯದ್ ಅಮೀನ್.

ನೋಂದಣಿ ಪ್ರಕ್ರಿಯೆ ಬಳಿಕ ಉಮೇಶ್ ಅವರಿಗೆ‌ 30 ಲಕ್ಷ ನೀಡುವ ವೇಳೆ ವಂಚನೆಗೆ ಯತ್ನ‌ ಮಾಡಿರೋ ಸೈಯದ್ ಅಮೀನ್. ಹಣ ಪಡೆದ ಲೆಕ್ಕಾಚಾರದಲ್ಲಿ ಇದ್ದಾಗ ನೋಟಿನ ಕಂತೆಗಳ ಮದ್ಯೆ ಬಿಳಿ ಕಾಗದಗಳು ಇರುವುದು ಬೆಳಕಿಗೆ ಬಂದಿದೆ. ತಕ್ಷಣ ಎಚ್ಚೆತ್ತು ಹಣ ನೀಡಿದ ಸೈಯದ್ ನನ್ನು ಪ್ರಶ್ನಿಸುತ್ತಾ ಕೂಗಾಡಿದ ಉಮೇಶ್.

ಆಗ ಸುತ್ತಮುತ್ತಲ ಸಾರ್ವಜನಿಕರು ಗುಂಪುಗೂಡಿದಾಗ ವಿಚಾರ ಬಹಿರಂಗವಾಗಿದೆ. ಕೂಡಲೇ ವಂಚಿಸಿದ ವ್ಯಕ್ತಿ ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು. ಆರೋಪಿಯನ್ನ ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ಮುಂದುವರಿಸಿದ್ದಾರೆ. ಮಂಡ್ಯ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

2 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

11 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

17 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

18 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago