Categories: ಕೋಲಾರ

ನೋಟಿಸ್ ನೀಡದೆ ಕಾಲುವೆ ತೆರೆವು: ಅಧಿಕಾರಿಗಳ ನಡೆಗೆ ರೈತರ ಅಸಮಾಧಾನ

ಕೋಲಾರ: ತಾಲೂಕಿನ ಸುಗಟೂರು ಹೋಬಳಿಯ ಚಿಟ್ನಹಳ್ಳಿ ಗ್ರಾಮದ ಸರ್ವೇ ನಂ158 ರಲ್ಲಿನ ಕಲ್ಲೋಣಿ ಕೆರೆಯ ಕಾಲುವೆಯ ಅಕ್ಕ ಪಕ್ಕದ ರೈತರಿಗೆ ನೋಟಿಸ್ ನೀಡದೆ ಕಾಲುವೆ ತೆರೆವಿಗೆ ಅಧಿಕಾರಿಗಳು ಮುಂದಾಗಿ ರೈತರು ಬೆಳೆದ ಬೆಳೆಗಳಿಗೆ ತೊಂದರೆ ಕೊಡಲು ಹೊರಟಿದ್ದಾರೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.

ಶನಿವಾರ ಚಿಟ್ನಹಳ್ಳಿ ಗ್ರಾಮದಲ್ಲಿ ತಹಶಿಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ಕೆರೆಯ ಕಾಲುವೆ ತೆರವಿಗೆ ತೆರಳಿದ್ದ ಸಂದರ್ಭದಲ್ಲಿ ಅಧಿಕಾರಿಗಳ ಮತ್ತು ರೈತರ ಮಧ್ಯೆ ಗಲಾಟೆಯೂ ನಡೆಯಿತು ನಂತರ ರೈತರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಅಧಿಕಾರಿಗಳ ವಿರುದ್ದ ದೂರು ದಾಖಲಿಸಿದರು.

ಈ ಸಂದರ್ಭದಲ್ಲಿ ಚಿಟ್ನಹಳ್ಳಿ ಗ್ರಾಮದ ಸಿ.ಎಂ ರಮೇಶ್ ಮಾತನಾಡಿ ಗ್ರಾಮದಲ್ಲಿ ಹಿಂದೆ ಕರೆಯ ಜಾಗದಲ್ಲಿ ಹಾದುಹೋಗುವ ಕಾಲುವೆಯಿದ್ದು ದಿನ ಕ್ರಮೇಣ ಕೆರೆಯು ಜೀವಾಂಶವನ್ನು ಕಳೆದುಕೊಂಡು ಹಿಡುವಳಿ ನಂಬರ್‌ಗಳಾಗಿ ಪರಿವರ್ತನೆಯಾಗಿ ಅಕ್ಕ ಪಕ್ಕದ ರೈತರಿಗೆ ಮಂಜೂರಾತಿಯಾಗಿದೆ ಈ ಕಾಲುವೆಯನ್ನು ಕೊರುಕುಲು ಕಾಲುವೆ ಎಂದು ಕೂಡ ನಕ್ಷೆಯಲ್ಲಿ ನಮೂದಿಸಿದ್ದಾರೆ ಆದರೆ ಪ್ರಭಾವಿಗಳ ಒತ್ತಡಕ್ಕೆ ಮಣಿದು ಅಧಿಕಾರಿಗಳು ರೈತರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ರೈತರ ಮೇಲೆ ದೌರ್ಜನ್ಯ ನಡೆಸಲು ಮುಂದಾಗಿದ್ದಾರೆ ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳು ಕೆಲಸದ ದಿನಗಳಲ್ಲಿಯೇ ನಮ್ಮ ಕೆಲಸಗಳಿಗೆ ಸಿಗುವುದು ಅಪರೂಪ ಆದರೆ ಎರಡನೇ ಶನಿವಾರ ರಜಾ ದಿನ ಇದ್ದರೂ ಏಕಾಏಕಿ ತಹಶಿಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ಯಾವುದೇ ರೀತಿಯ ಸರ್ವೆ ಮಾಡದೆ ಹಾಗೂ ಹದ್ದು ಬಸ್ತನ್ನು ಗುರ್ತಿಸದೆ ಕಾಲುವೆಯನ್ನು ಕೊರೆಯಲು ಮುಂದಾಗಿ ನಮ್ಮ ಬೆಳೆಗಳಿಗೆ ತೊಂದರೆ ಕೊಡಲು ಹೊರಟಿದ್ದಾರೆ ಜಮೀನಿಗೆ ಪ್ರವೇಶಿಸುವ ಮುಂಚೆ ಮುಂಗಡವಾಗಿ ನೋಟೀಸ್ ಕೂಡ ಜಾರಿ ಮಾಡಿಲ್ಲ ಸರ್ವೆ ಹಾಗೂ ಹದ್ದು ಬಸ್ತು ಗುರ್ತಿಸದೆ ಜಮೀನಿನಲ್ಲಿದ್ದ ಹಿಪ್ಪು ನೇರಳೆ ಸೊಪ್ಪನ್ನು ಹಾನಿ ಮಾಡಿ ಕೊರಕಲು ಕಾಲುವೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಕೇಳಲು ಹೋದ ರೈತರ ವಿರುದ್ದ ಆವಾಚ್ಯ ಶಬ್ದಗಳಿಂದ ಬೈದು ನಿಮ್ಮ ವಿರುದ್ಧ ಕೇಸು ದಾಖಲಿಸಲಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ರೈತರು ತಮ್ಮ ಅಳಲು ತೋಡಿಕೊಂಡರು.

ತಾಲ್ಲೂಕು ಕಛೇರಿಯ ಅಧಿಕಾರಿಗಳು ಪ್ರಭಾವಿಗಳ ಜಮೀನಿಗೆ ಹೋಗಿ ಬರಲು ನಮ್ಮ ಜಮೀನಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಲು ಹುನ್ನಾರ ಮಾಡುತ್ತಾ ಇದ್ದಾರೆ ಹೊರತು ಕಾನೂನು ಬದ್ಧವಾಗಿ ಕೊರಕಲು ಕಾಲುವೆ ತೆರೆಯುವ ಉದ್ದೇಶ ಅವರಿಗಿಲ್ಲ ಜಮೀನುಗಳ ದಾಖಲಾತಿಗಳನ್ನು ಪರಿಶೀಲಿಸಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಚಿಟ್ನಹಳ್ಳಿ ಗ್ರಾಮ ಪಂಚಾಯತಿ ಸದಸ್ಯೆ ಅನಿತ ಎನ್, ಗ್ರಾಮಸ್ಥರಾದ ಚೌಡರೆಡ್ಡಿ, ಸಿ.ಎಂ ನಾರಾಯಣಸ್ವಾಮಿ, ಶ್ರೀನಿವಾಸ್, ದಿವಾಕರ್, ಮಂಜುನಾಥ್, ಆನಂದ್, ಸಂತೋಷ್, ಪುರುಷೋತ್ತಮ್, ಸೇರಿದಂತೆ ರೈತರು ಇದ್ದರು.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

8 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

9 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

21 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

24 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

1 day ago