ಕೋಲಾರ: ತಾಲೂಕಿನ ಸುಗಟೂರು ಹೋಬಳಿಯ ಚಿಟ್ನಹಳ್ಳಿ ಗ್ರಾಮದ ಸರ್ವೇ ನಂ158 ರಲ್ಲಿನ ಕಲ್ಲೋಣಿ ಕೆರೆಯ ಕಾಲುವೆಯ ಅಕ್ಕ ಪಕ್ಕದ ರೈತರಿಗೆ ನೋಟಿಸ್ ನೀಡದೆ ಕಾಲುವೆ ತೆರೆವಿಗೆ ಅಧಿಕಾರಿಗಳು ಮುಂದಾಗಿ ರೈತರು ಬೆಳೆದ ಬೆಳೆಗಳಿಗೆ ತೊಂದರೆ ಕೊಡಲು ಹೊರಟಿದ್ದಾರೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.
ಶನಿವಾರ ಚಿಟ್ನಹಳ್ಳಿ ಗ್ರಾಮದಲ್ಲಿ ತಹಶಿಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ಕೆರೆಯ ಕಾಲುವೆ ತೆರವಿಗೆ ತೆರಳಿದ್ದ ಸಂದರ್ಭದಲ್ಲಿ ಅಧಿಕಾರಿಗಳ ಮತ್ತು ರೈತರ ಮಧ್ಯೆ ಗಲಾಟೆಯೂ ನಡೆಯಿತು ನಂತರ ರೈತರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಅಧಿಕಾರಿಗಳ ವಿರುದ್ದ ದೂರು ದಾಖಲಿಸಿದರು.
ಈ ಸಂದರ್ಭದಲ್ಲಿ ಚಿಟ್ನಹಳ್ಳಿ ಗ್ರಾಮದ ಸಿ.ಎಂ ರಮೇಶ್ ಮಾತನಾಡಿ ಗ್ರಾಮದಲ್ಲಿ ಹಿಂದೆ ಕರೆಯ ಜಾಗದಲ್ಲಿ ಹಾದುಹೋಗುವ ಕಾಲುವೆಯಿದ್ದು ದಿನ ಕ್ರಮೇಣ ಕೆರೆಯು ಜೀವಾಂಶವನ್ನು ಕಳೆದುಕೊಂಡು ಹಿಡುವಳಿ ನಂಬರ್ಗಳಾಗಿ ಪರಿವರ್ತನೆಯಾಗಿ ಅಕ್ಕ ಪಕ್ಕದ ರೈತರಿಗೆ ಮಂಜೂರಾತಿಯಾಗಿದೆ ಈ ಕಾಲುವೆಯನ್ನು ಕೊರುಕುಲು ಕಾಲುವೆ ಎಂದು ಕೂಡ ನಕ್ಷೆಯಲ್ಲಿ ನಮೂದಿಸಿದ್ದಾರೆ ಆದರೆ ಪ್ರಭಾವಿಗಳ ಒತ್ತಡಕ್ಕೆ ಮಣಿದು ಅಧಿಕಾರಿಗಳು ರೈತರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ರೈತರ ಮೇಲೆ ದೌರ್ಜನ್ಯ ನಡೆಸಲು ಮುಂದಾಗಿದ್ದಾರೆ ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಿಗಳು ಕೆಲಸದ ದಿನಗಳಲ್ಲಿಯೇ ನಮ್ಮ ಕೆಲಸಗಳಿಗೆ ಸಿಗುವುದು ಅಪರೂಪ ಆದರೆ ಎರಡನೇ ಶನಿವಾರ ರಜಾ ದಿನ ಇದ್ದರೂ ಏಕಾಏಕಿ ತಹಶಿಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ಯಾವುದೇ ರೀತಿಯ ಸರ್ವೆ ಮಾಡದೆ ಹಾಗೂ ಹದ್ದು ಬಸ್ತನ್ನು ಗುರ್ತಿಸದೆ ಕಾಲುವೆಯನ್ನು ಕೊರೆಯಲು ಮುಂದಾಗಿ ನಮ್ಮ ಬೆಳೆಗಳಿಗೆ ತೊಂದರೆ ಕೊಡಲು ಹೊರಟಿದ್ದಾರೆ ಜಮೀನಿಗೆ ಪ್ರವೇಶಿಸುವ ಮುಂಚೆ ಮುಂಗಡವಾಗಿ ನೋಟೀಸ್ ಕೂಡ ಜಾರಿ ಮಾಡಿಲ್ಲ ಸರ್ವೆ ಹಾಗೂ ಹದ್ದು ಬಸ್ತು ಗುರ್ತಿಸದೆ ಜಮೀನಿನಲ್ಲಿದ್ದ ಹಿಪ್ಪು ನೇರಳೆ ಸೊಪ್ಪನ್ನು ಹಾನಿ ಮಾಡಿ ಕೊರಕಲು ಕಾಲುವೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಕೇಳಲು ಹೋದ ರೈತರ ವಿರುದ್ದ ಆವಾಚ್ಯ ಶಬ್ದಗಳಿಂದ ಬೈದು ನಿಮ್ಮ ವಿರುದ್ಧ ಕೇಸು ದಾಖಲಿಸಲಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ರೈತರು ತಮ್ಮ ಅಳಲು ತೋಡಿಕೊಂಡರು.
ತಾಲ್ಲೂಕು ಕಛೇರಿಯ ಅಧಿಕಾರಿಗಳು ಪ್ರಭಾವಿಗಳ ಜಮೀನಿಗೆ ಹೋಗಿ ಬರಲು ನಮ್ಮ ಜಮೀನಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಲು ಹುನ್ನಾರ ಮಾಡುತ್ತಾ ಇದ್ದಾರೆ ಹೊರತು ಕಾನೂನು ಬದ್ಧವಾಗಿ ಕೊರಕಲು ಕಾಲುವೆ ತೆರೆಯುವ ಉದ್ದೇಶ ಅವರಿಗಿಲ್ಲ ಜಮೀನುಗಳ ದಾಖಲಾತಿಗಳನ್ನು ಪರಿಶೀಲಿಸಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು
ಈ ಸಂದರ್ಭದಲ್ಲಿ ಚಿಟ್ನಹಳ್ಳಿ ಗ್ರಾಮ ಪಂಚಾಯತಿ ಸದಸ್ಯೆ ಅನಿತ ಎನ್, ಗ್ರಾಮಸ್ಥರಾದ ಚೌಡರೆಡ್ಡಿ, ಸಿ.ಎಂ ನಾರಾಯಣಸ್ವಾಮಿ, ಶ್ರೀನಿವಾಸ್, ದಿವಾಕರ್, ಮಂಜುನಾಥ್, ಆನಂದ್, ಸಂತೋಷ್, ಪುರುಷೋತ್ತಮ್, ಸೇರಿದಂತೆ ರೈತರು ಇದ್ದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…