ಕೋಲಾರ: ತಾಲೂಕಿನ ಸುಗಟೂರು ಹೋಬಳಿಯ ಚಿಟ್ನಹಳ್ಳಿ ಗ್ರಾಮದ ಸರ್ವೇ ನಂ158 ರಲ್ಲಿನ ಕಲ್ಲೋಣಿ ಕೆರೆಯ ಕಾಲುವೆಯ ಅಕ್ಕ ಪಕ್ಕದ ರೈತರಿಗೆ ನೋಟಿಸ್ ನೀಡದೆ ಕಾಲುವೆ ತೆರೆವಿಗೆ ಅಧಿಕಾರಿಗಳು ಮುಂದಾಗಿ ರೈತರು ಬೆಳೆದ ಬೆಳೆಗಳಿಗೆ ತೊಂದರೆ ಕೊಡಲು ಹೊರಟಿದ್ದಾರೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.
ಶನಿವಾರ ಚಿಟ್ನಹಳ್ಳಿ ಗ್ರಾಮದಲ್ಲಿ ತಹಶಿಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ಕೆರೆಯ ಕಾಲುವೆ ತೆರವಿಗೆ ತೆರಳಿದ್ದ ಸಂದರ್ಭದಲ್ಲಿ ಅಧಿಕಾರಿಗಳ ಮತ್ತು ರೈತರ ಮಧ್ಯೆ ಗಲಾಟೆಯೂ ನಡೆಯಿತು ನಂತರ ರೈತರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಅಧಿಕಾರಿಗಳ ವಿರುದ್ದ ದೂರು ದಾಖಲಿಸಿದರು.
ಈ ಸಂದರ್ಭದಲ್ಲಿ ಚಿಟ್ನಹಳ್ಳಿ ಗ್ರಾಮದ ಸಿ.ಎಂ ರಮೇಶ್ ಮಾತನಾಡಿ ಗ್ರಾಮದಲ್ಲಿ ಹಿಂದೆ ಕರೆಯ ಜಾಗದಲ್ಲಿ ಹಾದುಹೋಗುವ ಕಾಲುವೆಯಿದ್ದು ದಿನ ಕ್ರಮೇಣ ಕೆರೆಯು ಜೀವಾಂಶವನ್ನು ಕಳೆದುಕೊಂಡು ಹಿಡುವಳಿ ನಂಬರ್ಗಳಾಗಿ ಪರಿವರ್ತನೆಯಾಗಿ ಅಕ್ಕ ಪಕ್ಕದ ರೈತರಿಗೆ ಮಂಜೂರಾತಿಯಾಗಿದೆ ಈ ಕಾಲುವೆಯನ್ನು ಕೊರುಕುಲು ಕಾಲುವೆ ಎಂದು ಕೂಡ ನಕ್ಷೆಯಲ್ಲಿ ನಮೂದಿಸಿದ್ದಾರೆ ಆದರೆ ಪ್ರಭಾವಿಗಳ ಒತ್ತಡಕ್ಕೆ ಮಣಿದು ಅಧಿಕಾರಿಗಳು ರೈತರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ರೈತರ ಮೇಲೆ ದೌರ್ಜನ್ಯ ನಡೆಸಲು ಮುಂದಾಗಿದ್ದಾರೆ ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಿಗಳು ಕೆಲಸದ ದಿನಗಳಲ್ಲಿಯೇ ನಮ್ಮ ಕೆಲಸಗಳಿಗೆ ಸಿಗುವುದು ಅಪರೂಪ ಆದರೆ ಎರಡನೇ ಶನಿವಾರ ರಜಾ ದಿನ ಇದ್ದರೂ ಏಕಾಏಕಿ ತಹಶಿಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ಯಾವುದೇ ರೀತಿಯ ಸರ್ವೆ ಮಾಡದೆ ಹಾಗೂ ಹದ್ದು ಬಸ್ತನ್ನು ಗುರ್ತಿಸದೆ ಕಾಲುವೆಯನ್ನು ಕೊರೆಯಲು ಮುಂದಾಗಿ ನಮ್ಮ ಬೆಳೆಗಳಿಗೆ ತೊಂದರೆ ಕೊಡಲು ಹೊರಟಿದ್ದಾರೆ ಜಮೀನಿಗೆ ಪ್ರವೇಶಿಸುವ ಮುಂಚೆ ಮುಂಗಡವಾಗಿ ನೋಟೀಸ್ ಕೂಡ ಜಾರಿ ಮಾಡಿಲ್ಲ ಸರ್ವೆ ಹಾಗೂ ಹದ್ದು ಬಸ್ತು ಗುರ್ತಿಸದೆ ಜಮೀನಿನಲ್ಲಿದ್ದ ಹಿಪ್ಪು ನೇರಳೆ ಸೊಪ್ಪನ್ನು ಹಾನಿ ಮಾಡಿ ಕೊರಕಲು ಕಾಲುವೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಕೇಳಲು ಹೋದ ರೈತರ ವಿರುದ್ದ ಆವಾಚ್ಯ ಶಬ್ದಗಳಿಂದ ಬೈದು ನಿಮ್ಮ ವಿರುದ್ಧ ಕೇಸು ದಾಖಲಿಸಲಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ರೈತರು ತಮ್ಮ ಅಳಲು ತೋಡಿಕೊಂಡರು.
ತಾಲ್ಲೂಕು ಕಛೇರಿಯ ಅಧಿಕಾರಿಗಳು ಪ್ರಭಾವಿಗಳ ಜಮೀನಿಗೆ ಹೋಗಿ ಬರಲು ನಮ್ಮ ಜಮೀನಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಲು ಹುನ್ನಾರ ಮಾಡುತ್ತಾ ಇದ್ದಾರೆ ಹೊರತು ಕಾನೂನು ಬದ್ಧವಾಗಿ ಕೊರಕಲು ಕಾಲುವೆ ತೆರೆಯುವ ಉದ್ದೇಶ ಅವರಿಗಿಲ್ಲ ಜಮೀನುಗಳ ದಾಖಲಾತಿಗಳನ್ನು ಪರಿಶೀಲಿಸಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು
ಈ ಸಂದರ್ಭದಲ್ಲಿ ಚಿಟ್ನಹಳ್ಳಿ ಗ್ರಾಮ ಪಂಚಾಯತಿ ಸದಸ್ಯೆ ಅನಿತ ಎನ್, ಗ್ರಾಮಸ್ಥರಾದ ಚೌಡರೆಡ್ಡಿ, ಸಿ.ಎಂ ನಾರಾಯಣಸ್ವಾಮಿ, ಶ್ರೀನಿವಾಸ್, ದಿವಾಕರ್, ಮಂಜುನಾಥ್, ಆನಂದ್, ಸಂತೋಷ್, ಪುರುಷೋತ್ತಮ್, ಸೇರಿದಂತೆ ರೈತರು ಇದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…