ಕೋಲಾರ: ತಾಲೂಕಿನ ಸುಗಟೂರು ಹೋಬಳಿಯ ಚಿಟ್ನಹಳ್ಳಿ ಗ್ರಾಮದ ಸರ್ವೇ ನಂ158 ರಲ್ಲಿನ ಕಲ್ಲೋಣಿ ಕೆರೆಯ ಕಾಲುವೆಯ ಅಕ್ಕ ಪಕ್ಕದ ರೈತರಿಗೆ ನೋಟಿಸ್ ನೀಡದೆ ಕಾಲುವೆ ತೆರೆವಿಗೆ ಅಧಿಕಾರಿಗಳು ಮುಂದಾಗಿ ರೈತರು ಬೆಳೆದ ಬೆಳೆಗಳಿಗೆ ತೊಂದರೆ ಕೊಡಲು ಹೊರಟಿದ್ದಾರೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.
ಶನಿವಾರ ಚಿಟ್ನಹಳ್ಳಿ ಗ್ರಾಮದಲ್ಲಿ ತಹಶಿಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ಕೆರೆಯ ಕಾಲುವೆ ತೆರವಿಗೆ ತೆರಳಿದ್ದ ಸಂದರ್ಭದಲ್ಲಿ ಅಧಿಕಾರಿಗಳ ಮತ್ತು ರೈತರ ಮಧ್ಯೆ ಗಲಾಟೆಯೂ ನಡೆಯಿತು ನಂತರ ರೈತರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಅಧಿಕಾರಿಗಳ ವಿರುದ್ದ ದೂರು ದಾಖಲಿಸಿದರು.
ಈ ಸಂದರ್ಭದಲ್ಲಿ ಚಿಟ್ನಹಳ್ಳಿ ಗ್ರಾಮದ ಸಿ.ಎಂ ರಮೇಶ್ ಮಾತನಾಡಿ ಗ್ರಾಮದಲ್ಲಿ ಹಿಂದೆ ಕರೆಯ ಜಾಗದಲ್ಲಿ ಹಾದುಹೋಗುವ ಕಾಲುವೆಯಿದ್ದು ದಿನ ಕ್ರಮೇಣ ಕೆರೆಯು ಜೀವಾಂಶವನ್ನು ಕಳೆದುಕೊಂಡು ಹಿಡುವಳಿ ನಂಬರ್ಗಳಾಗಿ ಪರಿವರ್ತನೆಯಾಗಿ ಅಕ್ಕ ಪಕ್ಕದ ರೈತರಿಗೆ ಮಂಜೂರಾತಿಯಾಗಿದೆ ಈ ಕಾಲುವೆಯನ್ನು ಕೊರುಕುಲು ಕಾಲುವೆ ಎಂದು ಕೂಡ ನಕ್ಷೆಯಲ್ಲಿ ನಮೂದಿಸಿದ್ದಾರೆ ಆದರೆ ಪ್ರಭಾವಿಗಳ ಒತ್ತಡಕ್ಕೆ ಮಣಿದು ಅಧಿಕಾರಿಗಳು ರೈತರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ರೈತರ ಮೇಲೆ ದೌರ್ಜನ್ಯ ನಡೆಸಲು ಮುಂದಾಗಿದ್ದಾರೆ ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಿಗಳು ಕೆಲಸದ ದಿನಗಳಲ್ಲಿಯೇ ನಮ್ಮ ಕೆಲಸಗಳಿಗೆ ಸಿಗುವುದು ಅಪರೂಪ ಆದರೆ ಎರಡನೇ ಶನಿವಾರ ರಜಾ ದಿನ ಇದ್ದರೂ ಏಕಾಏಕಿ ತಹಶಿಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ಯಾವುದೇ ರೀತಿಯ ಸರ್ವೆ ಮಾಡದೆ ಹಾಗೂ ಹದ್ದು ಬಸ್ತನ್ನು ಗುರ್ತಿಸದೆ ಕಾಲುವೆಯನ್ನು ಕೊರೆಯಲು ಮುಂದಾಗಿ ನಮ್ಮ ಬೆಳೆಗಳಿಗೆ ತೊಂದರೆ ಕೊಡಲು ಹೊರಟಿದ್ದಾರೆ ಜಮೀನಿಗೆ ಪ್ರವೇಶಿಸುವ ಮುಂಚೆ ಮುಂಗಡವಾಗಿ ನೋಟೀಸ್ ಕೂಡ ಜಾರಿ ಮಾಡಿಲ್ಲ ಸರ್ವೆ ಹಾಗೂ ಹದ್ದು ಬಸ್ತು ಗುರ್ತಿಸದೆ ಜಮೀನಿನಲ್ಲಿದ್ದ ಹಿಪ್ಪು ನೇರಳೆ ಸೊಪ್ಪನ್ನು ಹಾನಿ ಮಾಡಿ ಕೊರಕಲು ಕಾಲುವೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಕೇಳಲು ಹೋದ ರೈತರ ವಿರುದ್ದ ಆವಾಚ್ಯ ಶಬ್ದಗಳಿಂದ ಬೈದು ನಿಮ್ಮ ವಿರುದ್ಧ ಕೇಸು ದಾಖಲಿಸಲಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ರೈತರು ತಮ್ಮ ಅಳಲು ತೋಡಿಕೊಂಡರು.
ತಾಲ್ಲೂಕು ಕಛೇರಿಯ ಅಧಿಕಾರಿಗಳು ಪ್ರಭಾವಿಗಳ ಜಮೀನಿಗೆ ಹೋಗಿ ಬರಲು ನಮ್ಮ ಜಮೀನಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಲು ಹುನ್ನಾರ ಮಾಡುತ್ತಾ ಇದ್ದಾರೆ ಹೊರತು ಕಾನೂನು ಬದ್ಧವಾಗಿ ಕೊರಕಲು ಕಾಲುವೆ ತೆರೆಯುವ ಉದ್ದೇಶ ಅವರಿಗಿಲ್ಲ ಜಮೀನುಗಳ ದಾಖಲಾತಿಗಳನ್ನು ಪರಿಶೀಲಿಸಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು
ಈ ಸಂದರ್ಭದಲ್ಲಿ ಚಿಟ್ನಹಳ್ಳಿ ಗ್ರಾಮ ಪಂಚಾಯತಿ ಸದಸ್ಯೆ ಅನಿತ ಎನ್, ಗ್ರಾಮಸ್ಥರಾದ ಚೌಡರೆಡ್ಡಿ, ಸಿ.ಎಂ ನಾರಾಯಣಸ್ವಾಮಿ, ಶ್ರೀನಿವಾಸ್, ದಿವಾಕರ್, ಮಂಜುನಾಥ್, ಆನಂದ್, ಸಂತೋಷ್, ಪುರುಷೋತ್ತಮ್, ಸೇರಿದಂತೆ ರೈತರು ಇದ್ದರು.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…