Categories: ಕೋಲಾರ

ನೋಟಿಸ್ ನೀಡದೆ ಕಾಲುವೆ ತೆರೆವು: ಅಧಿಕಾರಿಗಳ ನಡೆಗೆ ರೈತರ ಅಸಮಾಧಾನ

ಕೋಲಾರ: ತಾಲೂಕಿನ ಸುಗಟೂರು ಹೋಬಳಿಯ ಚಿಟ್ನಹಳ್ಳಿ ಗ್ರಾಮದ ಸರ್ವೇ ನಂ158 ರಲ್ಲಿನ ಕಲ್ಲೋಣಿ ಕೆರೆಯ ಕಾಲುವೆಯ ಅಕ್ಕ ಪಕ್ಕದ ರೈತರಿಗೆ ನೋಟಿಸ್ ನೀಡದೆ ಕಾಲುವೆ ತೆರೆವಿಗೆ ಅಧಿಕಾರಿಗಳು ಮುಂದಾಗಿ ರೈತರು ಬೆಳೆದ ಬೆಳೆಗಳಿಗೆ ತೊಂದರೆ ಕೊಡಲು ಹೊರಟಿದ್ದಾರೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.

ಶನಿವಾರ ಚಿಟ್ನಹಳ್ಳಿ ಗ್ರಾಮದಲ್ಲಿ ತಹಶಿಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ಕೆರೆಯ ಕಾಲುವೆ ತೆರವಿಗೆ ತೆರಳಿದ್ದ ಸಂದರ್ಭದಲ್ಲಿ ಅಧಿಕಾರಿಗಳ ಮತ್ತು ರೈತರ ಮಧ್ಯೆ ಗಲಾಟೆಯೂ ನಡೆಯಿತು ನಂತರ ರೈತರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಅಧಿಕಾರಿಗಳ ವಿರುದ್ದ ದೂರು ದಾಖಲಿಸಿದರು.

ಈ ಸಂದರ್ಭದಲ್ಲಿ ಚಿಟ್ನಹಳ್ಳಿ ಗ್ರಾಮದ ಸಿ.ಎಂ ರಮೇಶ್ ಮಾತನಾಡಿ ಗ್ರಾಮದಲ್ಲಿ ಹಿಂದೆ ಕರೆಯ ಜಾಗದಲ್ಲಿ ಹಾದುಹೋಗುವ ಕಾಲುವೆಯಿದ್ದು ದಿನ ಕ್ರಮೇಣ ಕೆರೆಯು ಜೀವಾಂಶವನ್ನು ಕಳೆದುಕೊಂಡು ಹಿಡುವಳಿ ನಂಬರ್‌ಗಳಾಗಿ ಪರಿವರ್ತನೆಯಾಗಿ ಅಕ್ಕ ಪಕ್ಕದ ರೈತರಿಗೆ ಮಂಜೂರಾತಿಯಾಗಿದೆ ಈ ಕಾಲುವೆಯನ್ನು ಕೊರುಕುಲು ಕಾಲುವೆ ಎಂದು ಕೂಡ ನಕ್ಷೆಯಲ್ಲಿ ನಮೂದಿಸಿದ್ದಾರೆ ಆದರೆ ಪ್ರಭಾವಿಗಳ ಒತ್ತಡಕ್ಕೆ ಮಣಿದು ಅಧಿಕಾರಿಗಳು ರೈತರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ರೈತರ ಮೇಲೆ ದೌರ್ಜನ್ಯ ನಡೆಸಲು ಮುಂದಾಗಿದ್ದಾರೆ ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳು ಕೆಲಸದ ದಿನಗಳಲ್ಲಿಯೇ ನಮ್ಮ ಕೆಲಸಗಳಿಗೆ ಸಿಗುವುದು ಅಪರೂಪ ಆದರೆ ಎರಡನೇ ಶನಿವಾರ ರಜಾ ದಿನ ಇದ್ದರೂ ಏಕಾಏಕಿ ತಹಶಿಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ಯಾವುದೇ ರೀತಿಯ ಸರ್ವೆ ಮಾಡದೆ ಹಾಗೂ ಹದ್ದು ಬಸ್ತನ್ನು ಗುರ್ತಿಸದೆ ಕಾಲುವೆಯನ್ನು ಕೊರೆಯಲು ಮುಂದಾಗಿ ನಮ್ಮ ಬೆಳೆಗಳಿಗೆ ತೊಂದರೆ ಕೊಡಲು ಹೊರಟಿದ್ದಾರೆ ಜಮೀನಿಗೆ ಪ್ರವೇಶಿಸುವ ಮುಂಚೆ ಮುಂಗಡವಾಗಿ ನೋಟೀಸ್ ಕೂಡ ಜಾರಿ ಮಾಡಿಲ್ಲ ಸರ್ವೆ ಹಾಗೂ ಹದ್ದು ಬಸ್ತು ಗುರ್ತಿಸದೆ ಜಮೀನಿನಲ್ಲಿದ್ದ ಹಿಪ್ಪು ನೇರಳೆ ಸೊಪ್ಪನ್ನು ಹಾನಿ ಮಾಡಿ ಕೊರಕಲು ಕಾಲುವೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಕೇಳಲು ಹೋದ ರೈತರ ವಿರುದ್ದ ಆವಾಚ್ಯ ಶಬ್ದಗಳಿಂದ ಬೈದು ನಿಮ್ಮ ವಿರುದ್ಧ ಕೇಸು ದಾಖಲಿಸಲಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ರೈತರು ತಮ್ಮ ಅಳಲು ತೋಡಿಕೊಂಡರು.

ತಾಲ್ಲೂಕು ಕಛೇರಿಯ ಅಧಿಕಾರಿಗಳು ಪ್ರಭಾವಿಗಳ ಜಮೀನಿಗೆ ಹೋಗಿ ಬರಲು ನಮ್ಮ ಜಮೀನಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಲು ಹುನ್ನಾರ ಮಾಡುತ್ತಾ ಇದ್ದಾರೆ ಹೊರತು ಕಾನೂನು ಬದ್ಧವಾಗಿ ಕೊರಕಲು ಕಾಲುವೆ ತೆರೆಯುವ ಉದ್ದೇಶ ಅವರಿಗಿಲ್ಲ ಜಮೀನುಗಳ ದಾಖಲಾತಿಗಳನ್ನು ಪರಿಶೀಲಿಸಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಚಿಟ್ನಹಳ್ಳಿ ಗ್ರಾಮ ಪಂಚಾಯತಿ ಸದಸ್ಯೆ ಅನಿತ ಎನ್, ಗ್ರಾಮಸ್ಥರಾದ ಚೌಡರೆಡ್ಡಿ, ಸಿ.ಎಂ ನಾರಾಯಣಸ್ವಾಮಿ, ಶ್ರೀನಿವಾಸ್, ದಿವಾಕರ್, ಮಂಜುನಾಥ್, ಆನಂದ್, ಸಂತೋಷ್, ಪುರುಷೋತ್ತಮ್, ಸೇರಿದಂತೆ ರೈತರು ಇದ್ದರು.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

2 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

2 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

15 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

15 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

18 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago