Categories: ಕೋಲಾರ

ನೋಟಿಸ್ ನೀಡದೆ ಕಾಲುವೆ ತೆರೆವು: ಅಧಿಕಾರಿಗಳ ನಡೆಗೆ ರೈತರ ಅಸಮಾಧಾನ

ಕೋಲಾರ: ತಾಲೂಕಿನ ಸುಗಟೂರು ಹೋಬಳಿಯ ಚಿಟ್ನಹಳ್ಳಿ ಗ್ರಾಮದ ಸರ್ವೇ ನಂ158 ರಲ್ಲಿನ ಕಲ್ಲೋಣಿ ಕೆರೆಯ ಕಾಲುವೆಯ ಅಕ್ಕ ಪಕ್ಕದ ರೈತರಿಗೆ ನೋಟಿಸ್ ನೀಡದೆ ಕಾಲುವೆ ತೆರೆವಿಗೆ ಅಧಿಕಾರಿಗಳು ಮುಂದಾಗಿ ರೈತರು ಬೆಳೆದ ಬೆಳೆಗಳಿಗೆ ತೊಂದರೆ ಕೊಡಲು ಹೊರಟಿದ್ದಾರೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.

ಶನಿವಾರ ಚಿಟ್ನಹಳ್ಳಿ ಗ್ರಾಮದಲ್ಲಿ ತಹಶಿಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ಕೆರೆಯ ಕಾಲುವೆ ತೆರವಿಗೆ ತೆರಳಿದ್ದ ಸಂದರ್ಭದಲ್ಲಿ ಅಧಿಕಾರಿಗಳ ಮತ್ತು ರೈತರ ಮಧ್ಯೆ ಗಲಾಟೆಯೂ ನಡೆಯಿತು ನಂತರ ರೈತರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಅಧಿಕಾರಿಗಳ ವಿರುದ್ದ ದೂರು ದಾಖಲಿಸಿದರು.

ಈ ಸಂದರ್ಭದಲ್ಲಿ ಚಿಟ್ನಹಳ್ಳಿ ಗ್ರಾಮದ ಸಿ.ಎಂ ರಮೇಶ್ ಮಾತನಾಡಿ ಗ್ರಾಮದಲ್ಲಿ ಹಿಂದೆ ಕರೆಯ ಜಾಗದಲ್ಲಿ ಹಾದುಹೋಗುವ ಕಾಲುವೆಯಿದ್ದು ದಿನ ಕ್ರಮೇಣ ಕೆರೆಯು ಜೀವಾಂಶವನ್ನು ಕಳೆದುಕೊಂಡು ಹಿಡುವಳಿ ನಂಬರ್‌ಗಳಾಗಿ ಪರಿವರ್ತನೆಯಾಗಿ ಅಕ್ಕ ಪಕ್ಕದ ರೈತರಿಗೆ ಮಂಜೂರಾತಿಯಾಗಿದೆ ಈ ಕಾಲುವೆಯನ್ನು ಕೊರುಕುಲು ಕಾಲುವೆ ಎಂದು ಕೂಡ ನಕ್ಷೆಯಲ್ಲಿ ನಮೂದಿಸಿದ್ದಾರೆ ಆದರೆ ಪ್ರಭಾವಿಗಳ ಒತ್ತಡಕ್ಕೆ ಮಣಿದು ಅಧಿಕಾರಿಗಳು ರೈತರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ರೈತರ ಮೇಲೆ ದೌರ್ಜನ್ಯ ನಡೆಸಲು ಮುಂದಾಗಿದ್ದಾರೆ ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳು ಕೆಲಸದ ದಿನಗಳಲ್ಲಿಯೇ ನಮ್ಮ ಕೆಲಸಗಳಿಗೆ ಸಿಗುವುದು ಅಪರೂಪ ಆದರೆ ಎರಡನೇ ಶನಿವಾರ ರಜಾ ದಿನ ಇದ್ದರೂ ಏಕಾಏಕಿ ತಹಶಿಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ಯಾವುದೇ ರೀತಿಯ ಸರ್ವೆ ಮಾಡದೆ ಹಾಗೂ ಹದ್ದು ಬಸ್ತನ್ನು ಗುರ್ತಿಸದೆ ಕಾಲುವೆಯನ್ನು ಕೊರೆಯಲು ಮುಂದಾಗಿ ನಮ್ಮ ಬೆಳೆಗಳಿಗೆ ತೊಂದರೆ ಕೊಡಲು ಹೊರಟಿದ್ದಾರೆ ಜಮೀನಿಗೆ ಪ್ರವೇಶಿಸುವ ಮುಂಚೆ ಮುಂಗಡವಾಗಿ ನೋಟೀಸ್ ಕೂಡ ಜಾರಿ ಮಾಡಿಲ್ಲ ಸರ್ವೆ ಹಾಗೂ ಹದ್ದು ಬಸ್ತು ಗುರ್ತಿಸದೆ ಜಮೀನಿನಲ್ಲಿದ್ದ ಹಿಪ್ಪು ನೇರಳೆ ಸೊಪ್ಪನ್ನು ಹಾನಿ ಮಾಡಿ ಕೊರಕಲು ಕಾಲುವೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಕೇಳಲು ಹೋದ ರೈತರ ವಿರುದ್ದ ಆವಾಚ್ಯ ಶಬ್ದಗಳಿಂದ ಬೈದು ನಿಮ್ಮ ವಿರುದ್ಧ ಕೇಸು ದಾಖಲಿಸಲಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ರೈತರು ತಮ್ಮ ಅಳಲು ತೋಡಿಕೊಂಡರು.

ತಾಲ್ಲೂಕು ಕಛೇರಿಯ ಅಧಿಕಾರಿಗಳು ಪ್ರಭಾವಿಗಳ ಜಮೀನಿಗೆ ಹೋಗಿ ಬರಲು ನಮ್ಮ ಜಮೀನಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಲು ಹುನ್ನಾರ ಮಾಡುತ್ತಾ ಇದ್ದಾರೆ ಹೊರತು ಕಾನೂನು ಬದ್ಧವಾಗಿ ಕೊರಕಲು ಕಾಲುವೆ ತೆರೆಯುವ ಉದ್ದೇಶ ಅವರಿಗಿಲ್ಲ ಜಮೀನುಗಳ ದಾಖಲಾತಿಗಳನ್ನು ಪರಿಶೀಲಿಸಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಚಿಟ್ನಹಳ್ಳಿ ಗ್ರಾಮ ಪಂಚಾಯತಿ ಸದಸ್ಯೆ ಅನಿತ ಎನ್, ಗ್ರಾಮಸ್ಥರಾದ ಚೌಡರೆಡ್ಡಿ, ಸಿ.ಎಂ ನಾರಾಯಣಸ್ವಾಮಿ, ಶ್ರೀನಿವಾಸ್, ದಿವಾಕರ್, ಮಂಜುನಾಥ್, ಆನಂದ್, ಸಂತೋಷ್, ಪುರುಷೋತ್ತಮ್, ಸೇರಿದಂತೆ ರೈತರು ಇದ್ದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

9 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

10 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

14 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

15 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

20 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

22 hours ago